ನೀಲಿ ಸುಂದರಿಯ ಸೌಂದರ್ಯಕ್ಕೆ ಮಾರು ಹೋದರೆ ಮಾರಕವಾಗುವುದು ನಿಶ್ಚಿತ..! – ತಪ್ಪದೆ ಈ ಲೇಖನ ಓದಿ

ನೀಲಿ ಸುಂದರಿ ಕೊಡಗಿನಲ್ಲಿ ಸದ್ದು ಮಾಡ್ತಾ ಇದ್ದಾಳೆ. ಕುಶಾಲನಗರದ ತಾವರೆ ಕೆರೆ ತನ್ನ ಹೆಸರಿಗೆ ವಿರುದ್ಧವಾಗಿ ನೀಲಿ ಬಣ್ಣದ ವಾಟರ್ ಹಯಾಸಿಂತ್‌ಗೆ ಪ್ರಖ್ಯಾತಿಗೊಳ್ಳುತ್ತಾ ಇದೆ. ಪರಿಸರ ಸಮತೋಲನದ ದೃಷ್ಟಿಯಿಂದ ನೋಡುವುದಾದರೆ ಈಕೆ ನೀಲ ಸುಂದರಿಯಲ್ಲ. ಬ್ಲೂ ಡೆವಿಲ್..! ಇದರ ಬಗ್ಗೆ ಒಂದಷ್ಟು ವಿಚಾರಗಳನ್ನು ಇಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಸಾಮಾನ್ಯವಾಗಿ ಐಕಾರ್ನಿಯಾ ಹೆಸರಿನಿಂದ ಗುರುತಿಸಲ್ಪಡುವ ಈ ಜಲ ಸಸ್ಯ ತೇಲುವ ಸಸ್ಯದ ಬಗೆಯದ್ದು. ಕೇವಲ ಅಲಂಕಾರಿಕ ಸಸ್ಯವಾಗಿ ಭಾರತದ ಬಂಗಾಳಕ್ಕೆ ಪರಿಚಯವಾದ ಇದರ ಮೂಲ ದಕ್ಷಿಣ ಅಮೇರಿಕ. ಇಂದು […]

ಜು.04ಕ್ಕೆ ಸಂಸದ ಯದುವೀರ್‌ ಕೊಡಗು ಪ್ರವಾಸ – ವಿರಾಜಪೇಟೆ ಮಂಡಲ ವ್ಯಾಪ್ತಿಯ ಶಕ್ತಿ ಕೇಂದ್ರಗಳಿಗೆ ಭೇಟಿ…

  ವೀರಾಜಪೇಟೆ : ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಒಡೆಯರ್‌ ಜುಲೈ ೦೪ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ವೀರಾಜಪೇಟೆ ಮಂಡಲ ವ್ಯಾಪ್ತಿಯ ಶಕ್ತಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬಿರುನಾಣಿ, 11 ಗಂಟೆಗೆ ಟಿ.ಶೆಟ್ಟಿರಿ, 12 ಗಂಟೆಗೆ ಶ್ರೀಮಂಗಲ ಶಕ್ತಿ ಕೇಂದ್ರ, ಮಧ್ಯಾಹ್ನ 1 ಗಂಟೆಗೆ ಕಾನೂರು, 2 ಗಂಟೆಗೆ ಪೊನ್ನಂಪೇಟೆ, ಬಲ್ಯಮುಂಡ್ಡೂರು, ಕಿರುಗೂರು ಶಕ್ತಿ ಕೇಂದ್ರ (ಸ್ಥಳ :ಪೊನ್ನಂಪೇಟೆ), 3 ಗಂಟೆಗೆ ಗೋಣಿಕೊಪ್ಪ,ಅರುವತೊಕ್ಕಲು, ಹಾತೂರು ಶಕ್ತಿ ಕೇಂದ್ರ (ಸ್ಥಳ: ಗೋಣಿಕೊಪ್ಪ), […]

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆ ಬಿಟ್ಟುಹೋಗಿದ್ದಾರೆ..? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಚಿಕ್ಕಬಳ್ಳಾಪುರ : ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆ ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದರು. ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, […]

ಜು.03 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಲೋಚನಾ ಸಭೆ

ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಜುಲೈ ೦೩ ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಶಾಸಕರಾದ ಡಾ.ಮಂತರ್‌ಗೌಡ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಮುಖರು ತಿಳಿಸಿದ್ದಾರೆ.

ರೈತರಿಗೆ ಮಾಹಿತಿ : ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಅವಕಾಶ

ಮಡಿಕೇರಿ : ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೨೫-೨೬ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ […]

ಗ್ರಾಮ ಒನ್ ಕೇಂದ್ರ ನಡೆಸಲು ಆಸಕ್ತಿ ಹೊಂದಿದ್ದೀರಾ?- ಈ ಗ್ರಾಮಗಳಲ್ಲಿ ಅವಕಾಶವಿದೆ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೦ ಗ್ರಾಮ ಪಂಚಾಯತ್‌ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net […]

ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ೧೦ ಮಂದಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ – ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆಗೆ ಪತ್ರಿಕಾ ರಂಗದ ಕೊಡುಗೆ ಅಪಾರ : ಶಿವಕುಮಾರ್‌ ನಾಣಯ್ಯ ಅಭಿಮತ

ಮಡಿಕೇರಿ : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ ನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಪ್ರಾಯಿಸಿದರು. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಪತ್ರಿಕಾ ದಿನಾಚರಣೆ’ ಮತ್ತು ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥ್ಯ ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು […]

ಕೊಡವ ಹಾಕಿ ಪ್ರೀಮಿಯರ್‌ ಲೀಗ್‌ – ಪಳೆ ತಾಲೂಕ್ ಚಾಂಪಿಯನ್, ಕೂರ್ಗ್ ಟೈಟಾನ್ಸ್ ರನ್ನರಪ್..!

ಮೈಸೂರು : ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕೊಡವ ಹಾಕಿ ಪ್ರೀಮಿಯರ್ ಲೀಗ್‌ನಲ್ಲಿ ಪಳೆ ತಾಲೂಕ್ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಪಳೆ ತಾಲೂಕ್ ಹಾಗೂ ಕೂರ್ಗ್ ಟೈಟಾನ್ಸ್ ನಡುವೆ ಫೈನಲ್‌ ಪಂದ್ಯ ನಡೆಯಿತು. ಪಳೆ ತಾಲೂಕ್ ತಂಡ 3-1 ಗೋಲುಗಳ ಅಂತರದಲ್ಲಿ ಗೆದ್ದು ಕೊಡವ ಹಾಕಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪಟ್ಟ ಅಲಂಕರಿಸಿತು. ರನ್ನರಪ್‌ ಪ್ರಶಸ್ತಿಗೆ ಕೂರ್ಗ್ ಟೈಟಾನ್ಸ್ ಭಾಜನವಾದರೆ, ಮೂರನೇ ಸ್ಥಾನಕ್ಕೆ ಕೊಡವು ವಾರಿಯರ್ಸ್ ತಂಡ ತೃಪ್ತಿ ಪಟ್ಟುಕೊಂಡಿತು. […]

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿಪೂಜೆ

ಮಡಿಕೇರಿ : ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಇತರರು ಇದ್ದರು. ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ […]

ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ಪ್ರದಾನ

ಬೆಂಗಳೂರು : ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಸಾಹಿತ್ಯ ವಿದ್ಯಾರ್ಥಿಯಾಗಿರುವ ಜಮೀರ್ ಅಹಮದ್, ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಬದುಕಿನುದ್ದಕ್ಕೂ ಮೈಗೂಡಿಸಿಕೊಂಡು ಸರ್ವ […]