ಮಕ್ಕಳಿಗೆ ಐಸ್ಕ್ರೀಮ್, ಕೋಲ್ಡ್ ಡ್ರಿಂಕ್ಸ್ ಕೊಡ್ತಿದ್ದೀರಾ? ಅದರ ಬದಲು ಈ ಆರೋಗ್ಯಕರ ತಿನಿಸುಗಳನ್ನು ಟ್ರೈ ಮಾಡಿ!

ಬೇಸಿಗೆಯ ತಾಪಮಾನವು ಹೆಚ್ಚಾಗುತ್ತಿರುವ ಪ್ರಸ್ತುತ ದಿನಗಳಲ್ಲಿ, ಬಿಸಿಲಿನ ಝಳಕ್ಕೆ ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಶಾಲೆಯಲ್ಲಿ ಅಥವಾ ಮನೆಯಲ್ಲಿರುವ ಮಕ್ಕಳನ್ನು ಶಾಖದ ಹೊಡೆತದಿಂದ ರಕ್ಷಿಸಲು, ಪೋಷಕರು ಸಾಮಾನ್ಯವಾಗಿ ಐಸ್ ಕ್ರೀಮ್, ತಂಪು ಪಾನೀಯಗಳು ಮತ್ತು ಸಕ್ಕರೆ ಭರಿತ ಮಿಲ್ಕ್ಶೇಕ್ಗಳನ್ನು ನೀಡುತ್ತಾರೆ. ಆದರೆ ಇವುಗಳಿಂದ ನಿರ್ಜಲೀಕರಣ, ಗಂಟಲು ನೋವು ಹಾಗೂ ಆಯಾಸದಂತಹ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ತಜ್ಞರ ಎಚ್ಚರಿಕೆ ಮತ್ತು ಅಪಾಯಗಳು ಮಕ್ಕಳ ತಜ್ಞೆ ಡಾ. ಪ್ರೀತಿ ಗಡ್ಡದ್ ಅವರ ಪ್ರಕಾರ, ಬೇಸಿಗೆಯಲ್ಲಿ ಮಕ್ಕಳು ಇಷ್ಟಪಡುವ […]
Paytm ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ರದ್ದು ಮಾಡಿದ RBI

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರದಂದು ಒಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಈ ನಿರ್ಧಾರದ ಅನ್ವಯ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಇನ್ನು ಮುಂದೆ ಈ ಸಂಸ್ಥೆಯು ಯಾವುದೇ ಬ್ಯಾಂಕಿಂಗ್ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಆರ್ಬಿಐ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸುತ್ತಾ ಬಂದಿತ್ತು. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ರ ಸೆಕ್ಷನ್ 22(4) ರ […]
ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹತ್ವದ ಸಭೆ

ಪ್ರವಾಸಿಗರ ಸುರಕ್ಷತೆ ಹಾಗೂ ನಿಯಮಗಳ ಪಾಲನೆಗೆ ಒತ್ತು ನೀಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೋಂಸ್ಟೇ, ಹೋಟೆಲ್ ಹಾಗೂ ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ ಹೋಂಸ್ಟೇ ಮತ್ತು ಹೋಟೆಲ್ಗಳ ಕಡ್ಡಾಯ ನೋಂದಣಿ, ಪ್ರವಾಸಿಗರ ಸುರಕ್ಷತಾ ಕ್ರಮಗಳು, ಸಿಬ್ಬಂದಿಯ ಹಿನ್ನೆಲೆ (ಗುಣನಡತೆ) ಪರಿಶೀಲನೆ ಹಾಗೂ ವಿದೇಶಿ ಪ್ರವಾಸಿಗರ ಕಡ್ಡಾಯ ನೋಂದಣಿ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ […]
SSLC Result: ಹೆಗ್ಗಳ ಸರ್ಕಾರಿ ಶಾಲೆಗೆ 100% ಫಲಿತಾಂಶ

ವಿರಾಜಪೇಟೆ: ಹೆಗ್ಗಳ (Heggala) ಗ್ರಾಮದ ಸರ್ಕಾರಿ ಪ್ರೌಢ ಶಾಲೆಯು ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 100% ಫಲಿತಾಂಶವನ್ನು ಪಡೆಯುದರ ಮೂಲಕ ಸಾಧನೆಯನ್ನು ಮಾಡಿದೆ. ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಡಿಸ್ಟಿಂಕ್ಷನ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು, ಪ್ರಥಮ ಸ್ಥಾನದಲ್ಲಿ 19 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಸ್ಥಾನದಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿನಿ ಪ್ರೇಕ್ಷಾ ಬಿ. ಹೆಚ್.558 ಅಂಕಗಳನ್ನು ಪಡೆದುಕೊಂಡು 89.28% ಮೂಲಕ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಎಂದು ಮುಖ್ಯೋಪಾಧ್ಯಾಯರಾದ ಸುನೀತಾ ರವರು ಮಾಹಿತಿ ನೀಡಿದ್ದಾರೆ.
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಏಪ್ರಿಲ್, 25 ರಂದು (ನಾಳೆ) ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೋಮವಾರಪೇಟೆ ಕುಸುಬೂರು, ಕಾರೆಕೊಪ್ಪ, ಸಜ್ಜಳ್ಳಿ, ಯಡವಾರೆ, ಹೊಸತೋಟ, ಐಗೂರು, ಗರಗಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಭೂಮಿ ಮತ್ತು ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾ. ಎಸ್. ನಟರಾಜ

ಪ್ರಕೃತಿ ಮತ್ತು ಭೂಮಿಯ ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿಯು ಭೂಮಿಯ ಮೇಲಿರುವ ಸರ್ವರ ಮೇಲಿದೆ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಎಸ್. ನಟರಾಜ ಅಭಿಪ್ರಾಯ ವ್ಯಕ್ತಪಡಿಸಿದರು . ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಅರಣ್ಯ ಇಲಾಖೆ, ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ವಿರಾಜಪೇಟೆ ಇವರ ಸಂಯುಕ್ತ ಆಶಯದಲ್ಲಿ ಬುಧವಾರ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರನ್ನು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. […]
ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತಿನಿಂದ ಹೊಸ ಭಾಷ್ಯ: ಸಾಧಕರಿಗೆ ಗೌರವಾರ್ಪಣೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸಾಧಕರಿಗೆ ಪ್ರಶಸ್ತಿಯನ್ನು ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಮಾಹಿತಿ ನೀಡಿದರು . ವಿರಾಜಪೇಟೆ ಪತ್ರಕರ್ತರ ವೇದಿಕೆಯಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ನೌಕರರ ಒತ್ತಡವನ್ನು ನಿವಾರಿಸಿ ಅವರಲ್ಲಿರುವ ಮನೋರಂಜನೆಯ ಕೊರತೆಯನ್ನು ಹೋಗಲಾಡಿಸುವುದರೊಂದಿಗೆ ಕನ್ನಡ ನಾಡು, ನುಡಿ ಸಾಹಿತ್ಯ ,ಕಲೆ […]
ನಕ್ಸಲ್ ನಿಗ್ರಹ ಪಡೆ ವತಿಯಿಂದ ಬುಡಕಟ್ಟು ಜನಾಂಗದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿನ ವಾಲ್ಮೀಕಿ ಭವನದಲ್ಲಿ ನಕ್ಸಲ್ ನಿಗ್ರಹ ಪಡೆ ವತಿಯಿಂದ ಅತ್ಯಂತ ವ್ಯವಸ್ಥಿತವಾದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶಗಳ ಬುಡಕಟ್ಟು ಜನಾಂಗದವರ ಆರೋಗ್ಯ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವು ಜನರ ಅಭೂತಪೂರ್ವ ಸ್ಪಂದನೆಯೊAದಿಗೆ ಯಶಸ್ವಿಯಾಯಿತು. ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಅವರ ಸೂಕ್ತ ಮಾರ್ಗದರ್ಶನದಂತೆ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕು.ಬಿಂದು ಮಣಿ ಆರ್.ಎನ್, ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, […]
ಸೌತ್ ಇಂಡಿಯನ್ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಭವಿತ್ ರೈ

ಮಡಿಕೇರಿ : ಕೇರಳದ ತಿರುವನಂತಪುರದಲ್ಲಿ ನಡೆದ ಸೌತ್ ಇಂಡಿಯನ್ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕೊಡಗಿನ ಭವಿತ್ ರೈ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕಟಾಸ್ನಲ್ಲಿ ಚಿನ್ನ ಹಾಗೂ ಕುಮಟಿಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈತ ಚೆರಂಬಾಣೆಯ ನಿವಾಸಿ ಪ್ರದೀಪ್ ರೈ ಮತ್ತು ಪ್ರಮಿಳ ರೈ ಯವರ ಪುತ್ರ.
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ವಿರಾಜಪೇಟೆ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ 33 ಕೆವಿ ಸಿದ್ದಾಪುರ ಮಾರ್ಗದಲ್ಲಿ ಏಪ್ರಿಲ್, 18 ರಂದು (ನಾಳೆ) ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ, ಸಿದ್ದಾಪುರ, ಕರಡಿಗೋಡು, ಗುಹ್ಯ, ಮಾಲ್ದಾರೆ, ನೆಲ್ಲಿಹುದಿಕೇರಿ, ಇಂಜಿಲಗೆರೆ, ಆರೆಂಜ್ಕೌಂಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.