Big Breaking News : ಧರ್ಮಸ್ಥಳದಲ್ಲಿ ನೂರಾರು ಶ* ಹೂತಿಟ್ಟ ಕೇಸ್ – ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ..!

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ವ್ಯಕ್ತಿಯೊಬ್ಬ ಹೇಳಿದ ವಿಚಾರ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ(SIT)ವನ್ನು ರಾಜ್ಯ ಸರ್ಕಾರ ರಚಿಸಿದೆ. ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಈ ತಡದ ಮುಖ್ಯಸ್ಥರಾಗಿರಲಿದ್ದು, ಸದಸ್ಯರಾಗಿ ಉಪ ಪೊಲೀಸ್ ಮಹಾನಿರ್ದೇಶಕ ಎಂ.ಎಂ. ಅನುಚೇತ್, ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ, ಪೊಲೀಸ್ ಅಧೀಕ್ಷ ಜಿತೇಂದ್ರ ಕುಮಾರ್ ದಯಾಮ ಇರಲಿದ್ದಾರೆ. ಪ್ರಕರಣದ ತನಿಖೆಯ ಪ್ರಗತಿಯನ್ನು ಆಗಿಂದಾಗ್ಗೆ […]
ಸಿಎಂ ಸಿದ್ದರಾಮಯ್ಯ ಅವರ ಕ್ಷಮೆ ಯಾಚಿಸಿದ ಮೆಟಾ..! – ಕಾರಣ ಏನು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೆಟಾದ (Meta) ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ, ಈ ಕುರಿತು ಮೆಟಾ ತಪ್ಪಾದ ಕನ್ನಡ ಅನುವಾದಕ್ಕಾಗಿ ಕ್ಷಮೆಯಾಚಿಸಿದ್ದು ಜೊತೆ ಆಗಿರುವ ಸಮಸ್ಯೆ ಸರಿಪಡಿಸುವುದಾಗಿ ತಿಳಿಸಿದೆ. ಇತ್ತೀಚೆಗೆ ನಿಧನರಾದ ಹಿರಿಯ ನಟಿ ಸರೋಜಾದೇವಿ ಅವರ ಅಂತಿಮ ದರ್ಶನವನ್ನ ಸಿಎಂ ಸಿದ್ದರಾಮಯ್ಯ ಪಡೆದಿದ್ದರು. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ(CMO) ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಸಂತಾಪ […]
ಹಾಸನದಿಂದ ಬೂಕರ್ವರೆಗೆ ಬಾನು ಮುಷ್ತಾಕ್ ಪಯಣ – Coorg Buzzನಲ್ಲಿ ಪ್ರಸಾರವಾಗಲಿದೆ ಸಾಧಕಿಯ ಸಂದರ್ಶನ..!

ಮಡಿಕೇರಿ : ಸಾಹಿತ್ಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ʼಬೂಕರ್ ಪ್ರಶಸ್ತಿʼ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು Coorg Buzz ಸಂದರ್ಶಿಸಿದೆ. ಹಾಸನದಲ್ಲಿರುವ ಅವರ ಮನೆಗೆ ಭೇಟಿ ನೀಡಿದ ಕೂರ್ಗ್ ಬಜ್ಹ್ ತಂಡ ಅವರನ್ನು ಅಭಿನಂದಿಸಿತು. ಬಳಿಕ ಬಾನು ಮುಷ್ತಾಕ್ ಅವರು ನಮ್ಮ ವಾರದ ವಿಶೇಷ ಪಾಡ್ಕಾಸ್ಟ್ ʼin & out’ಗಾಗಿ ವಿಶೇಷ ಸಂದರ್ಶನ ನೀಡಿದರು. ನಿರಂತರ ಪ್ರವಾಸ, ಪ್ರತಿನಿತ್ಯ ಹಲವಾರು ಕಾರ್ಯಕ್ರಮ, ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಒಂದು ಗಂಟೆ ಕಾಲ ನಮ್ಮ ಮಾತುಕೆಯಲ್ಲಿ ಭಾಗಿಯಾದರು. […]
ಯಲಹಂಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾದ ಮಾಹೆ ಬೆಂಗಳೂರು

ಬೆಂಗಳೂರು: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಬೆಂಗಳೂರು (Bangalore) ಕ್ಯಾಂಪಸ್, ಯಲಹಂಕದಲ್ಲಿನ ವಿವಿಧ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾಗಿದ್ದು, ಅವುಗಳ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿತು. ಆವಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಬಹುಪಯೋಗಿ ಸಭಾಂಗಣವನ್ನು ಯಲಹಂಕ ಶಾಸಕ ಶ್ರೀ ಎಸ್.ಆರ್. ವಿಶ್ವನಾಥ್ ಅವರು ಮತ್ತು ಮಾಹೆ ಬೆಂಗಳೂರಿನ ಹೆಚ್ಚುವರಿ ರಿಜಿಸ್ಟ್ರಾರ್ ಶ್ರೀ ರಾಘವೇಂದ್ರ ಪ್ರಭು ಪಿ. ಉದ್ಘಾಟಿಸಿದರು. ಯಲಹಂಕದ ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ ಸುಧಾರಿಸುವುದು ಮತ್ತು ಸಮುದಾಯ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ […]
ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅರ್ಪಿತಾ ಜಿ. ಎ. ಮಂಡಿಸಿದ್ದ ಮಹಾಪ್ರಬಂಧವನ್ನು ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸೈನ್ಸಸ್ ವಿಭಾಗದಲ್ಲಿ ಅಂಗೀಕರಿಸಿ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಇವರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾರವಾರದ ಇ ಅಂಡ್ ಸಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಎ. ಎಲ್. ಚೂಡಾರತ್ನಾಕರ ಮಾರ್ಗದರ್ಶನದಲ್ಲಿ “Landslide Susceptibility Mapping for Kodagu Region using Machine Learning Techniques” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆಯನ್ನು ಕೈಗೊಂಡು ಮಹಾಪ್ರಬಂಧವನ್ನು ವಿಟಿಯುಗೆ ಸಾಧರಪಡಿಸಿದ್ದಾರೆ. […]
ಸಿನೆಮಾ ಇಂಡಸ್ರ್ಟಿಗೆ ಬಂದ ಮೊದಲ ಕೊಡವತಿ ನಾನು ಎಂದ ರಶ್ಮಿಕಾ ವಿರುದ್ಧ ಆಕ್ರೋಶ, ನಟಿ ಪ್ರೇಮಾ ಹೇಳಿದ್ದೇನು?

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಲಗ್ಗೆ ಇಟ್ಟ ನಟಿ ರಶ್ಮಿಕಾ ಮಂದಣ್ಣ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಈಗ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೊಡವ ಸಮುದಾಯದಿಂದ ಸಿನಿಮಾಗೆ ಬಂದವರಲ್ಲಿ ನಾನೇ ಮೊದಲು ಎಂದು ಹೇಳುವ ಮೂಲಕ ಮತ್ತೊಂದು ವಿವಾದ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಬರ್ಖಾ ದತ್ ಅವರಿಗೆ ರಶ್ಮಿಕಾ ಮಂದಣ್ಣ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ತಮ್ಮನ್ನು ತಾವು ಹೊಗಳಿಕೊಳ್ಳುವ ಭರದಲ್ಲಿ, ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದ ಏಕೈಕ […]
ನೀಲಿ ಸುಂದರಿಯ ಸೌಂದರ್ಯಕ್ಕೆ ಮಾರು ಹೋದರೆ ಮಾರಕವಾಗುವುದು ನಿಶ್ಚಿತ..! – ತಪ್ಪದೆ ಈ ಲೇಖನ ಓದಿ

ನೀಲಿ ಸುಂದರಿ ಕೊಡಗಿನಲ್ಲಿ ಸದ್ದು ಮಾಡ್ತಾ ಇದ್ದಾಳೆ. ಕುಶಾಲನಗರದ ತಾವರೆ ಕೆರೆ ತನ್ನ ಹೆಸರಿಗೆ ವಿರುದ್ಧವಾಗಿ ನೀಲಿ ಬಣ್ಣದ ವಾಟರ್ ಹಯಾಸಿಂತ್ಗೆ ಪ್ರಖ್ಯಾತಿಗೊಳ್ಳುತ್ತಾ ಇದೆ. ಪರಿಸರ ಸಮತೋಲನದ ದೃಷ್ಟಿಯಿಂದ ನೋಡುವುದಾದರೆ ಈಕೆ ನೀಲ ಸುಂದರಿಯಲ್ಲ. ಬ್ಲೂ ಡೆವಿಲ್..! ಇದರ ಬಗ್ಗೆ ಒಂದಷ್ಟು ವಿಚಾರಗಳನ್ನು ಇಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಸಾಮಾನ್ಯವಾಗಿ ಐಕಾರ್ನಿಯಾ ಹೆಸರಿನಿಂದ ಗುರುತಿಸಲ್ಪಡುವ ಈ ಜಲ ಸಸ್ಯ ತೇಲುವ ಸಸ್ಯದ ಬಗೆಯದ್ದು. ಕೇವಲ ಅಲಂಕಾರಿಕ ಸಸ್ಯವಾಗಿ ಭಾರತದ ಬಂಗಾಳಕ್ಕೆ ಪರಿಚಯವಾದ ಇದರ ಮೂಲ ದಕ್ಷಿಣ ಅಮೇರಿಕ. ಇಂದು […]
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆ ಬಿಟ್ಟುಹೋಗಿದ್ದಾರೆ..? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಚಿಕ್ಕಬಳ್ಳಾಪುರ : ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆ ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದರು. ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, […]
ರಾಜ್ಯದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಳ – ಕೋವಿಡ್ ಲಸಿಕೆ ಕಾರಣನಾ..? – ICMR, AIIMS ಅಧ್ಯಯನ ಹೇಳಿದ್ದೇನು..?

ನವದೆಹಲಿ : ರಾಜ್ಯದಲ್ಲೀಗ ಹೃದಯಾಘಾತಕ್ಕೊಳಗಾಗಿ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಏನು ಕಾರಣ ಅನ್ನುವ ಬಗ್ಗೆ ವಿವಿಧ ವರ್ಗದ ಜನ ವಿವಿಧ ರೀತಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಕೋವಿಡ್ ಲಸಿಕೆಯ ಅಡ್ಡ ಪರಿಣಾಮವೇ ಹೃದಯಾಘಾತಕ್ಕೆ ಕಾರಣ ಅಂತ ಒಂದು ವರ್ಗ ವಾದಿಸುತ್ತಿದೆ. ಆದರೆ ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ICMR, AIIMS ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ. ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಈ ರೀತಿ ಆಗುತ್ತಿದೆ ಎಂಬ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು […]
ಕೊಡವ ಹಾಕಿ ಪ್ರೀಮಿಯರ್ ಲೀಗ್ – ಪಳೆ ತಾಲೂಕ್ ಚಾಂಪಿಯನ್, ಕೂರ್ಗ್ ಟೈಟಾನ್ಸ್ ರನ್ನರಪ್..!

ಮೈಸೂರು : ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕೊಡವ ಹಾಕಿ ಪ್ರೀಮಿಯರ್ ಲೀಗ್ನಲ್ಲಿ ಪಳೆ ತಾಲೂಕ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಳೆ ತಾಲೂಕ್ ಹಾಗೂ ಕೂರ್ಗ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯಿತು. ಪಳೆ ತಾಲೂಕ್ ತಂಡ 3-1 ಗೋಲುಗಳ ಅಂತರದಲ್ಲಿ ಗೆದ್ದು ಕೊಡವ ಹಾಕಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪಟ್ಟ ಅಲಂಕರಿಸಿತು. ರನ್ನರಪ್ ಪ್ರಶಸ್ತಿಗೆ ಕೂರ್ಗ್ ಟೈಟಾನ್ಸ್ ಭಾಜನವಾದರೆ, ಮೂರನೇ ಸ್ಥಾನಕ್ಕೆ ಕೊಡವು ವಾರಿಯರ್ಸ್ ತಂಡ ತೃಪ್ತಿ ಪಟ್ಟುಕೊಂಡಿತು. […]