ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ ಖರೀದಿಸುವ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯಗಳಿವು!

ಇತ್ತೀಚೆಗೆ ಹೊಸ ಹೊಸ ಫೀಚರ್ಸ್ಗಳನ್ನು ಹೊಂದಿರುವ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಬರುತ್ತಿದೆ. ಆದರೆ ಈ ಹೊಸ ಸ್ಮಾರ್ಟ್ಫೋನ್ (Smartphone) ಖರೀದಿಸಲು ಕೆಲವರಿಗೆ ಬಜೆಟ್ ಇರಲ್ಲ. ಸ್ಮಾರ್ಟ್ಫೋನ್ಗಳ ಬೆಲೆಗಳು ಏರಿಕೆಯಾಗುವುದರಿಂದ ಜನರು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ಗಳನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ಆದರೆ ಸೆಕೆಂಡ್ ಹ್ಯಾಂಡ್ ಫೋನ್ ಖರೀದಿಸುವ ಮೊದಲು ಪರಿಗಣಿಸಬೇಕಾದ ಕೆಲವು ಅಂಶಗಳ ಬಗ್ಗೆ ಮಾಹಿತಿ ಇಲ್ಲಿದೆ. * ನೀವು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ ಖರೀದಿಸುವ ಬಗ್ಗೆ ಯೋಚಿಸಿದಾಗ, ಅರ್ಧ ಬೆಲೆಗೆ ಹೊಸ ಸ್ಮಾರ್ಟ್ಫೋನ್ ಖರೀದಿಸಲು ಆತುರಪಡಬೇಡಿ. ಎಲ್ಲಾ ಟೆಕ್ನಿಕಲ್ […]
ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಸುವರ್ಣವಾಕಾಶ: ವಿಶೇಷ ಶಿಬಿರ

ಕ್ರೀಡೆಯಲ್ಲಿ (sports) ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಕ್ರೀಡಾ ವಸತಿ ಮತ್ತು ನಿಲಯಗಳಲ್ಲಿ ಪ್ರವೇಶಾವಕಾಶ ನೀಡುವ ಸಲುವಾಗಿ ಆಯ್ಕೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 2 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, […]
ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ ಆಡಳಿತ ಮಂಡಳಿಗೆ ಇಶಾ ಅಂಬಾನಿ ಸೇರ್ಪಡೆ

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ (ಎಫ್ಐವಿಬಿ) ಆಡಳಿತ ಮಂಡಳಿಗೆ ಇಶಾ ಅಂಬಾನಿ (Isha Ambani) ಮತ್ತು ಲೂಯಿಸ್ ಬಾವ್ಡೆನ್ ಸೇರ್ಪಡೆಯಾಗಿದ್ದಾರೆ. 2024-2028ರ ಒಲಿಂಪಿಕ್ಸ್ ಸಾಲಿಗೆ ಈ ನೇಮಕಾತಿಯನ್ನು ಮಾಡಿರುವುದನ್ನು ಎಫ್ಐವಿಬಿ ಘೋಷಿಸಿದೆ. ಈ ಮೂಲಕ ಸಂಸ್ಥೆಯ ಅತ್ಯುನ್ನತ ಮಟ್ಟದಲ್ಲಿ ಹೊಸ ದೃಷ್ಟಿಕೋನ, ವ್ಯವಹಾರ ಕುಶಾಗ್ರಮತಿ ಮತ್ತು ಕ್ರೀಡಾಪಟುಗಳ ಪ್ರಾತಿನಿಧ್ಯವನ್ನು ತರಲಾಗಿದೆ. ಎಫ್ಐವಿಬಿ ಸಂವಿಧಾನದ ವಿಧಿ 2.4.1.5 ರ ಅಡಿಯಲ್ಲಿ ಅಂಬಾನಿ ಮತ್ತು ಬಾವ್ಡೆನ್ ಅವರನ್ನು ನೇಮಿಸಲಾಗಿದೆ, ಇದು ಎಫ್ಐವಿಬಿ ಅಧ್ಯಕ್ಷರು, ವಿಭಿನ್ನ ವರ್ಗಗಳಲ್ಲಿ ನಾಲ್ಕು ಹೆಚ್ಚುವರಿ ಮಂಡಳಿ ಸದಸ್ಯರನ್ನು […]
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗಾಗಿ ಸೂಪರ್ “ಮ್ಯಾಕ್ಸ್ಸೇವರ್” ಕೊಡುಗೆ ಘೋಷಣೆ

ತ್ವರಿತ ಇ-ಕಾಮರ್ಸ್ ತಾಣವಾದ ಸ್ವಿಗ್ಗಿ (Swiggy) ಇನ್ಸ್ಟಾಮಾರ್ಟ್ ತನ್ನ ಗ್ರಾಹಕರಿಗಾಗಿ “ಮ್ಯಾಕ್ಸ್ಸೇವರ್” ಎಂಬ ವಿನೂತನ ಸೇವೆ ಆರಂಭಿಸಿದ್ದು, ತಮ್ಮ ಪ್ರತಿ ಆರ್ಡರ್ಗಳ ಮೇಲೆ 500 ರೂ.ವರೆಗೂ ಉಳಿತಾಯ ಮಾಡಬಹುದು. ಇತ್ತೀಚೆಗೆ ರಾಷ್ಟ್ರದಾದ್ಯಂತ 100 ನಗರಗಳಿಗೆ ವಿಸ್ತರಣೆಯನ್ನು ಘೋಷಿಸಿದ್ದ ಸ್ವಿಗ್ಗಿ ಇನ್ಸ್ಟಾಮಾರ್ಟ್, ಈ ನಗರಗಳಲ್ಲಿನ ಬಳಕೆದಾರರಿಗೆ ಮ್ಯಾಕ್ಸ್ಸೇವರ್ ಅನ್ನು ಪ್ರಾರಂಭಿಸಿದೆ. ಸ್ವಿಗ್ಗಿ ಮ್ಯಾಕ್ಸ್ಸೇವರ್ ಬಳಸುವ ಗ್ರಾಹಕರು ಎಲ್ಲಾ ವಿಭಾಗದಲ್ಲೂ ಉತ್ತಮ ಡಿಸ್ಕೌಂಟ್ ಪಡೆಯಬಹುದು. ಅದರಲ್ಲೂಪ್ರತಿನಿತ್ಯ ಬಳಕೆಯ ದಿನಸಿಯಿಂದ ಹಿಡಿದು ಎಲೆಕ್ಟ್ರಾನಿಕ್ಸ್, ಸ್ಮಾರ್ಟ್ಫೋನ್, ಫ್ಯಾಷನ್, ಮೇಕಪ್, ಆಟಿಕೆಗಳು ಸೇರಿದಂತೆ 35,000 […]
ಪತ್ರಕರ್ತರ ಸಂಘದಿಂದ ಏಪ್ರಿಲ್ 11ರಂದು ಸುಂಟಿಕೊಪ್ಪದಲ್ಲಿ ಮಾಧ್ಯಮ ಸಂವಾದ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ಏ.೧೧ರ ಶುಕ್ರವಾರ ಬೆಳಗ್ಗೆ ೧೦.೩೦ ಗಂಟೆಗೆ ಸುಂಟಿಕೊಪ್ಪದ ವಿಎಸ್ಎಸ್ಎನ್ ಸಭಾಂಗಣದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಸಂವಾದದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಭಾರ ಉಪ ತಹಶೀಲ್ದಾರ್ ಎನ್.ಆರ್. ಪ್ರಶಾಂತ್, ಸುಂಟಿಕೊಪ್ಪ ಗ್ರಾಮ […]
ವಿಶೇಷ ಕಾರ್ಯಕ್ರಮದ ಮೂಲಕ ಅನಾಥ ಹೆಣ್ಣು ಮಕ್ಕಳಿಗೆ ನೆರವು

ಬೆಂಗಳೂರು: ನೆಲೆ ಫೌಂಡೇಶನ್ನಲ್ಲಿ ನೆಲೆಸಿರುವ 50 ಹೆಣ್ಣು ಮಕ್ಕಳಿಗೆ (Girls) ನೆರವಾಗುವ ನಿಟ್ಟಿನಲ್ಲಿ ವಿಜಯನಗರದ ಕಾಸಿಯಾ ಭವನದಲ್ಲಿ ಶೈನಿಂಗ್ ಸ್ಟಾರ್ಸ್ ವಿಶೇಷ ಕಾರ್ಯಕ್ರಮವನ್ನು (program) ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಫ್ಯಾಷನ್ ಶೋ, ತಾಯಿ ಮಗುವಿನ ರ್ಯಾಂಪ್ ವಾಕ್, ಮಹಿಳೆಯರ ವಿಭಿನ್ನ ರೀತಿಯ ಸ್ಯಾರಿ ರ್ಯಾಂಪ್ ವಾಕ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಮೂಲಕ ಸಂಗ್ರಹವಾಗುವ ಹಣವನ್ನು ಫೌಂಡೇಶನ್ ಗೆ ನೀಡಲಾಗುತ್ತದೆ. ಅನ್ಷುಲಾ ಲೇಡೀಸ್ ಎಂಟ್ರಿಪ್ರಿನರ್ ಕ್ಲಬ್ ಮತ್ತು ಮಧುರಾ ವುಮೆನ್ಸ್ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ […]
2 ವರ್ಷದ ಮಕ್ಕಳಲ್ಲೂ ಕಂಡುಬರುತ್ತಿದೆ ಮಲಬದ್ಧತೆ ಸಮಸ್ಯೆ: ಏಕೆ ನಿರ್ಲಕ್ಷಿಸಬಾರದು?

ಮಲಬದ್ಧತೆ ಎಂಬುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಆದ್ರೆ ಇತ್ತೀಚಿಗೆ ತೀರಾ 2 ವರ್ಷದ ಮಕ್ಕಳಲ್ಲೂ ಮಲಬದ್ಧತೆ ಕಂಡುಬರುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ ಎನ್ನುತ್ತಾರೆ ಬೆಂಗಳೂರಿನ ವಾಸವಿ ಆಸ್ಪತ್ರೆಯ ತಜ್ಞರು. ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬರಲು ಕಾರಣವೇನು ಎಂದು ನೋಡಿದಾಗ ಈಗಿನ ಆಹಾರ ಪದ್ಧತಿ ಪ್ರಮುಖವಾಗಿದೆ. ಅನಾರೋಗ್ಯಕರ ಆಹಾರ ಸೇವನೆ, ಜಂಕ್ ಫುಡ್, ಬ್ರೆಡ್, ಬಿಸ್ಕತ್ ಮತ್ತು ರಸ್ಕ್ಗಳ ಅತಿಯಾದ ಸೇವನೆ, ತರಕಾರಿ ಮತ್ತು ಹಣ್ಣುಗಳಂತಹ ಫೈಬರ್ ಭರಿತ ಆಹಾರ ಸೇವನೆಯ ಕೊರತೆ ಮತ್ತು […]
ಭಾರತದ ಅತೀ ವೇಗದ ಇಂಟರ್ನೆಟ್ ಪೂರೈಕೆಯಲ್ಲಿ ನಂ.1 ಕಂಪನಿ ಯಾವುದು ಗೊತ್ತೇ?

2024ರ ದ್ವಿತೀಯಾರ್ಧದಲ್ಲಿ ಜಿಯೋ (Jio) ಎಲ್ಲಾ ತಂತ್ರಜ್ಞಾನಗಳಲ್ಲಿ ಮತ್ತು ನಿರ್ದಿಷ್ಟವಾಗಿ 5 ಜಿಗಾಗಿ ಭಾರತದಲ್ಲಿ ಅತ್ಯಂತ ವೇಗದ ಮೊಬೈಲ್ ಇಂಟರ್ನೆಟ್ (Internet) ಪೂರೈಕೆದಾರನಾಗಿದೆ ಎಂದು ನೆಟ್ವರ್ಕ್ ಗುಪ್ತಚರ ಮತ್ತು ಸಂಪರ್ಕ ಒಳನೋಟಗಳ ವೇದಿಕೆಯಾದ ಓಕ್ಲಾ ವರದಿಯಲ್ಲಿ ಪ್ರಕಟಿಸಿದೆ. ಓಕ್ಲಾ ಪ್ರಕಾರ, ಜಿಯೋ ಸರಾಸರಿ 5 ಜಿ ಡೌನ್ಲೋಡ್ ವೇಗವನ್ನು 258.54 ಎಂಬಿಪಿಎಸ್ ಮತ್ತು ಅಪ್ಲೋಡ್ ವೇಗವನ್ನು 14.54 ಎಂಬಿಪಿಎಸ್ ದಾಖಲಿಸಿದೆ. ಅಂತೆಯೇ, ವೇಗದ ಮೊಬೈಲ್ ನೆಟ್ವರ್ಕ್ ಮತ್ತು ಅತ್ಯುತ್ತಮ ಮೊಬೈಲ್ ವ್ಯಾಪ್ತಿ ಎರಡರಲ್ಲೂ ಮುಂಚೂಣಿಯಲ್ಲಿದ್ದ ಜಿಯೋ ಈ […]
ರಾಷ್ಟ್ರ ರಾಜಧಾನಿಯಲ್ಲಿ ಲೋಕಾರ್ಪಣೆಗೊಂಡಿತು ನೂತನ ಕರ್ನಾಟಕ ಭವನ – ಇಲ್ಲಿದೆ ನೋಡಿ ವರ್ಣರಂಜಿತ ಫೋಟೋಸ್..!

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ನಿನ್ನೆ ನೂತನ ಕರ್ನಾಟಕ ಭವನ(karnataka bhavan) ಲೋಕಾರ್ಪಣೆಗೊಂಡಿದೆ. ಜಗಮಗಿಸುವ ಬೆಳಕಿನ ವೈಯ್ಯಾರದಲ್ಲಿ ಕಂಗೊಳಿಸಿದ ಕರ್ನಾಟಕ ಭವನದ ಚಿತ್ರಣ ಇಲ್ಲಿದೆ ನೋಡಿ.
ಏಪ್ರಿಲ್ 05, 06ರಂದು ಮಂಜಿನ ನಗರಿಯಲ್ಲಿ ವೈಭವದ ಕೋದಂಡ ರಾಮೋತ್ಸವ – ಎರಡು ದಿನ ಏನೇನಿರಲಿದೆ..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..!

ಮಡಿಕೇರಿ : ಮಡಿಕೇರಿಯ(Madikeri) ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ(kodanda ramotsava) ಸಮಿತಿ ವತಿಯಿಂದ ಏ.೫ ಮತ್ತು ೬ ರಂದು ೩೫ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸ್ವಾಗತ ಸಮಿತಿ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.೫ ರಂದು ಸಂಜೆ ೪ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು. ಮೆರವಣಿಗೆಯಲ್ಲಿ […]