ಬೆಂಕಿ ಬ್ಯಾಟಿಂಗ್: ದಾಖಲೆಗಳೆಲ್ಲಾ ಉಡೀಸ್… ಇತಿಹಾಸ ನಿರ್ಮಿಸಿದ ಇಬ್ರಾಹಿಂ ಜದ್ರಾನ್

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ (ICC Champions Trophy) ರೋಚಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಿ ಗುಂಪಿನ ಪಂದ್ಯದಲ್ಲಿ ಬುಧವಾರ ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಕಾದಾಟ ನಡೆಸಿವೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಬ್ಯಾಟರ್ ಇಬ್ರಾಹಿಂ ಜದ್ರಾನ್ ( Ibrahim Zadran) ಅವರ ಸ್ಫೋಟಕ ಬ್ಯಾಟಿಂಗ್ ನಡೆಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಜದ್ರಾನ್ 146 ಎಸೆತಗಳಲ್ಲಿ 12 ಬೌಂಡರಿ, 6 ಸಿಕ್ಸರ್ಗಳ ನೆರವಿನಿಂದ 177 ರನ್ಗಳಿಸಿದರು. ಈ 177 ರನ್ಗಳ ನೆರನಿಂದ ಚಾಂಪಿಯನ್ಸ್ ಟ್ರೋಫಿಯಲ್ಲಿ […]
Govinda: ಬಾಲಿವುಡ್ ನಟ ಗೋವಿಂದ ಡಿವೋರ್ಸ್ ಕೇಸ್ಗೆ ಹೊಸ ಟ್ವಿಸ್ಟ್

ಬಾಲಿವುಡ್ ಸ್ಟಾರ್ ನಟ ಗೋವಿಂದ (Govinda) ಮತ್ತು ಅವರ ಪತ್ನಿ ಸುನೀತಾ ಅಹುಜಾ ಅವರ 37 ವರ್ಷಗಳ ದಾಂಪತ್ಯ ಕೊನೆಗೊಳಿಸುವ ವಿಚಾರ ಎಲ್ಲೆಡೆ ವೈರಲ್ ಆಗಿತ್ತು. ನಟ ಗೋವಿಂದ ಮತ್ತು ಪತ್ನಿ ಸುನೀತಾ ಅಹುಜಾ ದಾಂಪತ್ಯದಲ್ಲಿ ಬಿರುಕು ಸುದ್ದಿ ಬಿಟೌನ್ನಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಕುಟುಂಬದ ಆಪ್ತ ಮೂಲವೊಂದು ಸುನೀತಾ ಕೆಲವು ತಿಂಗಳ ಹಿಂದೆಯೇ ಗೋವಿಂದ ಅವರಿಗೆ ಡಿವೋರ್ಸ್ ನೋಟಿಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬಾಲಿವುಡ್ ಸ್ಟಾರ್ ನಟ ಮತ್ತು ಸುನೀತಾ ಅವರು 1987ರ ಮಾರ್ಚ್ನಲ್ಲಿ ಮದುವೆಯಾಗಿದ್ದರು. […]
ಕಾವೇರಿ ಪದವಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ಮನುಷ್ಯ ಕೋಟಿ ಕೋಟಿ ಸಂಪಾದಿಸುವುದು ಸಾಧನೆ ಈ ರೀತಿಯ ಸಂಪಾದನೆ ಆತನಿಗೆ ಸಂತೋಷವನ್ನು ನೀಡುತ್ತದೆ . ಆದರೆ ತೃಪ್ತಿ ಬೇಕಾದರೆ ತಾನು ಸಂಪಾದಿಸಿದ್ದನ್ನು ಇತರ ಸಹಾಯಕ್ಕೆ ದಾನ ನೀಡಿ ಸಮಾಜ ಸೇವೆ ಮಾಡಬೇಕು ಎಂದು ವಿರಾಜಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಣವ್ ಎಂ ಚಿತ್ರ ಬಾನು ಅಭಿಪ್ರಾಯ ವ್ಯಕ್ತಪಡಿಸಿದರು . ಬಿ. ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವೇರಿ ಪದವಿ ಕಾಲೇಜಿನ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ […]
ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ

ವಿರಾಜಪೇಟೆಯ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ […]
ಸ್ಕೂಟರ್ ಹಾಗೂ ಖಾಸಗಿ ಬಸ್ ಡಿಕ್ಕಿ: ಸ್ಕೂಟರ್ ಸವಾರ ಸಾವು

ಸ್ಕೂಟರ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಿದ್ದಲಿಂಗಪುರದ ಬಳಿ ಜರುಗಿದೆ. ಗ್ರಾಮದ ಕೃಷಿಕ ಶಾಂತಪ್ಪ ಎಂಬವರ ಪುತ್ರ ಎಸ್.ಎ.ಅಶೋಕ್ (64) ಮೃತ ದುರ್ದೈವಿ. ಮೃತರು ತಮ್ಮ ಜಮೀನಿನಲ್ಲಿ ನೀರಾವರಿ ಪೈಪ್ ಅಳವಡಿಸಲು ಕಾಲರ್ ತರಲೆಂದು ತಮ್ಮ ಸ್ಕೂಟಿಯಲ್ಲಿ ಹೆಬ್ಬಾಲೆ ಕಡೆ ತೆರಳುವಾಗ ಸಿದ್ದಲಿಂಗಪುರದ ನಾಪಂಡ ಮುತ್ತಪ್ಪ ಅವರ ಮನೆಯ ಮುಂಭಾಗದ ರಸ್ತೆಯಲ್ಲಿ ಘಟನೆ ಜರುಗಿದೆ. ಮೃತರು ಇಬ್ಬರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಕುಶಾಲನಗರ ಪೊಲೀಸರು […]
ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಆಟೋ ಚಾಲಕ!

ಆಟೋ ಚಾಲಕ ಮಂಜುನಾಥ್ (50) ಅವರು ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ಸಿದ್ದಲಿಂಗಪುರ ನಿವಾಸಿ, ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ವಾಸವಿದ್ದ ಅವರು ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು, ಆದರೆ ಬೆಳಗ್ಗೆ ಇತರೆ ಆಟೋದವರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ. ಕಳೆದ 15 ವರ್ಷಕ್ಕೂ ಹೆಚ್ಚು ಕಾಲ ಇದೆ ಆಟೋ ಚಾಲಕ ವೃತ್ತಿಯಲ್ಲಿ ಇದ್ದರು. ಈ […]
ಕೊಡಗು ವಿಶ್ವವಿದ್ಯಾಲಯ ಮುಚ್ಚುವ ನಿರ್ಧಾರಕ್ಕೆ ಕೆ. ಎಂ. ಎ. ತೀವ್ರ ವಿರೋಧ

ಕಳೆದ ಎರಡು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿರುವ ಕೊಡಗು ವಿಶ್ವವಿದ್ಯಾಲಯವನ್ನು (Kodagu University) ಮುಚ್ಚುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ತೆಗೆದುಕೊಂಡಿರುವ ಕುರಿತು ಜಿಲ್ಲಾಧ್ಯಂತ ಜನರಿಗೆ ಆತಂಕ ಮೂಡಿದೆ. ಕೊಡಗು ವಿಶ್ವವಿದ್ಯಾಲಯವನ್ನು ಸ್ಥಗಿತಗೊಳಿಸುವ ಅಥವಾ ಬೇರೆ ವಿ.ವಿ.ಯೊಂದಿಗೆ ವಿಲೀನಗೊಳಿಸುವ ಪ್ರಸ್ತಾಪ ಸರಕಾರದ ಮುಂದಿದ್ದರೆ ತಕ್ಷಣ ಅದನ್ನು ಕೈ ಬಿಟ್ಟು ಕೊಡಗು ವಿಶ್ವವಿದ್ಯಾಲಯವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಬೇಕೆಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ), ಒಂದು ವೇಳೆ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಿದರೆ ಅದು ಕೊಡಗು (Kodagu) ಜಿಲ್ಲೆಗೆ ಮಾಡಿದ […]
ಕೊಡಗು ವಿವಿ ಮುಚ್ಚುವ ನಿರ್ಧಾರಕ್ಕೆ FMC ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಖಂಡನೆ

ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಡಗು ಜಿಲ್ಲೆಯಲ್ಲಿ ತನ್ನದೇ ಆದ ವಿಶ್ವವಿದ್ಯಾಲಯವನ್ನು ಹಲವು ವರ್ಷಗಳ ನಂತರ ಪಡೆದು ಅದು ಬೆಳವಣಿಗೆಯ ಗತಿಯಲ್ಲಿ ಫಲಾನುಭವಿಗಳಿಗೆ ತಲುಪುತ್ತಿರುವ ಸಮಯದಲ್ಲಿ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ, ವಿಲೀನಗೊಳಿಸುವ ಪ್ರಸ್ತಾವನೆಯನ್ನು ಸರಕಾರವು ಮುಂದಿಟ್ಟಿರುವುದನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ, ಕಾರ್ಯಪ್ಪ ಹಳೇ ವಿದ್ಯಾರ್ಥಿ ಸಂಘ ಉಗ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಗತ್ತಿನ ಯಾವುದೇ ದೇಶದಲ್ಲಿ ಹಣಕಾಸಿನ ಕ್ಷುಲ್ಲಕ ಕಾರಣ ನೀಡಿ ಸರ್ಕಾರಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿದ ನಿದರ್ಶನಗಳು […]
ಯುವಜನತೆಗೆ ಗುಡ್ ನ್ಯೂಸ್: ಫೆ.24 ರಂದು ಕೊಡಗಿನಲ್ಲಿ ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್ ಕುಶಾಲನಗರ, ಪೆಂಟಾಟೆಕ್ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ […]
Coffe: ಕಾಫಿ ಉತ್ಪಾದನೆಯನ್ನು ಹೆಚ್ಚಿಸಲು ಸಿಂಪಲ್ ಟಿಪ್ಸ್

ಗುಡ್ಡಗಾಡು ಪ್ರದೇಶಗಳಲ್ಲಿ ಕಾಫಿ ತೋಟಗಳು ಸಾಮಾನ್ಯ ದೃಶ್ಯ. ಭಾರತದಲ್ಲಿ ಕಾಫಿ ಮತ್ತು ಟೀ ಭಾರತದಲ್ಲಿ ಅತಿ ಜನಪ್ರಿಯ ಪಾನೀಯಗಳು. ನಮ್ಮ ದೇಶ ಸಾಂಪ್ರದಾಯಿಕವಾಗಿ ಟೀ ರಫ್ತಿಗೆ ಬಹಳ ಪ್ರಸಿದ್ಧಿಯಾಗಿತ್ತು. ಆದರೆ ಈಗ ದೇಶ ಜಗತ್ತಿಗೆ ಕಾಫಿ ಕುಡಿಸುತ್ತಿದೆ. 2024ರಲ್ಲಿ ಗಣನೀಯ ಪ್ರಮಾಣದಲ್ಲಿ ದೇಶದಲ್ಲಿ ಕಾಫಿ ರಫ್ತು ಹೆಚ್ಚಾಗಿದೆ. ಈಗ ಕಾಫಿಗೆ ಭಾರೀ ಬೇಡಿಕೆ ಇದ್ದು, ಬೆಲೆಯು ಗಗನಕ್ಕೇರಿದೆ. ಇದರಿಂದ ಕಾಫಿ ಬೆಳಗಾರರು ಫುಲ್ ಖುಷ್ ಆಗಿದ್ದಾರೆ. ಕಾಫಿ ಇಳುವರಿಯನ್ನು ಹೆಚ್ಚಿಸಲು ನಿಮಗೆ ಇಲ್ಲಿದೆ ಸಖತ್ ಟಿಪ್ಸ್. ಉತ್ತಮ […]