ಬಜರಂಗದಳ ಜಿಲ್ಲಾ ಸಂಯೋಜಕ ಸ್ಥಾನಕ್ಕೆ ಪ್ರವೀಣ್ ರಾಜೀನಾಮೆ – ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವುದಿಲ್ಲ ಎಂದ ಯುವ ನಾಯಕ..!

Coorg Buzz ಸಿದ್ದಾಪುರ : ಬಜರಂಗದಳದ ಜಿಲ್ಲಾ ಸಂಯೋಜಕ ಸ್ಥಾನಕ್ಕೆ ಪ್ರವೀಣ್ ಸಿದ್ದಾಪುರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ನನ್ನ ವೈಯುಕ್ತಿಕ ಕಾರಣಗಳಿಂದಾಗಿ ಕಳೆದ ಕೆಲವು ಸಮಯಗಳಿಂದ ಬಜರಂಗದಳದ ಕೊಡಗು ಜಿಲ್ಲಾ ಸಂಯೋಜಕ ಜವಾಬ್ದಾರಿಯನ್ನು ನನಗೆ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಡಗು ಜಿಲ್ಲಾ ಬಜರಂಗದಳದ ಜವಾಬ್ದಾರಿಯಿಂದ ಸ್ವಯಂ ಮುಕ್ತಿಗೊಳ್ಳುತ್ತಿದ್ದೇನೆ. ಮುಂದೆ ಸಾಮಾಜಿಕ ಕೆಲಸ ಮಾಡುತ್ತೇನೆ ಹೊರತು ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವುದಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷ ಹಾಗೂ ಸಂಘಟನೆಯ ನಾಯಕರ […]
ಕೊಡಗಿನಲ್ಲಿ ಜೂನ್ 12ರಂದು ಭಾರಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ – ಮಳೆಗೂ ಮುನ್ನವೇ ಶಾಲೆ, ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!

ಮಡಿಕೇರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾದ ಲಕ್ಷಣ ಗೋಚರಿಸುತ್ತಿದ್ದು, ನಾಳೆಯಿಂದ(ಜೂ.೧೨) ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಾ ಅಲರ್ಟ್ ಆಗಿದೆ. ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ. ವೆಂಕಟ್ ರಾಜಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೇ ಕೊನೇ ವಾರದಲ್ಲಿ […]
ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮುಂದುವರಿಕೆ – ಬದಲಾವಣೆಗೆ ಆಸಕ್ತಿ ತೋರದ ವರಿಷ್ಠರು..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿಯ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಪುನಾರಾಯ್ಕೆಯಾಗಿದ್ದಾರೆ. ಎರಡನೆ ಹಂತದಲ್ಲಿ ಹತ್ತು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಕೊಡಗು ಜಿಲ್ಲಾಧ್ಯಕ್ಷ ಸ್ಥಾನವನ್ನು ರವಿ ಕಾಳಪ್ಪ ಎರಡನೇ ಅವಧಿಗೆ ಮುಂದುವರೆಸಲಿದ್ದಾರೆ. ಈ ಬಗ್ಗೆ ಬಿಜೆಪಿಯ ಪ್ರಸ್ತುತ ಸಂಘಟನಾ ಪರ್ವದ ಚುನಾವಣಾಧಿಕಾರಿಯಾದ ಕ್ಯಾ. ಗಣೇಶ್ ಕಾರ್ಣಿಕ್ ಅವರು ಪ್ರಕಟಣೆ ಹೊರಡಿಸಿದ್ದಾರೆ.
ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನುಡಿದರು. ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್ …

ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 788.36 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 444.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.33 ಮಿ.ಮೀ. ಕಳೆದ ವರ್ಷ ಇದೇ ದಿನ 29.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1171.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಮೌನ ಮುರಿದ ರಾಹುಲ್ ದ್ರಾವಿಡ್: ಹೇಳಿದ್ದೇನು?

ಕ್ರಿಕೆಟ್ ಲೋಕದ ಲೆಜೆಂಡರಿ ಆಟಗಾರ ರಾಹುಲ್ ದ್ರಾವಿಡ್ (Rahul Dravid) ಅವರು ಕೊನೆಗೂ ಮೌನ ಮುರಿದು ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ನಾನು ಕೂಡ ಬೆಂಗಳೂರಿನವನು ಬೆಂಗಳೂರಿನಲ್ಲಿರುವ ಜನರಿಗೆ ಕ್ರೀಡೆಯ ಬಗ್ಗೆ ಪ್ರೀತಿ ಇದೆ. ಜನರು ಕ್ರಿಕೆಟ್ ಮಾತ್ರವಲ್ಲ ಎಲ್ಲಾ ಕ್ರೀಡೆಯನ್ನು ಪ್ರೀತಿಸುತ್ತಾರೆ. ಫುಟ್ಬಾಲ್ ಇರಲ್ಲಿ ಕಬಡ್ಡಿ ಇರಲಿ ಎಲ್ಲಾ ತಂಡವನ್ನು ಜನರು ಫಾಲೋ ಮಾಡುತ್ತಾರೆ . ಈ ಬಾರಿ ಕಪ್ ಗೆದ್ದು 18 ವರ್ಷಗಳ ನಂತರ ಇದರ ಸೆಲೆಬ್ರೇಶನ್ಗಾಗಿ ತಂಡ ಬೆಂಗಳೂರಿಗೆ ಬಂದಿತ್ತು ಈ ವೇಳೆ […]
ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ನಲ್ಲಿ ಪದಕ ಬಾಚಿದ ಕೊಡಗಿನ ಜ್ಯೋತಿ

ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ (Badminton) ಆಟಗಾರ್ತಿ ಕೊಡಗಿನ ತಾತಪಂಡ ಜ್ಯೋತಿ (Jyothi) ಸೋಮಯ್ಯ ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಟೂರ್ನಿಯಲ್ಲಿ ಪದಕಗಳನ್ನು ಬಾಚಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ನಲ್ಲಿ ಮಹಿಳೆಯರ ಸಿಂಗಲ್ಸಿನಲ್ಲಿ ಚಿನ್ನದ ಪದಕ, ಮಹಿಳೆಯರ ಡಬಲ್ಸಿನಲ್ಲಿ ಬೆಳ್ಳಿಯ ಪದಕ ಮತ್ತು ಮಿಕ್ಸ್ ಡಬಲ್ಸಿನಲ್ಲಿ ಕಂಚಿನ ಪದಕ ಬಾಚಿಕೊಂಡಿದ್ದಾರೆ.
ದಿ ಕೂರ್ಗ್ ಡಿಸ್ಟ್ರಿಕ್ಟ್ ಮುಸ್ಲಿಂ ಅಸೋಸಿಯೇಷನ್ ಸಭೆ : ಸದಸ್ಯತ್ವ ಹೆಚ್ಚಿಸಲು, ಸಾಮಾಜಿಕ ಕಳಕಳಿಯ ಕಾರ್ಯಕ್ರಮ ರೂಪಿಸಲು ನಿರ್ಧಾರ
ಮಡಿಕೇರಿ : ದಿ ಕೂರ್ಗ್ ಡಿಸ್ಟ್ರಿಕ್ಟ್ ಮುಸ್ಲಿಂ ಅಸೋಸಿಯೇಷನ್ ನ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿ ಸಂಘಟನೆಯನ್ನು ಸದೃಢಗೊಳಿಸಲಾಗುವುದು ಮತ್ತು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅಸೋಸಿಯೇಷನ್ ನ ಉಪಾಧ್ಯಕ್ಷ ಎರ್ಮು ಹಾಜಿ ತಿಳಿಸಿದ್ದಾರೆ. ನಗರದ ಕೂರ್ಗ್ ಕಮ್ಯೂನಿಟಿ ಹಾಲ್ ನಲ್ಲಿ ನಡೆದ ಅಸೋಸಿಯೇಷನ್ ನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘದ ಅಭಿವೃದ್ಧಿಗೆ ಸದಸ್ಯರ ಸಂಖ್ಯೆ ಹೆಚ್ಚಾಗಬೇಕಾಗಿದೆ, ಸಮುದಾಯದ ವಿವಿಧ ಸಂಘ-ಸAಸ್ಥೆಗಳ ಪ್ರಮುಖರೊಂದಿಗೆ ಚರ್ಚಿಸಿ ಸದಸ್ಯತ್ವವನ್ನು ಹೆಚ್ಚಿಸುವ ಕುರಿತು ಸಿದ್ದಾಪುರದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. […]
ಜೂ.11 ರಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಕೊಡಗು ಜಿಲ್ಲಾ ಪ್ರವಾಸ
ಮಡಿಕೇರಿ : ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಜೂನ್, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜೂನ್, 11 ರಂದು ಬೆಳಗ್ಗೆ 10.45 ಗಂಟೆಗೆ ಕುಶಾಲನಗರದ ಇಂದಿರಾ ಕ್ಯಾಂಟೀನ್ ಭೇಟಿ ಹಾಗೂ ಪರಿಶೀಲನೆ ಮಾಡಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ನಗರಾಭಿವೃದ್ದಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ‘ನೂತನ ಪುರಸಭಾ ಕಚೇರಿ ಕಟ್ಟಡ’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12.45 ಗಂಟೆಗೆ ಕೊಡಗು ಜಿಲ್ಲೆಯ […]
ಜೂ.11 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ – ನೀವೂ ದೂರು ಸಲ್ಲಿಸಹುದು..!?
ಮಡಿಕೇರಿ : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ(lokayukta) ಅಧಿಕಾರಿಗಳು ಜೂನ್ 11 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರತದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು […]