ಅತಿಸಾರ ಬೇಧಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ – ಮಕ್ಕಳ ಉತ್ತಮ ಆರೋಗ್ಯದತ್ತ ಗಮನ ಇರಲಿ: ಡಾ.ಸತೀಶ್ ಕುಮಾರ್

ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ(ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸೋಮವಾರ ನಡೆಯಿತು. ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜುಲೈ ೩೧ ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ […]
ಭಾಗಮಂಡಲದಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಜೂನ್ 30ಕ್ಕೆ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ರೋಟರಿ ಮಡಿಕೇರಿ ವುಡ್ಸ್ ಸಹಯೋಗದೊಂದಿಗೆ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಜೂನ್ 30ರಂದು ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ, ಸ್ತ್ರೀರೋಗ, ಹೃದಯ ಸಂಬಂಧಿಸಿದ ಕಾಯಿಲೆಗಳ ತಪಾಸಣೆ ಮಾಡಲಾಗುವುದು. ಶಿಬಿರಕ್ಕೆ ಬರುವ ಮಂದಿಗೆ ಭಾಗಮಂಡಲ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಉಚಿತ ಸೇವೆ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]
ಪಾಲಿಬೆಟ್ಟ : ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ದಿನಾಚರಣೆ

ಪಾಲಿಬೆಟ್ಟ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಮೇಲ್ವಿಚಾರಕಿ ಸುಮಯ್ಯ ಕೆ. ಎಂ., ಸಿಬ್ಬಂದಿ ಸುಜಾತ, ಪ್ರೀತು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಜೂ.27ಕ್ಕೆ

ಮಡಿಕೇರಿ : ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅಧ್ಯಕ್ಷತೆಯಲ್ಲಿ ಜೂನ್, ೨೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.
ದುಬೈ-ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವಾರ್ಷಿಕ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ..!

ಮಡಿಕೇರಿ : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹೊದವಾಡದ ರಾಫಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಶೈಕ್ಷಣಿಕವಾಗಿ ಸಾಧನೆಗೈಡ ಭಾಷಿತ, ಡಿಯಾನ, ಚರಿಷ್ಮಾ, ಹೇಮಾವತ, ಸಫಾನಾ, ಫಾಹಿನ ಅವರನ್ನು ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಳೆ […]
ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!

ಮಡಿಕೇರಿ : ಪ್ರಸಕ್ತ (೨೦೨೫-೨೬) ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ಸೇವಾಸಿಂಧು ಪೋರ್ಟಲ್ನ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ನೀಡಲು ಸೇವಾಸಿಂಧು ಪೋರ್ಟಲ್ನ (https://sevasindhu.karnataka.gov.in/Sevasindhu/DepartmentServices) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ […]
ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ – ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು. ಆಸಕ್ತರು ಜೂನ್, ೩೦ ರೊಳಗೆ ಬೆಳಗ್ಗೆ […]
ನಾಪತ್ತೆಯಾಗಿದ್ದ ಮಾಜಿ ಸೈನಿ ಗಿರೀಶ್ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆ..!

ಕುಶಾಲನಗರ : ಮೂರು ದಿನದಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿಯಾದ ನಿವಾಸಿಯಾದ ಗಿರೀಶ್ (46) ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಕುಶಾಲನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಪತ್ತೆಗಾಗಿ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಮೂರು ದಿನದಿಂದ ನಿರಂತರ ಹುಡುಕಾಟ […]
ಸೋಮವಾರಪೇಟೆ ತಹಸೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ – ಮಳೆಗಾಲದ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಸೂಚನೆ..!

ಸೋಮವಾರಪೇಟೆ : ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ […]
ಪೊನ್ನಂಪೇಟೆಯಲ್ಲಿ ಮಾದಕ ವಸ್ತು ಸರಬರಾಜು – 1.79 ಕೆಜಿ ಗಾಂಜಾ ಸಹಿತ ಆರೋಪಿ ಅಂದರ್..!

ಗೋಣಿಕೊಪ್ಪ : ಮಾದಕ ವಸ್ತು MDMA ಮತ್ತು ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪಿಯೊಬ್ಬನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಗುರುದತ್ (30) ಬಂಧಿತ ವ್ಯಕ್ತಿ. ಬಂಧಿತನಿಂದ 4 ಗ್ರಾಂ MDMA ಹಾಗೂ 1 ಕೆ.ಜಿ. 79 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ದಿನ ಈತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ವಿರಾಜಪೇಟೆ ಉಪವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್, ಗೋಣಿಕೊಪ್ಪ ಪ್ರಭಾರ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, […]