ಡಿ. 21ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ

ಪೊನ್ನಂಪೇಟೆ: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ ಸಹ ಪ್ರಾಯೋಜಕತ್ವದಲ್ಲಿ 4ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2025 ಅನ್ನು ಇದೇ ಡಿ.21ರಿಂದ 25ರವರೆಗೆ ಆಯೋಜಿಸಲಾಗಿದೆ. ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ ಈ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ವಿ. ಬಾಡಗ ಹೈಪ್ಲೈಯರ್ಸ್ ತಂಡದ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ […]

ಕೊಡವ ಮುಸ್ಲಿಂ ಸ್ಪೋರ್ಟ್ಸ್‌ ಅಕಾಡೆಮಿ ನಿಯೋಗದಿಂದ ಸಿ.ಎಸ್.‌ ಅರುಣ್‌ ಮಾಚಯ್ಯ ಭೇಟಿ

ಪೊನ್ನಂಪೇಟೆ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಲಾಯಿತು. ಅಧ್ಯಕ್ಷ ಆಲೀರ ರಶೀದ್ ನೇತೃತ್ವದ ನಿಯೋಗ ಗೋಣಿಕೊಪ್ಪಲಿನ ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿತು. ಜೊತೆಗೆ ಸಂಸ್ಥೆಯ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ಪಡೆಯಿತು. ಕೆ.ಎಂ.ಎಸ್.ಎ. ಅಧ್ಯಕ್ಷ ರಶೀದ್ ಮಾತನಾಡಿ, ಸಂಸ್ಥೆ ಕ್ರೀಡಾ ಚಟುವಟಿಕೆಗಳ […]

ಕೊಡವರು ಎಂದರೆ ಹಾಕಿ, ಹಾಕಿ ಅಂದ್ರೆ ಕೊಡವರು – ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಂಗಳೂರು : ಏ.5ರಿಂದ ಮೇ.2ರವರೆಗೆ ನಾಪೋಕ್ಲುವಿನ ಜ.ತಿಮ್ಮಯ್ಯ ಮೈದಾನದಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ‘ಚೇನಂಡ ಕಪ್ ಹಾಕಿ’ ಉತ್ಸವದ ಲಾಂಛನವನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದರು. ಚೇನಂಡ ಹಾಕಿ ಪಂದ್ಯಾವಳಿಗೆ […]

Cristiano Ronaldo: ಕ್ರಿಸ್ಟಿಯಾನೋ ರೊನಾಲ್ಡೊ ಭಾರತ ಭೇಟಿ ರದ್ದು: ಕಾರಣವೇನು?

AFC Champions League -2 ಫುಟ್ಬಾಲ್ ಟೂರ್ನಿಯಲ್ಲಿ ಮಂಗಳವಾರ AFC ಗೋವಾ ಫುಟ್ಬಾಲ್ ತಂಡದ ವಿರುದ್ದ ಸೌದಿ ಅರೇಬಿಯಾದ ಅಲ್-ನಸ್ರ್ ಕ್ಲಬ್ ಪರ ಆಡಬೇಕಿದ್ದ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ(Cristiano Ronaldo) ಅವರ ಭಾರತ ಭೇಟಿ ರದ್ದುಗೊಂಡಿದೆ. ಸೋಮವಾರ ಭಾರತಕ್ಕೆ ಆಗಮಿಸಿದ ಅಲ್ ನಸ್ರ್(Al Nassr) ತಂಡದಲ್ಲಿ ರೊನಾಲ್ಡ್ ಇಲ್ಲ. ರೊನಾಲ್ಡ್ ತಮ್ಮ ಸೌದಿ ಕ್ಲಬ್ ತಂಡದೊಂದಿಗೆ ಭಾರತಕ್ಕೆ ಪ್ರವಾಸ ಕೈಗೊಳ್ಳಬೇಕಿತ್ತು.ಆದರೆ ಒಪ್ಪಂದದ ಪ್ರಕಾರ ಪಂದ್ಯ ಆಯ್ಕೆ ಮಾಡಿ ಕೊಳ್ಳುವ ಅಧಿಕಾರ ರೊನಾಲ್ಡೊ ಅವರಿಗಿರುವ ಕಾರಣ, […]

ನಗು ನಿಲ್ಲಿಸಿದ ರಾಜು ತಾಳಿಕೋಟೆ – ಹೃದಯಾಘಾತದಿಂದ ಜನಪ್ರಿಯ ಹಾಸ್ಯನಟನ ಬಾಳ ಅಂತ್ಯ..!

ಉಡುಪಿ : ಕನ್ನಡ ರಂಗಭೂಮಿ ಹಾಗೂ ಚಿತ್ರರಂಗದ ಪ್ರಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ(58) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೈನ್‌ ಶೆಟ್ಟಿ ನಟನೆಯ ಚಿತ್ರವೊಂದರ ಚಿತ್ರೀಕರಣಕ್ಕಾಗಿ ಉಡುಪಿಗೆ ಆಗಮಿಸಿದ್ದರು. ನಿನ್ನೆ ಚಿತ್ರೀಕರಣ ಮುಗಿಸಿ ವಿಶ್ರಾಂತಿಯಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಉಡುಪಿಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಈ ಹಿಂದೊಮ್ಮೆ ಹೃದಯಾಘಾತಕ್ಕೊಳಗಾಗಿದ್ದ ಅವರಿಗೆ ಸ್ಟಂಟ್‌ ಅಳವಡಿಸಲಾಗಿತ್ತು ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ಅವರ ಹುಟ್ಟೂರಿಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ರಾಜು ತಾಳಿಕೋಟೆ ಅವರ ಬಗ್ಗೆ ಒಂದಷ್ಟು ಮಾಹಿತಿ. […]

ಹೀರೋ ಏಷ್ಯಾ ಕಪ್‌ ಹಾಕಿ ಟೂರ್ನಿ : ಚಾಂಪಿಯನ್‌ ಆಗಿ ಹೊರಹೊಮ್ಮಿದ ಟೀಂ ಇಂಡಿಯಾ – ವಿಶ್ವಕಪ್‌ಗೆ ಪ್ರವೇಶ ಪಡೆದ ಹರ್ಮನ್‌ಪ್ರೀತ್‌ ಪಡೆ…

ಒಡಿಸ್ಸಾ : ಅಮೋಘ ಪ್ರದರ್ಶನ ನೀಡಿದ ಭಾರತ ಹಾಕಿ ತಂಡ ಏಷ್ಯಾ ಕಪ್‌ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾತ್ರಿ ನಡೆದ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಆಗಿದ್ದ ಕೊರಿಯಾ ವಿರುದ್ಧ 4-1 ಗೋಲುಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ನಾಲ್ಕನೇ ಬಾರಿಗೆ ಭಾರತ ಏಷ್ಯಾ ಕಪ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಪಂದ್ಯದ ಆರಂಭದಿಂದಲೇ ಬಿರುಸಿನ ಆಟಕ್ಕೆ ಮುಂದಾದ ಟೀಂ ಇಂಡಿಯಾ ಆಟಗಾರರು ಕೊರಿಯಾ ಆಟಗಾರರಿಗೆ ಪಂದ್ಯದಲ್ಲಿ ಹಿಡಿತ ಸಾಧಿಸುವುದಕ್ಕೆ ಅವಕಾಶವನ್ನೇ ಕೊಡಲಿಲ್ಲ. ಪೆನಾಲ್ಟಿ ಕಾರ್ನರ್‌ ಅವಕಾಶದ […]

ವಾಲಿಬಾಲ್‌ ಪಂದ್ಯಾವಳಿ – ಬೇಟೋಳಿ ಸ.ಹಿ.ಪ್ರಾ. ಶಾಲೆ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವೀರಾಜಪೇಟೆ : ಗುಂಡಿಕೆರೆ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದೆ. ಮಾಯಮುಡಿಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀಮಂಗಳ ಸಮೀಪದ ಕಾಕೂರಿನ ಜೆ. ಸಿ. ಶಾಲಾ ತಂಡವನ್ನು 21-15 ಮತ್ತು 21-12 ನೇರ ಸೆಟ್ಟುಗಳಿಂದ ಸೋಲಿಸಿ ವಿನ್ನರ್ಸ್ ಪ್ರಶಸ್ತಿಯನ್ನು ತನ್ನದಾಗಿಸುವ ಮೂಲಕ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ತಂಡ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದೆ. […]

ದಕ್ಷಿಣ ವಲಯ ಮಟ್ಟದ ಬ್ಯಾಡ್ಮಿಂಟನ್ – ಕೊಡಗಿನ ದಿಯಾ ಭೀಮಯ್ಯಗೆ ಪ್ರಶಸ್ತಿ

ತೆಲಂಗಾಣ : ಹೈದರಾಬಾದ್‌ನ ಹಾರ್ಟ್ಫುಲ್ನೆಸ್ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನಡೆದ ಯೋನೆಕ್ಸ್ ಸನ್ ರೈಸ್ 79ನೇ ದಕ್ಷಿಣ ವಲಯ ಅಂತಾರಾಜ್ಯ ಬ್ಯಾಡ್ಮಿಂಟನ್ 2025 ಸ್ಪರ್ಧೆಯಲ್ಲಿ ಕೊಡಗಿನ ದಿಯಾ ಭೀಮಯ್ಯ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ 19 ವರ್ಷದ ಬಾಲಕಿಯರ ಸಿಂಗಲ್ಸ್‌ನಲ್ಲಿ ದ್ವಿತೀಯ ಹಾಗೂ ತಂಡ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ. ಸೆಪ್ಟೆಂಬರ್ 2 ರಿಂದ 5ನೇ ತಾರೀಖಿನವರೆಗೆ ಸ್ಪರ್ಧೆ ನಡೆಯಿತು. ದೇಶದ ವಿವಿಧ ಕಡೆಗಳಿಂದ ಸ್ಪರ್ಧಿಗಳು ಹಾಗೂ ತಂಡಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.

ರೋಲರ್‌ ಸ್ಕೇಟಿಂಗ್‌ ಚಾಂಪಿಯನ್‌ಶಿಪ್ ವಿಜೇತರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತರಾದ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಉಪಸ್ಥಿತರಿದ್ದರು.  

ರಾಷ್ಟ್ರೀಯ ಜೂನಿಯರ್‌ ಹಾಕಿ – ಕರ್ನಾಟಕ ತಂಡದಲ್ಲಿ ಕೊಡಗಿನ 11 ಮಂದಿ ಆಟಗಾರರು..!

ಮಡಿಕೇರಿ : ಹಾಕಿ ಇಂಡಿಯಾ ವತಿಯಿಂದ ಪಂಜಾಬ್‌ನಲ್ಲಿ ನಡೆಯಲಿರುವ ಹಾಕಿ ಇಂಡಿಯಾ ಜೂನಿಯರ್‌ ಮೆನ್ಸ್‌ ನ್ಯಾಷನಲ್‌ ಚಾಂಪಿಯನ್‌ಶಿಪ್‌ 2025 ಹಾಕಿ ಟೂರ್ನಿಗೆ ರಾಜ್ರ ತಂಡ ಪ್ರಕಟವಾಗಿದ್ದು, ಕೊಡಗಿನ 11 ಮಂದಿ ಆಟಗಾರರು ಅವಕಾಶ ಗಿಟ್ಟಿಸಿದ್ದಾರೆ. ನಾಯಕರಾಗಿ ಕೊಡಗಿನ ಬಿ.ಎಸ್.‌ ಧ್ರುವ, ಆಟಗಾರರಾಗಿ ಬಿದ್ದಾಟಂಡ ಬೋಪಣ್ಣ, ಕುಲ್ಲೇಟಿರ ವಚನ್‌ ಕಾಳಪ್ಪ, ವಿಶ್ವನಾಥ್, ಹರ್ಷಿತ್‌ ಕುಮಾರ್‌, ಮಂಡೇಡ ಅಚ್ಚಯ್ಯ, ಬಲ್ಯಂಡ ಸಂಪನ್‌ ಗಣಪತಿ, ಚೋಯಮಾಡಂಡ ಆಕರ್ಷ್‌ ಬಿದ್ದಪ್ಪ, ಕೆ.ಆರ್.‌ ಪೂಜಿತ್‌, ಕೋಳೆರ ಹೃತಿಕ್‌ ಅಯ್ಯಪ್ಪ, ಚೋಕಿರ ಕುಶಾಲ್‌ ಬೋಪಯ್ಯ ತಂಡದಲ್ಲಿದ್ದಾರೆ. […]