ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!

ಮಡಿಕೇರಿ : ಪ್ರಸಕ್ತ (೨೦೨೫-೨೬) ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ನೀಡಲು ಸೇವಾಸಿಂಧು ಪೋರ್ಟಲ್‌ನ (https://sevasindhu.karnataka.gov.in/Sevasindhu/DepartmentServices) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ […]

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ – ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು. ಆಸಕ್ತರು ಜೂನ್, ೩೦ ರೊಳಗೆ ಬೆಳಗ್ಗೆ […]

ನಾಪತ್ತೆಯಾಗಿದ್ದ ಮಾಜಿ ಸೈನಿ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆ..!

girish

ಕುಶಾಲನಗರ : ಮೂರು ದಿನದಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿಯಾದ ನಿವಾಸಿಯಾದ ಗಿರೀಶ್ (46) ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಕುಶಾಲನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಪತ್ತೆಗಾಗಿ ಪೊಲೀಸ್‌, ಅಗ್ನಿಶಾಮಕ ಸಿಬ್ಬಂದಿ, ಎನ್‌ಡಿಆರ್‌ಎಫ್‌ ಸಿಬ್ಬಂದಿ ಮೂರು ದಿನದಿಂದ ನಿರಂತರ ಹುಡುಕಾಟ […]

ಸೋಮವಾರಪೇಟೆ ತಹಸೀಲ್ದಾರ್‌ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಭೇಟಿ – ಮಳೆಗಾಲದ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಸೂಚನೆ..!

ಸೋಮವಾರಪೇಟೆ : ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ […]

ಪೊನ್ನಂಪೇಟೆಯಲ್ಲಿ ಮಾದಕ ವಸ್ತು ಸರಬರಾಜು – 1.79 ಕೆಜಿ ಗಾಂಜಾ ಸಹಿತ ಆರೋಪಿ ಅಂದರ್..!

ಗೋಣಿಕೊಪ್ಪ : ಮಾದಕ ವಸ್ತು MDMA ಮತ್ತು ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪಿಯೊಬ್ಬನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಗುರುದತ್ (30) ಬಂಧಿತ ವ್ಯಕ್ತಿ. ಬಂಧಿತನಿಂದ 4 ಗ್ರಾಂ MDMA ಹಾಗೂ 1 ಕೆ.ಜಿ. 79 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ದಿನ ಈತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ವಿರಾಜಪೇಟೆ ಉಪವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್, ಗೋಣಿಕೊಪ್ಪ ಪ್ರಭಾರ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, […]

ಪೊಲೀಸರ ಮನೆಗೇ ಕನ್ನ ಹಾಕಿದ ಖತರ್ನಾಕ್‌ ಚೋರರು..! – ಇಲ್ಲಿದೆ ನೋಡಿ ಮಾಹಿತಿ..!

ಮಡಿಕೇರಿ : ರಕ್ಷಣೆ ನೀಡುವ ಪೊಲೀಸರ ಮನೆಗೇ ಖತರ್ನಾಕ್‌ಗಳು ಕನ್ನ ಹಾಕಿರುವ ಘಟನೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಮೈತ್ರಿ ಪೊಲೀಸ್‌ ಸಮುದಾಯ ಭವನ ಬಳಿಯಿರುವ ಪೊಲೀಸರ ವಸತಿ ಗೃಹಗಳನ್ನೇ ಟಾರ್ಗೆಟ್‌ ಮಾಡಿದ ಕಳ್ಳರು ಮನೆಗೆ ನುಗ್ಗಿ ನಗದು, ಅಮೂಲ್ಯ ವಸ್ತುಗಳನ್ನ ದೋಚಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಕೃತ್ಯವೆಸಗಿದ್ದಾರೆ. ಕೃತ್ಯ ನಡೆದ ಮನೆಗಳಿಗೆ ಪೊಲೀಸ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ ನಗರದಲ್ಲಿ […]

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ – ರಾಜ್ಯಾಧ್ಯಕ್ಷರಿಂದ ಆದೇಶ ಪ್ರತಿ ಸ್ವೀಕಾರ..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮರು ನೇಮಕವಾದ ನಾಪಂಡ ರವಿ ಕಾಳಪ್ಪ ಇಂದು ರಾಜ್ಯಾಧ್ಯಕ್ಷರಿಂದ ಅಧಿಕೃತ ಆದೇಶ ಪ್ರತಿ ಸ್ವೀಕರಿಸಿದರು. ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ ಬಿ.ವೈ. ವಿಜಯೇಂದ್ರ ಆದೇಶ ಪ್ರತಿ ನೀಡಿದರು. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಕ್ಯಾ. ಗಣೇಶ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ‌ ಪಿ. ರಾಜೀವ, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. […]

ಭರ್ಜರಿ ಉದ್ಯೋಗಾವಕಾಶ: 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunity

SSC CGL Recruitment 2025: SSCಯು ಖಾಲಿ ಇರುವ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಧಿಕೃತ ವೆಬ್‌ಸೈಟ್ ssc.gov.inನಲ್ಲಿ SSC CGL ಅಧಿಸೂಚನೆ 2025 ಅನ್ನು ಬಿಡುಗಡೆ ಮಾಡಿದ್ದು, 14,582 ಹುದ್ದೆಗಳನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು SSC CGL ಪರೀಕ್ಷೆಯನ್ನು ವಾರ್ಷಿಕವಾಗಿ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನಗಳು: SSC ಅಧಿಕೃತ ವೆಬ್‌ಸೈಟ್‌ ssc.nic.inಗೆ ಭೇಟಿ ನೀಡಿ * ಅಭ್ಯರ್ಥಿ […]

ಜಲಪ್ರವಾಹ : ಚೇರಂಬಾಣೆ ಗ್ರಾಮಸ್ಥರ ಸಂಚಾರಕ್ಕೆ ಕೇವಲ ದೋಣಿ ಆಶ್ರಯ

There has been a flood in Doni Kadu in Bengur village, and locals are using boats to travel.

ಚೇರಂಬಾಣೆ (cherambane) ದೋಣಿ ಕಾಡುವಿನಲ್ಲಿ ಪ್ರವಾಹ ಸ್ಥಳೀಯರಿಗೆ ಸಂಚರಿಸಲು ದೋಣಿ ವ್ಯವಸ್ಥೆ.ಭಾಗಮಂಡಲ ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ಎಂಬಲ್ಲಿ ಪ್ರವಾಹ ಬಂದಿದ್ದು ಸ್ಥಳೀಯರು ದೋಣಿ ಮುಖಾಂತರ ಸಂಚಾರ ಮಾಡುತ್ತಿದ್ದಾರೆ. ಪ್ರವಾಹ ಬಂದಿರುವ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರರು ಮಡಿಕೇರಿ ತಾಲ್ಲೂಕು ಇವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ – ಮಡಿಕೇರಿ ನಗರ ಬಿಜೆಪಿಯಿಂದ ಕಾರ್ಯಾಗಾರ..!

ಮಡಿಕೇರಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕಾರ್ಯಾಗಾರ ನಡೆಯಿತು.  ನಗರದ ಬಿಜೆಪಿ ಕಚೇರಿಯಲ್ಲಿ ಉಮೇಶ್‌ ಸುಬ್ರಹ್ಮಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಸರ್ಕಾರದ ಸಾಧನೆ, ಐತಿಹಾಸಿಕ ನಿರ್ಧಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಶಾಂತ್ ಭೀಮಯ್ಯ, ಕನ್ನಿಕೆ,  ವಕ್ತರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ  ಕಾಂಗೀರ ಸತೀಶ್ ಅಶ್ವಿನ್, ಪ್ರಮುಖರಾದ ಜಗದೀಶ್,  ವಿವಿಧ ಮಂಡಲಗಳ ಮುಖಂಡರು […]