ವಿಶ್ವ ಹಿಂದು ಪರಿಷತ್‌ ಕುಶಾಲನಗರ ಅಧ್ಯಕ್ಷರಾಗಿ ವಸಂತ ರೈ ಆಯ್ಕೆ

ಕುಶಾಲಗರ : ವಿಶ್ವ ಹಿಂದು ಪರಿಷತ್‌ ಕುಶಾಲನಗರ ಅಧ್ಯಕ್ಷರಾಗಿ ಉದ್ಯಮಿ ವಸಂತ್‌ ರೈ ಆಯ್ಕೆಯಾಗಿದ್ದಾರೆ. ಕುಶಾಲನಗರದ ವಾಸವಿ ಸಭಾಂಗಣದಲ್ಲಿ ನಡೆದ ವಿಎಚ್‌ಪಿ ಮುಖಂಡರ ಸಭೆಯಲ್ಲಿ ನೂತನ ನಗರಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಸಂಘಟನೆಯ ರಾಜ್ಯ ಕಾರ್ಯದರ್ಶಿ ಶರಣ್‌ ಪಂಪ್ವೆಲ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ನೂತನವಾಗಿ ಆಯ್ಕೆಯಾದ ವಸಂತ್‌ ರೈ ಅವರು ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್‌ನಲ್ಲಿ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.

ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ನೂತನ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.‌ ಪೊನ್ನಣ್ಣ

ಸಂಪಾಜೆ : ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಡಾವು ಬಳಿ ದುಗ್ಗಳ ಭಾಗದಲ್ಲಿ ೫ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಇತ್ತೀಚೆಗೆ ಉದ್ಘಾಟಿಸಿದರು. ಅದೇ ರೀತಿ ಬಂಟೋಡಿಯಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು. ಗ್ರಾಮ ವ್ಯಾಪ್ತಿಯ ಮುಖಂಡರು, ಸಾರ್ವಜನಿಕರು ಈ ಸಂದರ್ಭ ಉಪಸ್ಥಿತರಿದ್ದರು.

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು : ಶಾಸಕ ಎ.ಎಸ್.ಪೊನ್ನಣ್ಣ

ಮಡಿಕೇರಿ : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು. ಅರಣ್ಯ ಇಲಾಖೆ ಅಧಿಕಾರಿಗಳು […]

ರಸ್ತೆ ಸಮಸ್ಯೆಯಿಂದ ಅಪಘಾತ ಸಂಭವಿಸಿದರೆ ಅಧಿಕಾರಿಗಳ ವಿರುದ್ಧ ಸುಮೊಟೋ ಪ್ರಕರಣ – ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಎಚ್ಚರಿಕೆ

ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‌ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟಿಗಳನ್ನು ಕಡಿಯುವುದು, ರಸ್ತೆ […]

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಚ್‌.ಎಸ್.‌ ಚೇತನ್‌ ಅವರಿಗೆ ಅದ್ಧೂರಿ ಸ್ವಾಗತ..!

ಕುಶಾಲನಗರ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಕೊಡಗಿನ ಎಚ್‌.ಎಸ್.‌ ಚೇತನ್‌ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಬಳಿಕ ಜಿಲ್ಲೆಗೆ ಆಗಮಿಸಿದ ಅವರನ್ನು ನೂರಾರು ಬೆಂಬಲಿಗರು, ಬಂಧುಗಳು, ಸಹೋದ್ಯೋಗಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಕುಶಾಲನಗರಕ್ಕೆ ಆಗಮಿಸಿದ ವೇಳೆ ಅಲ್ಲಿ ಸೇರಿದ್ದ ನೂರಾರು ಮಂದಿ ಹೂವಿನ ಹಾರ ಹಾಕಿ ಅಭಿನಂದಿಸಿ ಸ್ವಾಗತಿಸಿದರು. ಕುಶಾಲನಗರ ಬಳಿಯ ಹೇರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಚೇತನ್‌ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಗೊಳಿಸುವಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದವರು. ಇದೀಗ ರಾಜ್ಯಮಟ್ಟದ […]

ಕಾರ್ಗಿಲ್‌ ವಿಜಯ್‌ ದಿವಸ್‌ – ಹುತಾತ್ಮ ಯೋಧರಿಗೆ ಮಡಿಕೇರಿಯಲ್ಲಿ ಭಾವಪೂರ್ಣ ಗೌರವಾರ್ಪಣೆ

ಕಾರ್ಗಿಲ್‌ ವಿಜಯ್‌ ದಿವಸ್‌ ಅಂಗವಾಗಿ ಮಡಿಕೇರಿಯಲ್ಲಿ ವಿಶೇಷ ಕಾರ್ಯಕ್ರಮ ಜರುಗಿತು. ವಿವಿಧ ಸಂಘ ಸಂಸ್ಥೆಗಳ ಸಹಕಾರದೊಮದಿಗೆ ಕೊಡಗು ಪತ್ರಕರ್ತರ ಸಂಘ ಗೌಡ ಸಮಾಜ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿದೆಡೆಯ ಮಂದಿ ಪಾಲ್ಗೊಂಡು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. 75 ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಮರ್ ಜವಾನ್ ಸ್ಮಾರಕದ ಪ್ರತಿರೂಪಕ್ಕೆ ಪುಪ್ಪಾರ್ಚನೆ ಮಾಡಿ, ಹಣತೆ ಬೆಳಗಿ ಯೋಧರಿಗೆ ಭಾವಪೂಣ೯ ಗೌರವ ನಮನ ಸಲ್ಲಿಸಿದರು. ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪ ಅವರ ಪತ್ನಿ ಪೆಮ್ಮಂಡ ಶೋಭಾ ಕಾವೇರಪ್ಪ […]

ಕೊಡಗು ಗೌಡ ಸಮಾಜದ ಪ್ರಮುಖರಿಂದ ಕಂದಾಯ ಸಚಿವರ ಭೇಟಿ – ಜಮೀನು ಮಂಜೂರಾತಿಗೆ ಮನವಿ

Kodagu Gowda community

ಕೊಡಗು ಗೌಡ (Kodagu Gowda) ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ನೇತೃತ್ವದಲ್ಲಿ ಗೌಡ ಸಮುದಾಯದ ನಿಯೋಗ ಕಂದಾಯ ಸಚಿವ ಕೃಷ್ಣ ಬೈರೇಗೌಡರನ್ನು ಭೇಟಿ ಮಾಡಿ ಚರ್ಚಿಸಿತು. ಗೌಡ ಸಮಾಜಕ್ಕೆ ಭೂಮಿ ಮಂಜೂರು ಮಾಡುವಂತೆ ಈ ವೇಳೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ ಉಪಸ್ಥಿತರಿದ್ದರು. ನಿಯೋಗದಲ್ಲಿ ಕೊಲ್ಯದ ಗಿರೀಶ್, ಕುಯ್ಯಮುಡಿ ವಸಂತ, ದಂಬೆಕೋಡಿ ಆನಂದ, ಹುದೇರಿ ರಾಜೇಂದ್ರ, ಪೊನ್ನಚ್ಚನ ಮಧು, ಅಮೆ ಸೀತಾರಾಮ ಹಾಗೂ ಇನ್ನಿತರ ಪ್ರಮುಖರು ಇದ್ದರು.  

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಪತ್ರಿಕಾ ಭವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಅಭಿಪ್ರಾಯ ಪಟ್ಟರು. ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ. ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ. […]

ಕಣಿವೆಯಲ್ಲಿ ಅಪಾಯಮಟ್ಟದಲ್ಲಿ ಹರಿಯುತ್ತಿರುವ ಕಾವೇರಿ – ತೂಗು ಸೇತುವೆ ಮೇಲೆ ಪ್ರವಾಸಿಗರ ಪ್ರವೇಶ ನಿರ್ಬಂಧ..!

ಕುಶಾಲನಗರ : ಜಿಲ್ಲಾದ್ಯಂತ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕಣಿವೆ ಬಳಿ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಅಪಾಯಮಟ್ಟ ತಲುಪಿದೆ. ಹೀಗಾಗಿ ತೂಗುಸೇತುವೆ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಈ ಪ್ರದೇಶವನ್ನು ಪರಿಶೀಲಿಸಿ ತಹಸೀಲ್ದಾರ್ ಕಿರಣ್ ಗೌರಯ್ಯ, ತೂಗು ಸೇತುವೆ ಪ್ರವೇಶ ದ್ವಾರವನ್ನು ಬಂದ್‌ ಮಾಡಿಸಿದ್ದಾರೆ. ಸೇತುವೆ ಮೇಲೆ ಸಾರ್ವಜನಿಕರು ಅಪಾಯವನ್ನೂ ಲೆಕ್ಕಿಸದೆ ಓಡಾಡುತ್ತಾ, ಸೆಲ್ಫಿ ತೆಗೆದುಕೊಳ್ಳುತ್ತಾ ಇದ್ದರು. ಈ ಬಗ್ಗೆ ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದನ್ನು ಗಂಭೀರವಾಗಿ ತೆಗೆದುಕೊಂಡ ಅಧಿಕಾರಿಗಳು, […]

KMA: ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಾಯೋಜಕರ ನೆರವಿನಿಂದ ನೀಡಲಾಗುವ ಈ ಸಾಲಿನ ಕೆ.ಎಂ.ಎ. ವಿಶೇಷ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್. ಸಿ. ಪರೀಕ್ಷೆಯ ‘ಕನ್ನಡ ವಿಷಯ’ದಲ್ಲಿ ಇಡೀ ಕೊಡಗು ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ “ಜಿಲ್ಲೆಯ ಸರಕಾರಿ ಶಾಲೆಯ” ಇಬ್ಬರು ವಿದ್ಯಾರ್ಥಿಗಳಿಗೆ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರು ತಮ್ಮ ದಿವಂಗತ ತಂದೆ ದುದ್ದಿಯಂಡ ಹುಸೈನಾರ್ […]