ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಭಾನುವಾರ ‘ಅಭಿವಂದನಾ ದೀಪಾ’ ಗೌರವ ಸಮರ್ಪಣೆ – ಏಕ ಕಾಲದಲ್ಲಿ ಹಲವಾರು ಸಂಘಟನೆಗಳಿಂದ ಸನ್ಮಾನ..

ಮಡಿಕೇರಿ : ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಜೂನ್ 29 ರಂದು ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ […]

ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ – ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ – ಇಲ್ಲಿದೆ ಮಾಹಿತಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆ ಮುಂಜಾನೆ 08:30 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ನಂತರ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಗಾಳಿ/ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು, ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರುವುದು ಮತ್ತು ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ನೀರಿರುವ ಪ್ರದೇಶಕ್ಕೆ […]

೫೦% ರಿಯಾಯಿತಿಯಲ್ಲಿ ಕೃಷಿಕರಿಗೆ ಯಂತ್ರೋಪಕರಣ ಲಭ್ಯ – ಯಾವೆಲ್ಲ ಯಂತ್ರಗಳನ್ನ ಖರೀದಿಸಬಹುದು ಗೊತ್ತಾ..?

ಮಡಿಕೇರಿ : ೨೦೨೫-೨೬ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.೫೦ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್‌ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.೧೦೦ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು […]

ಜೂನ್‌ 26 ಮತ್ತು 27 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ – ಮಳೆ ಹಾನಿ ಪ್ರದೇಶಗಳಿಗೆ ಭೇಟಿ

ಮಡಿಕೇರಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಎನ್.ಎಸ್. ಬೋಸರಾಜು ಜೂನ್ ೨೬ ಮತ್ತು ೨೭ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ೨೬ ರಂದು ಬೆಳಗ್ಗೆ ೧೧.೩೦ ಗಂಟೆಗೆ ಕುಶಾಲನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರುವ ವಿವಿಧ ಪ್ರದೇಶ ವೀಕ್ಷಿಸಲಿದ್ದಾರೆ. ಸಂಜೆ ೫ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಮಳೆ ಹಾನಿಯ ಕುರಿತು ಜಿಲ್ಲಾಧಿಕಾರಿ ಜೊತೆ ಚರ್ಚಿಸಲಿದ್ದಾರೆ. ೨೭ ರಂದು ಬೆಳಗ್ಗೆ ೯.೩೦ ಗಂಟೆಗೆ ಗ್ರಾಮೀಣಾಭಿವೃದ್ಧಿ […]

ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ – ಇಲ್ಲಿದೆ ಸಂಪೂರ್ಣ ಮಾಹಿತಿ..!

ಮಡಿಕೇರಿ : ಪ್ರಸಕ್ತ(೨೦೨೫-೨೬) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ. ಮತ್ತು ಐಟಿಐ ಹಾಗೂ ಡಿಪ್ಲೊಮೊ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ ೩೦ ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://shp.karnataka.gov.in/bcwd ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ. ಮತ್ತು ಎಸ್.ಟಿ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, […]

ವೀರಾಜಪೇಟೆಯಲ್ಲಿ ಲೋಕಾರ್ಪಣೆಗೊಂಡಿದೆ ಅಂಬೇಡ್ಕರ್‌ ಭವನ – ಸದ್ಬಳಕೆಗೆ ಮನವಿ..!

ವೀರಾಜಪೇಟೆ : ಪಟ್ಟಣದ ಮೂರ್ನಾಡು ಮುಖ್ಯರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಲೋಕಾರ್ಪಣೆಗೊಂಡಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲೂಕು ತಹಸೀಲ್ದಾರ್‌ ಕೋರಿದ್ದಾರೆ. ಸುಸುಜ್ಜಿತ ಕಟ್ಟಡದಲ್ಲಿ ಉತ್ತಮವಾದ ಸಭಾಂಗಣ, ಊಟಕ್ಕೆ ವಿಶಾಲವಾದ ಡೈನಿಂಗ್ ಹಾಲ್, ಕಟ್ಟಡದ ನೆಲ ಅಂತಸ್ತಿನಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ನೀರಿನ ಸಂಪರ್ಕ ಹೊಂದಿರುವ ಉತ್ತಮವಾದ ಅಡುಗೆ ಮನೆ, ವಧು-ವರರಿಗೆ ಪ್ರತ್ಯೇಕವಾದ ಕೊಠಡಿ ಇರುತ್ತದೆ. ಈ ಭವನವನ್ನು ಎಲ್ಲಾ ಸಭೆ ಸಮಾರಂಭಗಳಿಗೆ ಬಾಡಿಗೆಗೆ ನೀಡುತ್ತಿದ್ದು, ಸಭೆ ಸಮಾರಂಭಗಳನ್ನು ಮಾಡುವವರು ವೀರಭದ್ರಯ್ಯ 8105774952 , […]

ಯಾವುದೇ ದುಶ್ಚಟಗಳಿಗೆ ದಾಸರಾಗಬೇಡಿ – ವಿದ್ಯಾರ್ಥಿಗಳಿಗೆ ಪ್ರಮುಖರ ಕರೆ..!

ಮಡಿಕೇರಿ : ಹಿಂದುಳಿದ ವರ್ಗಗಳ ಕಲ್ಯಾಣ, ಪೊಲೀಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತಾರಾಷ್ಟ್ರೀಯ ದಿನ ಕುರಿತು ಜಾಗೃತಿ ಅಭಿಯಾನ ನಗರದ ಡೈರಿ ಫಾರಂನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀನಾಥ್, ಹಿಂದೆ ಹಲವು ರೀತಿಯ ವೈರಸ್ ಮತ್ತು ಬ್ಯಾಕ್ಟೀರಿಯಾ ರೋಗಗಳಿಗೆ ತುತ್ತಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ […]

ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ – ಮಳೆ ರಜೆ ನಡುವೆಯೂ ಪ್ರಬಂಧ, ಚಿತ್ರಕಲಾ ಸ್ಪರ್ಧೆ!

ಮಡಿಕೇರಿ : ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರೌಢಶಾಲೆ ಹಾಗೂ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯು ಬುಧವಾರ ನಡೆಯಿತು. ‘ನಮ್ಮ ಬೆಂಗಳೂರು ಹೇಗೆ ಇದ್ದರೆ ಚೆನ್ನ’ ಹಾಗೂ ‘ನಾಡಪ್ರಭು ಕೆಂಪೇಗೌಡರ ಕೊಡುಗೆ’ ಕುರಿತು ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ಇಂದು ಮಳೆ ಕಾರಣದಿಂದ ರಜೆ […]

ಮಡಿಕೇರಿ ನಗರಸಭೆ ನಿರ್ಲಕ್ಷ್ಯ – ಮೋರಿಗೆ ಬಿದ್ದು ನರಳಾಡಿದ ಹಸು..!

ಮಡಿಕೇರಿ : ಸ್ಥಳೀಯಾಡಳಿತದ ನಿರ್ಲಕ್ಷ್ಯದಿಂದ ಮೋರಿಗೆ ಹಸು ಬಿದ್ದು ಕೆಲ ಹೊತ್ತು ನರಕ ಯಾತನೆ ಅನುಭವಿಸಿದೆ. ನಗರದ ಅಬ್ದುಲ್ ಕಲಾಂ ಬಡಾವಣೆಯ ರಸ್ತೆ ಬದಿಯಲ್ಲಿ ಮೋರಿಯೊಂದು ಯಾವುದೇ ಸುರಕ್ಷತೆ ಇಲ್ಲದೆ ಇತ್ತು. ಇಂದು ರಸ್ತೆ ಬದಿ ಹುಲ್ಲು ಮೇಯುತ್ತಾ ಬಂದ ಹಸುವೊಂದು ನಿಯಂತ್ರಣ ತಪ್ಪಿ ಮೋರಿಯೊಳಕ್ಕೆ ಬಿದ್ದಿದೆ. ಮೇಲೆ ಏಳಲಾಗದೆ ಹಲವು ಹೊತ್ತು ಒದ್ದಾಡಿದೆ. ಇದನ್ನು ಕಂಡ ಸಾರ್ವಜನಿಕರು ಅದನ್ನು ರಕ್ಷಿಸಲು ಮುಂದಾದರು. ಆದರೆ ಅದು ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಕೆಲ ಹೊತ್ತಿನ […]

ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ – ಮಹಿಳೆಯರಿಗೆ ಮಾತ್ರ ಅವಕಾಶ..!

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ ೩೧ ದಿನಗಳ ಉಚಿತ ತರಬೇತಿಯು ಜುಲೈ ೨೬ ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.  ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಹೊಂದಿರುವ […]