ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ – ಅಜ್ಜಮಾಡ ರಮೇಶ್ ಕುಟ್ಟಪ್ಪರಿಗೆ Coorg Buzz ಬಳಗದಿಂದ ಸನ್ಮಾನ

ಮಡಿಕೇರಿ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಕೊಡಗಿನ ಹಿರಿಯ ಪತ್ರಕರ್ತ, ಪ್ರತಿನಿಧಿ ಪತ್ರಿಕೆಯ ಸ್ಥಾನಿಕ ಸಂಪಾದಕ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರಿಗೆ Coorg Buzz ಬಳಗದಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕೂರ್ಗ್ ಬಝ್ ಸ್ಟುಡಿಯೋದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಳಗದ ಸದಸ್ಯರು ಫಲ ತಾಂಬೂಲ ನೀಡಿ, ಶಾಲು ಹೊದಿಸಿ ಅಭಿನಂದಿಸಿದರು. ರಮೇಶ್ ಕುಟ್ಟಪ್ಪ ಕಳೆದ ಅವಧಿಯಲ್ಲೂ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಅವಧಿಗೆ ಸ್ಪರ್ಧೆ ಬಯಸಿ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿಗಳು ಇಲ್ಲದ […]
ರಾಜ್ಯದಲ್ಲಿ ನವೆಂಬರ್ ಕ್ರಾಂತಿ – ಸಿಎಂ ಬದಲಾವಣೆ..? – ಎ.ಎಸ್. ಪೊನ್ನಣ್ಣ ಹೇಳಿದ್ದೇನು..?

ಮಡಿಕೇರಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸಿಎಂ ಬದಲಾವಣೆಯ ಚರ್ಚೆಯೇ ಅಪ್ರಸ್ತುತ ಎಂದು ಹೇಳಿದ್ದಾರೆ. ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಂಪುಟ ಪುನಾರಚನೆಯನ್ನೇ ‘ಕ್ರಾಂತಿ’ ಅಂತ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಪ್ರಸ್ತುತ, ಅನಗತ್ಯ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆದಿಲ್ಲ. ವರಿಷ್ಠರು ಶಾಸಕರ […]
ಬುರುಡೆ ಗ್ಯಾಂಗ್ ವಿರುದ್ಧ SIT ಕೇಸ್ ದಾಖಲಿಸಿ, ಬಂಧಿಸಲಿ – ಅಪ್ಪಚ್ಚು ರಂಜನ್ ಆಗ್ರಹ..!

ಮಡಿಕೇರಿ : ಧರ್ಮಸ್ಥಳ ಪ್ರಕರಣ ವಿಚಾರವಾಗಿ ಬುರುಡೆ ಗ್ಯಾಂಗ್ಗೆ ತಪ್ಪಿನ ಅರಿವಾಗಿದೆ. ಹಾಗಾಗಿ ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಹಾಕಿದೆ ಎಂದು ಮಾಜಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಹೇಳಿದರು. ಮಡಿಕೇರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬುರುಡೆ ಗ್ಯಾಂಗ್ ಧರ್ಮಸ್ಥಳದ ಖ್ಯಾತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಬುರುಡೆ ಗ್ಯಾಂಗ್ ಹುನ್ನಾರ ಮಾಡಿತ್ತು. ಅದೇ ತಮ್ಮ ಪಾಲಿಗೆ ಉರುಳಾಗ್ತಿದ್ದಂತೆ ಯೂಟರ್ನ್ ಹೊಡೆದಿದೆ. ಸುಳ್ಳು ಪ್ರಕರಣ ದಾಖಲಿಸಿದ್ರೆ ೧೦ ವರ್ಷ ಕಠಿಣ ಶಿಕ್ಷೆ ಇದೆ ಎಂಬುದು ಅರಿವಾಗಿ ಮೂಲ […]
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧ ಆಯ್ಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೊಡಗಿನ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನಲ್ಲೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ವಿವಿಧ ದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಣೆ ಮಾಡಿದ ಅನುಭವ ಇರುವ ರಮೇಶ್ ಕುಟ್ಟಪ್ಪ, ಪ್ರಸ್ತುತ ಪ್ರತಿನಿಧಿ ದಿನಪತ್ರಿಕೆ ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ರಮೇಶ್ ಕುಟ್ಟಪ್ಪ ಅವರಿಗೆ ಕೂರ್ಗ್ ಬಝ್ ಬಳಗದ ವತಿಯಿಂದ ಅಭಿನಂದನೆಗಳು.
ಗ್ಯಾರಂಟಿ ಯೋಜನೆ ಸಂಬಂಧ ಜಿಲ್ಲಾಮಟ್ಟದಲ್ಲಿ ಸಮ್ಮೇಳನ – ಧರ್ಮಜ ಉತ್ತಪ್ಪ

ಮಡಿಕೇರಿ : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಅರ್ಹರಿಗೆ ಬಿಪಿಎಲ್ನಿಂದ ಎಪಿಎಲ್ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ […]
ಯೋಗಾಸನದಲ್ಲಿ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ ಮದೆನಾಡಿನ ಬಿ.ಕೆ. ಸಿಂಚನಾ

ಮಡಿಕೇರಿ : ಯೋಗಾಸನದಲ್ಲಿ ಕೊಡಗಿನ ಸಿಂಚನಾ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ್ದಾಳೆ. ಮದೆನಾಡಿನ ಬಿಜಿಎಸ್ ಶಾಲೆಯ ಆವರಣ ನೂತನ ದಾಖಲೆಗೆ ಸಾಕ್ಷಿಯಾಯಿತು. ಯೋಗಾಸನದಲ್ಲಿ ಈಗಾಗಲೆ 07 ವಿಶ್ವ ದಾಖಲೆ ಮಾಡಿದ್ದ ಸಿಂಚನಾ, ಮಂಗಳವಾರ ಮೂರು ಹೊಸ ದಾಖಲೆ ಸೃಷ್ಟಿಸುವ ಮೂಲಕ 10 ಜಾಗತಿಕ ದಾಖಲೆಯಲ್ಲಿ ತನ್ನ ಹೆಸರು ನಮೂದಿಸಿದ್ದಾರೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಗಾಗಿ ಶಾಲೆಯಲ್ಲಿ ವೇದಿಕೆ ಸಿದ್ಧವಾಗಿತ್ತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಸಮ್ಮುಖದಲ್ಲಿ, ಹಲವು ಗಣ್ಯರ ಉಪಸ್ಥಿತಿಯಲ್ಲಿ ಸಿಂಚನಾ ಹೊಸ […]
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ..!

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುಂದಿನ 05 ವರ್ಷ ನಾನೇ ಮುಖ್ಯಮಂತ್ರಿ ಅಂತ ಎಲ್ಲಾ ಕಡೆ ಹೇಳುತ್ತಾ ಬರುತ್ತಿದ್ದರು ಸಿದ್ದರಾಮಯ್ಯ. ಆದರೆ ಇವತ್ತು ಮಂಗಳೂರಿನಲ್ಲಿ ಅವರಿಂದ ಬಂದ ಪ್ರತಿಕ್ರಿಯೆ ಅಚ್ಚರಿ ಹುಟ್ಟಿಸಿದೆ. ಮುಂದೆ ನೀವೇ ಮುಖ್ಯಮಂತ್ರಿಯಾಗಿರುತ್ತೀರಾ ಅಂತ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ […]
ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧFIR – ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು : ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು. *ಎಸ್ ಐ ಟಿ ವರದಿ* […]
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಉಪಾಧ್ಯಕ್ಷ ಸ್ಥಾನ ಆಕಾಂಕ್ಷಿ ರಮೇಶ್ ಕುಟ್ಟಪ್ಪ ನಾಮಪತ್ರ ಸಲ್ಲಿಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಜ್ಜಮಾಡ ರಮೇಶ್ ಕುಟ್ಟಪ್ಪ ನಾಮಪತ್ರ ಸಲ್ಲಿಸಿದ್ದಾರೆ. 2022- 25ನೇ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಇವರು ಇದೀಗ ಎರಡನೇ ಅವಧಿಗೆ ಆಕಾಂಕ್ಷಿಯಾಗಿ ಸ್ಪರ್ಧಿಸಿದ್ದಾರೆ. 25 ವರ್ಷದಿಂದ ಪತ್ರಕರ್ತ ವೃತ್ತಿಯಲ್ಲಿರುವ ಇವರು ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸಂಘಟನಾತ್ಮಕವಾಗಿಯೂ ಸಕ್ರಿಯರಾಗಿರುವ ಇವರು ಎರಡು ಅವಧಿಗೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ, ಎರಡು […]
ಬೀದಿ ಶ್ವಾನಗಳ ಹಾವಳಿ – ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್..!

ನವದೆಹಲಿ : ಇತ್ತೀಚಿನ ದಿನದಲ್ಲಿ ಬೀದಿ ಶ್ವಾನಗಳ ಹಾವಳಿ ಮಿತಿ ಮೀರಿದೆ. ಈ ಸಮಸ್ಯೆ ಇಂಥದ್ದೇ ಪ್ರದೇಶಕ್ಕೆ ಸೀಮಿತ ಅಂತ ಹೇಳುವುದಕ್ಕಾಗಲ್ಲ. ದೇಶದ ಉದ್ದಗಲಕ್ಕೂ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಈ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಬೀದಿ ಶ್ವಾನಗಳ ಹಾವಳಿ ಹೆಚ್ಚಾದ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ, ಎಲ್ಲಾ ರಾಜ್ಯಗಳಿಂದಲೂ ಬೀದಿ ಶ್ವಾನಗಳ ದಾಳಿ ಬಗ್ಗೆ ವರದಿಗಳು, ದೂರುಗಳು ಬರುತ್ತಿವೆ ಎಂದು ಆತಂಕ […]