ಪಶ್ಚಿಮಘಟ್ಟ ಉಳಿಸಿಕೊಳ್ಳಲು ವರದಿ ಸಲ್ಲಿಸಿದ್ದ ಕೆ ಕಸ್ತೂರಿರಂಗನ್ ನಿಧನ

ಭಾರತ ಕಂಡ ಹಿರಿಯ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ (Kasturirangan) ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷಗಳಾಗಿತ್ತು. ಬಾಹ್ಯಾಕಾಶ ವಿಜ್ಞಾನಿಯಾಗಿದ್ದ ಅವರು, ಭಾರತೀಯ ಭಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ಬರೋಬ್ಬರಿ 9 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1994 ರಿಂದ ಆಗಸ್ಟ್ 27, 2003ವರೆಗೆ ಇಸ್ರೋದ ಅಧ್ಯಕ್ಷರಾಗಿದ್ದರು. ರಾಜ್ಯಸಭೆ ಸದಸ್ಯ, ಭಾರತ ಸರ್ಕಾರದ ಯೋಜನಾ ಆಯೋಗದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಕೆ.ಕಸ್ತೂರಿ ರಂಗನ್ ಅವರ ಸಾಧನೆಗೆ ಭಾರತ ಸರ್ಕಾರ, ದೇಶದ […]
ಬೆಂಗಳೂರಿನ ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್ವಾಟರ್ನಿಂದ ವಿಚಾರ ಸಂಕಿರಣ

ಬೆಂಗಳೂರು: ಎಸ್ಟಿಪಿ ನೀರನ್ನು ಉತ್ತಮ ಗುಣಮಟ್ಟದ ಕುಡಿಯುವ ನೀರಾಗಿ ಪರಿವರ್ತಿಸುವ ವಾಟರ್ ಯುಟಿಲಿಟಿ ಕಂಪನಿ ಬೋಸನ್ ವೈಟ್ ವಾಟರ್, ಏಪ್ರಿಲ್ 16ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಾಯಿ ವಿಶ್ರಾಮ್ನಲ್ಲಿ “ಸುಸ್ಥಿರ ನೀರಿನ ನಿರ್ವಹಣಾ ಅಭ್ಯಾಸಗಳು” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ ಸಂಘಗಳು, ನೀರಿನ ಟ್ಯಾಂಕರ್ ನಿರ್ವಾಹಕರು ಮತ್ತು ಸಂಸ್ಕರಿಸಿದ ನೀರಿನ ಕೈಗಾರಿಕಾ ಖರೀದಿದಾರರು ವರ್ತುಲ ಜಲ ನಿರ್ವಹಣೆಯ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಜತೆಗೆ ಬೆಂಗಳೂರಿನ (Bengaluru) ನೀರಿನ ಬಿಕ್ಕಟ್ಟನ್ನು ಪರಿಹರಿಸಲು […]
ಬೆಂಗಳೂರಿನಲ್ಲಿ ಕಪಿಲ್ ದೇವ್-ಗ್ರಾಂಟ್ ಥಾರ್ನ್ಟನ್ ಇನ್ವಿಟೇಷನಲ್ 2025 ಪ್ರಾರಂಭ

ಬೆಂಗಳೂರು: ಕಪಿಲ್ ದೇವ್- ಗ್ರಾಂಟ್ ಥಾರ್ನ್ಟನ್ ಇನ್ವಿಟೇಷನಲ್ 2025 ಇಂದು ಬೆಂಗಳೂರಿನ (Bengaluru) ಪ್ರತಿಷ್ಠಿತ ಪ್ರೆಸ್ಟೀಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಪ್ರಾರಂಭವಾಯಿತು. ಮೊಟ್ಟಮೊದಲ ಬಾರಿಗೆ ಭಾರತದ ಮುಂಚೂಣಿಯ ಪುರುಷ ಹಾಗೂ ಮಹಿಳಾ ವೃತ್ತಿಪರರು ಪರಸ್ಪರ ರೂ.2 ಕೋಟಿಗಳ ಬಹುಮಾನಕ್ಕೆ ಹಣಾಹಣಿ ನಡೆಸಲಿದ್ದು ಈ ಕ್ರೀಡೆಗೆ ಮಹತ್ತರ ಕ್ಷಣವಾಗಿಸಿದೆ. ಖ್ಯಾತ ಕ್ರಿಕೆಟ್ ಪಟು ಕಪಿಲ್ ದೇವ್ (Kapil Dev) ಮತ್ತು ಪ್ರೀಮಿಯಂ ಕನ್ಸಲ್ಟಿಂಗ್ ಸಂಸ್ಥೆ ಗ್ರಾಂಟ್ ಥಾರ್ನ್ಟನ್ ಭಾರತ್ ಜಂಟಿಯಾಗಿ ಪ್ರಸ್ತುತಪಡಿಸುತ್ತಿರುವ ಈ ಟೂರ್ನಮೆಂಟ್ ಅನ್ನು ಪ್ರೊಫೆಷನಲ್ […]
Jammu and Kashmir: ಭಾರತೀಯ ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ… ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಉಗ್ರರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಭಾರತೀಯ ಸೇನೆ ಮುಂದಾಗಿದೆ. ಇದೀಗ ಭಯೋತ್ಪಾದಕರನ್ನು ಸದೆಬಡೆಯಲು ಕಾಲ ಕೂಡಿ ಬಂದಿದೆ. ಇಂದು ಉಧಂಪೂರ್ ಬಳಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪಿನ ನಡುವೆ ಘರ್ಷಣೆ ಪ್ರಾರಂಭವಾಗಿದೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ (Soldier) ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ (ಏ.24) ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ […]
ಮಿಜೋರಾಂ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಂಡ ಟೊಯೋಟಾ

ಬೆಂಗಳೂರು: ಈಶಾನ್ಯ ಭಾರತದಲ್ಲಿ ಸಮಗ್ರ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಸಾಗುತ್ತಿರುವ ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇದೀಗ ಆ ರಾಜ್ಯದಲ್ಲಿನ ಸಮಗ್ರ ಸಮುದಾಯ ಅಭಿವೃದ್ಧಿಗೆ ಮಿಜೋರಾಂ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಮಿಜೋರಾಂನ ಐಜಾಲ್ ನಲ್ಲಿ ಎಂಓಯು ವಿನಿಮಯ ಸಮಾರಂಭವು ನಡೆದಿದ್ದು, ಇದು ಸಮುದಾಯ ಕೇಂದ್ರಿತ ಸಿಎಸ್ಆರ್ ಯೋಜನೆಗಳ ಮೂಲಕ ಈ ಪ್ರದೇಶದ ಪ್ರಗತಿಗೆ ಕೊಡುಗೆ ನೀಡುತ್ತಿರುವ ಟಿಕೆಎಂನ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಈ ಸಹಭಾಗಿತ್ವದ ಅಡಿಯಲ್ಲಿ ಟಿಕೆಎಂ […]
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪ್ರತೀಕಾರದ ಭರವಸೆ ನೀಡಿದ ಅಮಿತ್ ಶಾ

ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಪಹಲ್ಗಾಮ್ (Pahalgam) ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ಮಾಡಿದ್ದಾರೆ. ದಾಳಿಯಲ್ಲಿ ಮೃತಪಟ್ಟವರ ಕಳೆಬರಹಗಳಿಗೆ ಅಂತಿಮ ನಮನ ಸಲ್ಲಿಸಿದ ಅಮಿತ್ ಶಾ ನಂತರ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು, ಬಹುತೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು […]
ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ ಖರೀದಿಸುವ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯಗಳಿವು!

ಇತ್ತೀಚೆಗೆ ಹೊಸ ಹೊಸ ಫೀಚರ್ಸ್ಗಳನ್ನು ಹೊಂದಿರುವ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಬರುತ್ತಿದೆ. ಆದರೆ ಈ ಹೊಸ ಸ್ಮಾರ್ಟ್ಫೋನ್ (Smartphone) ಖರೀದಿಸಲು ಕೆಲವರಿಗೆ ಬಜೆಟ್ ಇರಲ್ಲ. ಸ್ಮಾರ್ಟ್ಫೋನ್ಗಳ ಬೆಲೆಗಳು ಏರಿಕೆಯಾಗುವುದರಿಂದ ಜನರು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ಗಳನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ಆದರೆ ಸೆಕೆಂಡ್ ಹ್ಯಾಂಡ್ ಫೋನ್ ಖರೀದಿಸುವ ಮೊದಲು ಪರಿಗಣಿಸಬೇಕಾದ ಕೆಲವು ಅಂಶಗಳ ಬಗ್ಗೆ ಮಾಹಿತಿ ಇಲ್ಲಿದೆ. * ನೀವು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ ಖರೀದಿಸುವ ಬಗ್ಗೆ ಯೋಚಿಸಿದಾಗ, ಅರ್ಧ ಬೆಲೆಗೆ ಹೊಸ ಸ್ಮಾರ್ಟ್ಫೋನ್ ಖರೀದಿಸಲು ಆತುರಪಡಬೇಡಿ. ಎಲ್ಲಾ ಟೆಕ್ನಿಕಲ್ […]
ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಸುವರ್ಣವಾಕಾಶ: ವಿಶೇಷ ಶಿಬಿರ

ಕ್ರೀಡೆಯಲ್ಲಿ (sports) ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಕ್ರೀಡಾ ವಸತಿ ಮತ್ತು ನಿಲಯಗಳಲ್ಲಿ ಪ್ರವೇಶಾವಕಾಶ ನೀಡುವ ಸಲುವಾಗಿ ಆಯ್ಕೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 2 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, […]
ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ ಆಡಳಿತ ಮಂಡಳಿಗೆ ಇಶಾ ಅಂಬಾನಿ ಸೇರ್ಪಡೆ

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ (ಎಫ್ಐವಿಬಿ) ಆಡಳಿತ ಮಂಡಳಿಗೆ ಇಶಾ ಅಂಬಾನಿ (Isha Ambani) ಮತ್ತು ಲೂಯಿಸ್ ಬಾವ್ಡೆನ್ ಸೇರ್ಪಡೆಯಾಗಿದ್ದಾರೆ. 2024-2028ರ ಒಲಿಂಪಿಕ್ಸ್ ಸಾಲಿಗೆ ಈ ನೇಮಕಾತಿಯನ್ನು ಮಾಡಿರುವುದನ್ನು ಎಫ್ಐವಿಬಿ ಘೋಷಿಸಿದೆ. ಈ ಮೂಲಕ ಸಂಸ್ಥೆಯ ಅತ್ಯುನ್ನತ ಮಟ್ಟದಲ್ಲಿ ಹೊಸ ದೃಷ್ಟಿಕೋನ, ವ್ಯವಹಾರ ಕುಶಾಗ್ರಮತಿ ಮತ್ತು ಕ್ರೀಡಾಪಟುಗಳ ಪ್ರಾತಿನಿಧ್ಯವನ್ನು ತರಲಾಗಿದೆ. ಎಫ್ಐವಿಬಿ ಸಂವಿಧಾನದ ವಿಧಿ 2.4.1.5 ರ ಅಡಿಯಲ್ಲಿ ಅಂಬಾನಿ ಮತ್ತು ಬಾವ್ಡೆನ್ ಅವರನ್ನು ನೇಮಿಸಲಾಗಿದೆ, ಇದು ಎಫ್ಐವಿಬಿ ಅಧ್ಯಕ್ಷರು, ವಿಭಿನ್ನ ವರ್ಗಗಳಲ್ಲಿ ನಾಲ್ಕು ಹೆಚ್ಚುವರಿ ಮಂಡಳಿ ಸದಸ್ಯರನ್ನು […]
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗಾಗಿ ಸೂಪರ್ “ಮ್ಯಾಕ್ಸ್ಸೇವರ್” ಕೊಡುಗೆ ಘೋಷಣೆ

ತ್ವರಿತ ಇ-ಕಾಮರ್ಸ್ ತಾಣವಾದ ಸ್ವಿಗ್ಗಿ (Swiggy) ಇನ್ಸ್ಟಾಮಾರ್ಟ್ ತನ್ನ ಗ್ರಾಹಕರಿಗಾಗಿ “ಮ್ಯಾಕ್ಸ್ಸೇವರ್” ಎಂಬ ವಿನೂತನ ಸೇವೆ ಆರಂಭಿಸಿದ್ದು, ತಮ್ಮ ಪ್ರತಿ ಆರ್ಡರ್ಗಳ ಮೇಲೆ 500 ರೂ.ವರೆಗೂ ಉಳಿತಾಯ ಮಾಡಬಹುದು. ಇತ್ತೀಚೆಗೆ ರಾಷ್ಟ್ರದಾದ್ಯಂತ 100 ನಗರಗಳಿಗೆ ವಿಸ್ತರಣೆಯನ್ನು ಘೋಷಿಸಿದ್ದ ಸ್ವಿಗ್ಗಿ ಇನ್ಸ್ಟಾಮಾರ್ಟ್, ಈ ನಗರಗಳಲ್ಲಿನ ಬಳಕೆದಾರರಿಗೆ ಮ್ಯಾಕ್ಸ್ಸೇವರ್ ಅನ್ನು ಪ್ರಾರಂಭಿಸಿದೆ. ಸ್ವಿಗ್ಗಿ ಮ್ಯಾಕ್ಸ್ಸೇವರ್ ಬಳಸುವ ಗ್ರಾಹಕರು ಎಲ್ಲಾ ವಿಭಾಗದಲ್ಲೂ ಉತ್ತಮ ಡಿಸ್ಕೌಂಟ್ ಪಡೆಯಬಹುದು. ಅದರಲ್ಲೂಪ್ರತಿನಿತ್ಯ ಬಳಕೆಯ ದಿನಸಿಯಿಂದ ಹಿಡಿದು ಎಲೆಕ್ಟ್ರಾನಿಕ್ಸ್, ಸ್ಮಾರ್ಟ್ಫೋನ್, ಫ್ಯಾಷನ್, ಮೇಕಪ್, ಆಟಿಕೆಗಳು ಸೇರಿದಂತೆ 35,000 […]