ಪುಲ್ವಾಮಾ ದಾಳಿಯ ಕಹಿ ನೆನಪು – ಮಡಿಕೇರಿಯಲ್ಲಿ ವಿಭಿನ್ನವಾಗಿ ಹುತಾತ್ಮ ಯೋಧರ ಸ್ಮರಣೆ

ಮಡಿಕೇರಿ : ಪುಲ್ವಾಮಾ ದಾಳಿಯ ಕಹಿ ನೆನಪನ್ನು ಮಡಿಕೇರಿಯಲ್ಲಿ ವಿಭಿನ್ನವಾಗಿ ಸ್ಮರಿಸಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶಾ ನಗರದ ಜನರಲ್‌ ತಿಮ್ಮಯ್ಯ ವೃತ್ತದ ಮೈಸೂರು ರಸ್ತೆಯ ಪ್ರಯಾಣಿಕರ ತಂಗುದಾಣಕ್ಕೆ ಬಣ್ಣ ಬಳಿದು ಚಂದಗಾಣಿಸಿದ್ದರು. ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರವನ್ನು ತಂಗುದಾಣದ ಆವರಣದಲ್ಲಿಟ್ಟು ದೀಪ ಬೆಳಗಿ, ಪುಷ್ಪಾರ್ಚನೆ ಮಾಡಿ ಪ್ರಮುಖರು ಹಾಗೂ ಸಾರ್ವಜನಿಕರು ನಮಿಸಿದರು. ಈ ಸಂದರ್ಭ ನಿವೃತ್ತ ಸೇನಾಧಿಕಾರಿ ಗೌಡಂಡ ತಿಮ್ಮಯ್ಯ, ನಿವೃತ್ತ ಯೋಧ ಲೋಕೇಶ್, ಸೈನಿಕ […]

ಕನ್ನಡ ಪಯಸ್ವಿನಿ ಅಚೀವ್ಮೆಂಟ್‌ ಅವಾರ್ಡ್ 2026- ಯುವ ಬಂಟ್ಸ್ ಅಸೋಸಿಯೇಷನ್‌ನಿಂದ ಸನ್ಮಾನ..!

ಮಡಿಕೇರಿ : ಕನ್ನಡ ಭವನದ ವತಿಯಿಂದ ನೀಡಲಾಗುವ ʼಕನ್ನಡ ಪಯಸ್ವಿನಿ ಅಚೀವ್ಮೆಂಟ್‌ ಅವಾರ್ಡ್-2026ʼಗೆ ಭಾಜನರಾಗಿರುವ ಸಾಧಕರನ್ನು ಕೊಡಗು ಜಿಲ್ಲಾ ಯುವ ಬಂಟ್ಸ್‌ ಅಸೋಸಿಯೇಷನ್‌ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಮಡಿಕೇರಿಯ ಹೋಟೆಲ್‌ ಸಮುದ್ರ ಸಭಾಂಗಣದಲ್ಲಿ ಜರುಗಿದ ಕೊಡಗು ಜಿಲ್ಲಾ ಬಂಟರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕಿ ಪ್ರತಿಮಾ ಹರೀಶ್‌ ರೈ, ಪತ್ರಕರ್ತ ಕಿಶೋರ್‌ ರೈ ಕತ್ತಲೆಕಾಡು, ನಿರೂಪಕಿ ಹರ್ಷಿತಾ ಶೆಟ್ಟಿ ಅವರನ್ನು ಅತಿಥಿಗಳು ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲೆಯ ಹೆಸರಾಂತ ಚಿತ್ರ ಕಲಾವಿದ ಬಿ.ಕೆ. ಗಣೇಶ್‌ […]

ಕಾಂತೂರು ಮೂರ್ನಾಡು – ಜಲ ಜೀವನ್‌ ಮಿಷನ್‌ ಯೋಜನೆ ಯಶಸ್ವಿ ಅನುಷ್ಠಾನ

ಮಡಿಕೇರಿ : ಕಾಂತೂರು ಮತ್ತು ಕಿಗ್ಗಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಯಶಸ್ವಿಯಾಗಿದ್ದು, ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ತಿಳಿಸಿದರು. ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುಷ್ಠಾನಗೊಳಿಸಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ. ಸಂಸದ ಯದುವೀರ್ ಒಡೆಯರ್ ಮತ್ತು ಶಾಸಕ ಡಾ. ಮಂತರ್ ಗೌಡ […]

ರಕ್ಷಿತಾ ಶೆಟ್ಟಿಯನ್ನು ನಿಂದಿಸಿದ ಅಶ್ವಿನಿ ಗೌಡ ವಿರುದ್ಧ ದಾಖಲಾಯ್ತು ಕೇಸ್..!‌ – ಇಲ್ಲಿದೆ ಮಾಹಿತಿ

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 12 ವಿವಿಧ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ವಾರದ ಹಿಂದಷ್ಟೇ ಜಾಹ್ನವಿ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ನಡುವಿನ ಗಲಾಟೆಯ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ರಾಜ್ಯಾದ್ಯಂತ ಬಿಗ್‌ಬಾಸ್‌ ವೀಕ್ಷಕರು ರಕ್ಷಿತಾ ವಿರುದ್ಧ ಮುಗಿಬಿದ್ದ ಜಾಹ್ನವಿ ಹಾಗೂ ಅಶ್ವಿನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ನಂತರ ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್‌ ಕೂಡಾ ಆ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ರಕ್ಷಿತಾ ಬಳಿ ಅಶ್ವಿನಿ ಕ್ಷಮೆಯನ್ನೂ ಕೇಳಿದ್ದರು. ಇದೀಗ ಹೊಸ ವಿಷಯ ಏನೆಂದರೆ ರಕ್ಷಿತಾಳನ್ನು […]

ಸರ್ಕಾರಿ ಸ್ಥಳದಲ್ಲಿ RSS ಚಟುವಟಿಕೆ ನಿರ್ಬಂಧ : ಪರಿಶೀಲನೆಗೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚನೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು. ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ […]

ಚಿಕ್ಕತ್ತೂರುವಿನಲ್ಲಿ ಪೋಷಣ ಅಭಿಯಾನ ಮತ್ತು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಕುಶಾಲನಗರ : ಚಿಕ್ಕತ್ತೂರು ಗ್ರಾಮದಲ್ಲಿ ಪೋಷಣ ಅಭಿಯಾನ ಮತ್ತು ಆತ್ಮಹತ್ಯೆ ತಡೆ ದಿನಾಚರಣೆ ನಡೆಯಿತು. ಕೂಡುಮಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ದೇಶದಲ್ಲಿ ಅಪೌಷ್ಟಿಕತೆ ತಡೆಯುವುದು ಮತ್ತು ಕಡಿಮೆ ತೂಕದ ಶಿಶುಗಳ ಜನನ ಮಟ್ಟವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿ, ಅಪೌಷ್ಟಿಕತೆಯಿಂದ ಪೌಷ್ಟಿಕತೆಯಡೆಗೆ ಸಮುದಾಯವನ್ನು ಕೊಂಡೊಯ್ಯುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶ. ವಿಶ್ವದಾದ್ಯಂತ ಏಳರಿಂದ ಎಂಟು ಲಕ್ಷ ಜನರು ಪ್ರತಿ ವರ್ಷ […]

ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ದೊಡ್ಡ ಸಾಧನೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ […]

ರೋಲರ್‌ ಸ್ಕೇಟಿಂಗ್‌ ಚಾಂಪಿಯನ್‌ಶಿಪ್ ವಿಜೇತರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತರಾದ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಉಪಸ್ಥಿತರಿದ್ದರು.  

ನಾಳೆ ನಡೆಯುತ್ತಾ ಸಾರಿಗೆ ನೌಕರರ ಮುಷ್ಕರ..? – ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲ..!

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ(ಆ.05) ಮುಷ್ಕರ ನಡೆಸಲು ಮುಂದಾಗಿದ್ದಾರೆ. ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಆ.04ರೊಳಗೆ ಈಡೇರಿಸುವಂತೆ ನೌಕರರ ಸಂಘಟನೆಗಳು ಆಗ್ರಹಿಸಿದ್ದವು. ಈಡೇರದಿದ್ದರೆ ನಾಳೆಯಿಂದ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಸಿವೆ. ಈ ಮಧ್ಯೆ ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಒಕ್ಕೂಟದೊಂದಿದೆ ವಿಧಾನದೌಧದ ಸಮಿತಿ ಕೊಠಡಿಯಲ್ಲಿ ಸುದೀರ್ಘ ಚರ್ಚೆ ನಡೆಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ […]

ಇವುಗಳು ಮೂಢನಂಬಿಕೆಗಳಲ್ಲ! ಹಿರಿಯರು ಹೀಗೆ ಹೇಳುವುದರ ಹಿಂದಿನ ವೈಜ್ಞಾನಿಕ ಕಾರಣ ಇದು

These are not superstitions

ನಮ್ಮಮನೆಯಲ್ಲಿ ಹಿರಿಯರು, ಆಗಾಗ್ಗೆ ಹೀಗೆ ಮಾಡಬೇಡ, ಈಗ ಬೇಡ ನಾಳೆ ಮಾಡು, ಇಲ್ಲಿ ಬೇಡ ಎಂದೆಲ್ಲ ಕೆಲವೊಮ್ಮೆ ಉಪದೇಶ ನೀಡುತ್ತಾರೆ. ಅವುಗಳನ್ನೆಲ್ಲ ನಾವು ಮೂಢನಂಬಿಕೆ ಎಂದು ಹೇಳಿಕೊಂಡು ಬಂದಿದ್ದೇವೆ. ಹಿಂದಿನಿಂದಲೂ ಬಂದ ಕೆಲವು ಆಚರಣೆಗಳು, ಸಂಪ್ರದಾಯಗಳ ಹಿಂದೆ ವೈಜ್ಞಾನಿಕ ಕಾರಣಗಳು ಅಡಗಿರುತ್ತವೆ. ಆದರೆ, ನಮಗೆ ಕಾರಣಗಳನ್ನು ತಿಳಿಸುವುದರಲ್ಲಿ ನಮ್ಮಹಿರಿಯರು ವಿಫಲರಾಗಿದ್ದಾರೆ. ನಮ್ಮಹಿರಿಯರು ಕಾರಣಗಳನ್ನು ತಿಳಿದೋ , ತಿಳಿಯದೆಯೋ ಅದನ್ನಪಾಲಿಸುತ್ತಲೇ ಬಂದಿದ್ದರಿಂದ, ಅದನ್ನು ನಮಗೂ ಹೇಳುತ್ತಾ ಬಂದಿದ್ದಾರೆ. ಅಂತಹ ಕೆಲವು ನಂಬಿಕೆಗಳು ಹಾಗೂ ಅದರ ಹಿಂದಿರುವ ವೈಜ್ಞಾನಿಕ ಕಾರಣಗಳನ್ನು […]