ಪತ್ರಕರ್ತರ ಸಂಘದಿಂದ ಏಪ್ರಿಲ್ 11ರಂದು ಸುಂಟಿಕೊಪ್ಪದಲ್ಲಿ ಮಾಧ್ಯಮ ಸಂವಾದ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ಏ.೧೧ರ ಶುಕ್ರವಾರ ಬೆಳಗ್ಗೆ ೧೦.೩೦ ಗಂಟೆಗೆ ಸುಂಟಿಕೊಪ್ಪದ ವಿಎಸ್ಎಸ್ಎನ್ ಸಭಾಂಗಣದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಸಂವಾದದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಭಾರ ಉಪ ತಹಶೀಲ್ದಾರ್ ಎನ್.ಆರ್. ಪ್ರಶಾಂತ್, ಸುಂಟಿಕೊಪ್ಪ ಗ್ರಾಮ […]
ವಿಶೇಷ ಕಾರ್ಯಕ್ರಮದ ಮೂಲಕ ಅನಾಥ ಹೆಣ್ಣು ಮಕ್ಕಳಿಗೆ ನೆರವು

ಬೆಂಗಳೂರು: ನೆಲೆ ಫೌಂಡೇಶನ್ನಲ್ಲಿ ನೆಲೆಸಿರುವ 50 ಹೆಣ್ಣು ಮಕ್ಕಳಿಗೆ (Girls) ನೆರವಾಗುವ ನಿಟ್ಟಿನಲ್ಲಿ ವಿಜಯನಗರದ ಕಾಸಿಯಾ ಭವನದಲ್ಲಿ ಶೈನಿಂಗ್ ಸ್ಟಾರ್ಸ್ ವಿಶೇಷ ಕಾರ್ಯಕ್ರಮವನ್ನು (program) ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಫ್ಯಾಷನ್ ಶೋ, ತಾಯಿ ಮಗುವಿನ ರ್ಯಾಂಪ್ ವಾಕ್, ಮಹಿಳೆಯರ ವಿಭಿನ್ನ ರೀತಿಯ ಸ್ಯಾರಿ ರ್ಯಾಂಪ್ ವಾಕ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಮೂಲಕ ಸಂಗ್ರಹವಾಗುವ ಹಣವನ್ನು ಫೌಂಡೇಶನ್ ಗೆ ನೀಡಲಾಗುತ್ತದೆ. ಅನ್ಷುಲಾ ಲೇಡೀಸ್ ಎಂಟ್ರಿಪ್ರಿನರ್ ಕ್ಲಬ್ ಮತ್ತು ಮಧುರಾ ವುಮೆನ್ಸ್ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ […]
2 ವರ್ಷದ ಮಕ್ಕಳಲ್ಲೂ ಕಂಡುಬರುತ್ತಿದೆ ಮಲಬದ್ಧತೆ ಸಮಸ್ಯೆ: ಏಕೆ ನಿರ್ಲಕ್ಷಿಸಬಾರದು?

ಮಲಬದ್ಧತೆ ಎಂಬುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಆದ್ರೆ ಇತ್ತೀಚಿಗೆ ತೀರಾ 2 ವರ್ಷದ ಮಕ್ಕಳಲ್ಲೂ ಮಲಬದ್ಧತೆ ಕಂಡುಬರುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ ಎನ್ನುತ್ತಾರೆ ಬೆಂಗಳೂರಿನ ವಾಸವಿ ಆಸ್ಪತ್ರೆಯ ತಜ್ಞರು. ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬರಲು ಕಾರಣವೇನು ಎಂದು ನೋಡಿದಾಗ ಈಗಿನ ಆಹಾರ ಪದ್ಧತಿ ಪ್ರಮುಖವಾಗಿದೆ. ಅನಾರೋಗ್ಯಕರ ಆಹಾರ ಸೇವನೆ, ಜಂಕ್ ಫುಡ್, ಬ್ರೆಡ್, ಬಿಸ್ಕತ್ ಮತ್ತು ರಸ್ಕ್ಗಳ ಅತಿಯಾದ ಸೇವನೆ, ತರಕಾರಿ ಮತ್ತು ಹಣ್ಣುಗಳಂತಹ ಫೈಬರ್ ಭರಿತ ಆಹಾರ ಸೇವನೆಯ ಕೊರತೆ ಮತ್ತು […]
ಭಾರತದ ಅತೀ ವೇಗದ ಇಂಟರ್ನೆಟ್ ಪೂರೈಕೆಯಲ್ಲಿ ನಂ.1 ಕಂಪನಿ ಯಾವುದು ಗೊತ್ತೇ?

2024ರ ದ್ವಿತೀಯಾರ್ಧದಲ್ಲಿ ಜಿಯೋ (Jio) ಎಲ್ಲಾ ತಂತ್ರಜ್ಞಾನಗಳಲ್ಲಿ ಮತ್ತು ನಿರ್ದಿಷ್ಟವಾಗಿ 5 ಜಿಗಾಗಿ ಭಾರತದಲ್ಲಿ ಅತ್ಯಂತ ವೇಗದ ಮೊಬೈಲ್ ಇಂಟರ್ನೆಟ್ (Internet) ಪೂರೈಕೆದಾರನಾಗಿದೆ ಎಂದು ನೆಟ್ವರ್ಕ್ ಗುಪ್ತಚರ ಮತ್ತು ಸಂಪರ್ಕ ಒಳನೋಟಗಳ ವೇದಿಕೆಯಾದ ಓಕ್ಲಾ ವರದಿಯಲ್ಲಿ ಪ್ರಕಟಿಸಿದೆ. ಓಕ್ಲಾ ಪ್ರಕಾರ, ಜಿಯೋ ಸರಾಸರಿ 5 ಜಿ ಡೌನ್ಲೋಡ್ ವೇಗವನ್ನು 258.54 ಎಂಬಿಪಿಎಸ್ ಮತ್ತು ಅಪ್ಲೋಡ್ ವೇಗವನ್ನು 14.54 ಎಂಬಿಪಿಎಸ್ ದಾಖಲಿಸಿದೆ. ಅಂತೆಯೇ, ವೇಗದ ಮೊಬೈಲ್ ನೆಟ್ವರ್ಕ್ ಮತ್ತು ಅತ್ಯುತ್ತಮ ಮೊಬೈಲ್ ವ್ಯಾಪ್ತಿ ಎರಡರಲ್ಲೂ ಮುಂಚೂಣಿಯಲ್ಲಿದ್ದ ಜಿಯೋ ಈ […]
ರಾಷ್ಟ್ರ ರಾಜಧಾನಿಯಲ್ಲಿ ಲೋಕಾರ್ಪಣೆಗೊಂಡಿತು ನೂತನ ಕರ್ನಾಟಕ ಭವನ – ಇಲ್ಲಿದೆ ನೋಡಿ ವರ್ಣರಂಜಿತ ಫೋಟೋಸ್..!

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ನಿನ್ನೆ ನೂತನ ಕರ್ನಾಟಕ ಭವನ(karnataka bhavan) ಲೋಕಾರ್ಪಣೆಗೊಂಡಿದೆ. ಜಗಮಗಿಸುವ ಬೆಳಕಿನ ವೈಯ್ಯಾರದಲ್ಲಿ ಕಂಗೊಳಿಸಿದ ಕರ್ನಾಟಕ ಭವನದ ಚಿತ್ರಣ ಇಲ್ಲಿದೆ ನೋಡಿ.
ಏಪ್ರಿಲ್ 05, 06ರಂದು ಮಂಜಿನ ನಗರಿಯಲ್ಲಿ ವೈಭವದ ಕೋದಂಡ ರಾಮೋತ್ಸವ – ಎರಡು ದಿನ ಏನೇನಿರಲಿದೆ..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..!

ಮಡಿಕೇರಿ : ಮಡಿಕೇರಿಯ(Madikeri) ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ(kodanda ramotsava) ಸಮಿತಿ ವತಿಯಿಂದ ಏ.೫ ಮತ್ತು ೬ ರಂದು ೩೫ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸ್ವಾಗತ ಸಮಿತಿ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.೫ ರಂದು ಸಂಜೆ ೪ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು. ಮೆರವಣಿಗೆಯಲ್ಲಿ […]
ಯುಗಾದಿ, ರಂಜಾನ್ ಹಬ್ಬಕ್ಕೆ KSRTC 2 ಸಾವಿರ ವಿಶೇಷ ಬಸ್: ಮುಂಗಡ ಬುಕ್ಕಿಂಗ್ಗೆ ಡಿಸ್ಕೌಂಟ್

ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ (KSRTC) ವತಿಯಿಂದ 2000 ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್ಗಳು ಮಾರ್ಚ್ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ. ಈ ಬಗ್ಗೆ ಕೆಎಸ್ಆರ್ಟಿಸಿ ಪ್ರಕಟಣೆ ನೀಡಿದೆ. ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ […]
ಯುಗಾದಿ ಪ್ರಯುಕ್ತ AI ತಂತ್ರಜ್ಞಾನದ ಸ್ಯಾಮ್ಸಂಗ್ ಟಿವಿಗಳ ಮೇಲೆ ಬಂಪರ್ ಆಫರ್

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್ಸಂಗ್ ಕಂಪನಿಯು ಯುಗಾದಿ ಹಬ್ಬ ಸಂಭ್ರಮದ ಸಲುವಾಗಿ ತನ್ನ ಪ್ರೀಮಿಯಂ ಎಐ ದೊಡ್ಡ ಸ್ಕ್ರೀನ್ ಟಿವಿಗಳಾದ ನಿಯೋ ಕ್ಯೂಎಲ್ಇಡಿ 8 ಕೆ, ನಿಯೋ ಕ್ಯೂಎಲ್ಇಡಿ 4 ಕೆ, ಓಎಲ್ಇಡಿ ಮತ್ತು ಕ್ರಿಸ್ಟಲ್ 4 ಕೆ ಯುಎಚ್ಡಿ ಟಿವಿ ಮಾಡೆಲ್ ಗಳ ಮೇಲೆ ವಿಶೇಷ ಆಫರ್ ಗಳನ್ನು ಘೋಷಿಸಿದೆ. ಮಾರ್ಚ್ 5 ರಿಂದ ಮಾರ್ಚ್ 31, 2025 ರವರೆಗೆ ನಡೆಯುವ ಈ ಹಬ್ಬದ ಅಭಿಯಾನವು ಗ್ರಾಹಕರಿಗೆ ತಮ್ಮ ಮನೆಯ […]
ಡಿಜಿಟಲ್ ಪೇಮೆಂಟ್ ಮಾಡುವರಿಗೆ ಇಲ್ಲಿದೆ ನೋಡಿ ಟಿಪ್ಸ್

ಮಳಿಗೆಯಲ್ಲಿ ಶಾಪಿಂಗ್ ಮಾಡುವಾಗ, ಆನ್ ಲೈನ್ ನಲ್ಲಿ ಅಥವಾ ಪ್ರಯಾಣ ಮಾಡುವಾಗಲೇ ಇರಲಿ ಜನರು ಇಂದು ಹಣವನ್ನು ಡಿಜಿಟಲ್ ಮೂಲಕವೇ ಪಾವತಿ (Digital Payments) ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುರಕ್ಷಿತವಾಗಿ ಮತ್ತು ಬುದ್ಧಿವಂತಿಕೆಯಿಂದ ಪಾವತಿ ಮಾಡುವುದು ಮುಖ್ಯವಾದ್ದರಿಂದ ಈ ಸಲದ ಡಿಜಿಟಲ್ ಪಾವತಿ ಜಾಗೃತಿ ಸಪ್ತಾಹ ಸಂದರ್ಭದಲ್ಲಿ ವೀಸಾ ನೀಡುತ್ತಿರುವ ಸಲಹೆಗಳು ಇಲ್ಲಿದೆ. * ಸುರಕ್ಷಿತ ಸಂಪರ್ಕರಹಿತ ಪಾವತಿಗಾಗಿ ಫೋನ್ ನಲ್ಲಿ ಕಾರ್ಡ್ ಗಳನ್ನು ಸೇವ್ ಮಾಡಿ: ಬ್ಯಾಂಕಿಂಗ್ ಮತ್ತು ಪಾವತಿ ಆಪ್ ಗಳಲ್ಲಿ ನಿಮ್ಮ ಕಾರ್ಡ್ […]
ಗೃಹಲಕ್ಷ್ಮಿ ಹಣ ಬೇಕಾದ್ರೆ ಹೀಗೆ ಮಾಡಿ: ಇಲ್ಲದಿದ್ರೆ ಬಂದ್!

ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಕೂಡ ಒಂದಾಗಿದೆ. ಈ ಯೋಜನೆಯಡಿ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮಾ ಆಗುತ್ತೆ. ಇದರಿಂದ ರಾಜ್ಯಾದ್ಯಂತ ತುಂಬಾ ಮಹಿಳೆಯರಿಗೆ ಸಹಾಯವಾಗಿದ್ದು, ಉತ್ತಮ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಇದೀಗ ಈ ಹಣ ಖಾತೆಗೆ ಹಾಕಲು ಕೆಲವು ನಿಯಮಗಳನ್ನು ಮಾಡಲಾಗಿದೆ. ಈ ಗೃಹಲಕ್ಷ್ಮಿ ಯೋಜನೆಯಲ್ಲಿನ (Gruha Lakshmi scheme) ತಾಂತ್ರಿಕ ತೊಂದರೆಗಳನ್ನು ಸರಿಪಡಿಸಲಾಗಿದೆ. ಯಾರೂ ಆತಂಕಪಡಿವ ಅಗತ್ಯ ಇಲ್ಲ. ಮಹಿಳೆಯರ ಖಾತೆಗೆ […]