ಗ್ರಾಮ ಒನ್ ಕೇಂದ್ರ ನಡೆಸಲು ಆಸಕ್ತಿ ಹೊಂದಿದ್ದೀರಾ?- ಈ ಗ್ರಾಮಗಳಲ್ಲಿ ಅವಕಾಶವಿದೆ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೦ ಗ್ರಾಮ ಪಂಚಾಯತ್‌ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net […]

ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ೧೦ ಮಂದಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ – ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆಗೆ ಪತ್ರಿಕಾ ರಂಗದ ಕೊಡುಗೆ ಅಪಾರ : ಶಿವಕುಮಾರ್‌ ನಾಣಯ್ಯ ಅಭಿಮತ

ಮಡಿಕೇರಿ : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ ನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಪ್ರಾಯಿಸಿದರು. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಪತ್ರಿಕಾ ದಿನಾಚರಣೆ’ ಮತ್ತು ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥ್ಯ ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು […]

ಕೊಡವ ಹಾಕಿ ಪ್ರೀಮಿಯರ್‌ ಲೀಗ್‌ – ಪಳೆ ತಾಲೂಕ್ ಚಾಂಪಿಯನ್, ಕೂರ್ಗ್ ಟೈಟಾನ್ಸ್ ರನ್ನರಪ್..!

ಮೈಸೂರು : ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕೊಡವ ಹಾಕಿ ಪ್ರೀಮಿಯರ್ ಲೀಗ್‌ನಲ್ಲಿ ಪಳೆ ತಾಲೂಕ್ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಪಳೆ ತಾಲೂಕ್ ಹಾಗೂ ಕೂರ್ಗ್ ಟೈಟಾನ್ಸ್ ನಡುವೆ ಫೈನಲ್‌ ಪಂದ್ಯ ನಡೆಯಿತು. ಪಳೆ ತಾಲೂಕ್ ತಂಡ 3-1 ಗೋಲುಗಳ ಅಂತರದಲ್ಲಿ ಗೆದ್ದು ಕೊಡವ ಹಾಕಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪಟ್ಟ ಅಲಂಕರಿಸಿತು. ರನ್ನರಪ್‌ ಪ್ರಶಸ್ತಿಗೆ ಕೂರ್ಗ್ ಟೈಟಾನ್ಸ್ ಭಾಜನವಾದರೆ, ಮೂರನೇ ಸ್ಥಾನಕ್ಕೆ ಕೊಡವು ವಾರಿಯರ್ಸ್ ತಂಡ ತೃಪ್ತಿ ಪಟ್ಟುಕೊಂಡಿತು. […]

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿಪೂಜೆ

ಮಡಿಕೇರಿ : ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಇತರರು ಇದ್ದರು. ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ […]

ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ಪ್ರದಾನ

ಬೆಂಗಳೂರು : ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಸಾಹಿತ್ಯ ವಿದ್ಯಾರ್ಥಿಯಾಗಿರುವ ಜಮೀರ್ ಅಹಮದ್, ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಬದುಕಿನುದ್ದಕ್ಕೂ ಮೈಗೂಡಿಸಿಕೊಂಡು ಸರ್ವ […]

ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಭಾನುವಾರ ‘ಅಭಿವಂದನಾ ದೀಪಾ’ ಗೌರವ ಸಮರ್ಪಣೆ – ಏಕ ಕಾಲದಲ್ಲಿ ಹಲವಾರು ಸಂಘಟನೆಗಳಿಂದ ಸನ್ಮಾನ..

ಮಡಿಕೇರಿ : ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಜೂನ್ 29 ರಂದು ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ […]

ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ – ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ – ಇಲ್ಲಿದೆ ಮಾಹಿತಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆ ಮುಂಜಾನೆ 08:30 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ನಂತರ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಗಾಳಿ/ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು, ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರುವುದು ಮತ್ತು ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ನೀರಿರುವ ಪ್ರದೇಶಕ್ಕೆ […]

೫೦% ರಿಯಾಯಿತಿಯಲ್ಲಿ ಕೃಷಿಕರಿಗೆ ಯಂತ್ರೋಪಕರಣ ಲಭ್ಯ – ಯಾವೆಲ್ಲ ಯಂತ್ರಗಳನ್ನ ಖರೀದಿಸಬಹುದು ಗೊತ್ತಾ..?

ಮಡಿಕೇರಿ : ೨೦೨೫-೨೬ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.೫೦ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್‌ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.೧೦೦ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು […]

ಜೂನ್‌ 26 ಮತ್ತು 27 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ – ಮಳೆ ಹಾನಿ ಪ್ರದೇಶಗಳಿಗೆ ಭೇಟಿ

ಮಡಿಕೇರಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಎನ್.ಎಸ್. ಬೋಸರಾಜು ಜೂನ್ ೨೬ ಮತ್ತು ೨೭ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ೨೬ ರಂದು ಬೆಳಗ್ಗೆ ೧೧.೩೦ ಗಂಟೆಗೆ ಕುಶಾಲನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರುವ ವಿವಿಧ ಪ್ರದೇಶ ವೀಕ್ಷಿಸಲಿದ್ದಾರೆ. ಸಂಜೆ ೫ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಮಳೆ ಹಾನಿಯ ಕುರಿತು ಜಿಲ್ಲಾಧಿಕಾರಿ ಜೊತೆ ಚರ್ಚಿಸಲಿದ್ದಾರೆ. ೨೭ ರಂದು ಬೆಳಗ್ಗೆ ೯.೩೦ ಗಂಟೆಗೆ ಗ್ರಾಮೀಣಾಭಿವೃದ್ಧಿ […]

ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ – ಇಲ್ಲಿದೆ ಸಂಪೂರ್ಣ ಮಾಹಿತಿ..!

ಮಡಿಕೇರಿ : ಪ್ರಸಕ್ತ(೨೦೨೫-೨೬) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ. ಮತ್ತು ಐಟಿಐ ಹಾಗೂ ಡಿಪ್ಲೊಮೊ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ ೩೦ ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://shp.karnataka.gov.in/bcwd ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ. ಮತ್ತು ಎಸ್.ಟಿ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, […]