ಕರ್ನಾಟಕದ ಕಾಫಿಗೆ ಪ್ರಧಾನಿ ಮೆಚ್ಚುಗೆ – ಮನ್‌ ಕೀ ಬಾತ್‌ನಲ್ಲಿ ಕೊಡಗಿನ ಕಾಫಿಯನ್ನು ಉಲ್ಲೇಖಿಸಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ತಿಂಗಳ ʼಮನದ ಮಾತುʼ ಕಾರ್ಯಕ್ರಮದಲ್ಲಿ ದೇಶದ ವೈಶಿಷ್ಟ್ಯತೆಯನ್ನು ಉಲ್ಲೇಖಿಸುತ್ತಾ ಇರುತ್ತಾರೆ. ಈ ಬಾರಿ ಕಾಫಿ ಬಗ್ಗೆ ಪ್ರಸ್ತಾಪಿಸುತ್ತಾ ಕೊಡಗು ಜಿಲ್ಲೆಯ ಕೊಡುಗೆಯನ್ನು ಕೊಂಡಾಡಿದ್ದಾರೆ. ಅ.26ರಂದು ಪ್ರಸಾರವಾದ ಮನ್‌ ಕೀ ಬಾತ್‌ 127ನೇ ಸಂಚಿಕೆಯಲ್ಲಿ, ದಕ್ಷಿಣ ಭಾರತದಲ್ಲಿ ಬೆಳೆಯುವ ಕಾಫಿಯ ವಿಶೇಷತೆ ಬಗ್ಗೆ ಮಾತನಾಡಿದರು. ದೇಶದ ಒಟ್ಟು ಕಾಫಿ ಉತ್ಪನ್ನದ ಪೈಕಿ ಶೇ 70ರಷ್ಟನ್ನು ಕರ್ನಾಟಕದಲ್ಲೇ ಬೆಳೆಯಲಾಗುತ್ತಿದೆ. ನಂತರದ ಸ್ಥಾನದಲ್ಲಿ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಒಡಿಶಾ ಇದೆ. ದೇಶದಲ್ಲಿ […]

ರಕ್ಷಿತಾ ಶೆಟ್ಟಿಯನ್ನು ನಿಂದಿಸಿದ ಅಶ್ವಿನಿ ಗೌಡ ವಿರುದ್ಧ ದಾಖಲಾಯ್ತು ಕೇಸ್..!‌ – ಇಲ್ಲಿದೆ ಮಾಹಿತಿ

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 12 ವಿವಿಧ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ವಾರದ ಹಿಂದಷ್ಟೇ ಜಾಹ್ನವಿ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ನಡುವಿನ ಗಲಾಟೆಯ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ರಾಜ್ಯಾದ್ಯಂತ ಬಿಗ್‌ಬಾಸ್‌ ವೀಕ್ಷಕರು ರಕ್ಷಿತಾ ವಿರುದ್ಧ ಮುಗಿಬಿದ್ದ ಜಾಹ್ನವಿ ಹಾಗೂ ಅಶ್ವಿನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ನಂತರ ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್‌ ಕೂಡಾ ಆ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ರಕ್ಷಿತಾ ಬಳಿ ಅಶ್ವಿನಿ ಕ್ಷಮೆಯನ್ನೂ ಕೇಳಿದ್ದರು. ಇದೀಗ ಹೊಸ ವಿಷಯ ಏನೆಂದರೆ ರಕ್ಷಿತಾಳನ್ನು […]

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿದೆ : ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ […]

ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು […]

ಕಾವೇರಿ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ಧನ್ಯತಾ ಭಾವ ಮೂಡಿಸಿದೆ – ಯದುವೀರ್‌ ಒಡೆಯರ್‌

ಮಡಿಕೇರಿ : ಜೀವನದಿ ಕಾವೇರಿ ತೀರ್ಥೋದ್ಭವ ಸಂಭ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್‌ ಪಾಲ್ಗೊಂಡಿದ್ದು. ಅಪರೂಪದ ಕ್ಷಣದಲ್ಲಿ ತಾನು ಭಾಗಿಯಾಗಿದ್ದರ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ನಾಡಿನ ಜೀವನದಿ, ಸಕಲ ಜೀವರಾಶಿಗಳಿಗೂ “ತಾಯಿ” ಸ್ವರೂಪಳಾದ ಕಾವೇರಿ ಮಾತೆಯ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಧನ್ಯತಾ ಭಾವ ಮೂಡಿಸಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಇದೊಂದು ಅಪೂರ್ವ ಕ್ಷಣ. ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಬರುತ್ತಿದ್ದಂತೆ ಧಾರ್ಮಿಕ ಭಾವನೆಗಳೂ ಉಕ್ಕುತ್ತವೆ ಎಂದಿದ್ದಾರೆ. ತೀರ್ಥೋದ್ಭವಕ್ಕೂ ಮುನ್ನ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆಯಲ್ಲಿ […]

ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಸಂಗ್ರಹಿಸಲಾದ ತ್ಯಾಜ್ಯ ಎಷ್ಟು ಗೊತ್ತಾ..? ಇಲ್ಲಿದೆ ನೋಡಿ ಡಿಟೇಲ್ಸ್…‌

ಮಡಿಕೇರಿ : ಕೂರ್ಗ್ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಬುಧವಾರ ಕೈಗೊಳ್ಳಲಾದ ಸ್ವಚ್ಚ ಕೊಡಗು – ಸುಂದರ ಕೊಡಗು ಸ್ವಚ್ಚತಾ ಅಭಿಯಾನದ ಸಂದರ್ಭ ಜಿಲ್ಲಾದ್ಯಂತ 200 ಟನ್ ತ್ಯಾಜ್ಯ ಸಂಗ್ರಹವಾಗಿದ್ದು ಮೈಸೂರಿನ ತ್ಯಾಜ್ಯ ವಿಲೇವಾರಿ ಸಂಗ್ರಹಾಗಾರ ಸೇರಿದಂತೆ ಕೊಡಗು ಜಿಲ್ಲೆಯ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಇವುಗಳನ್ನು ರವಾನಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದ್ದಾರೆ. ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಜಿಲ್ಲೆಯ 30 ಸಾವಿರದಷ್ಟು ಸ್ವಚ್ಚತಾ ಕಾರ್ಯಕರ್ತರಿಗೆ 33,800 ಕೈಕವಚ […]

ಪವಿತ್ರ ಕಾವೇರಿ ತೀರ್ಥೋದ್ಭವ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭಾಗಿ…

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಕ್ಟೋಬರ್‌ 17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾಳೆ ಮಧ್ಯಾಹ್ನ ಕಾವೇರಿ ಉಗಮಸ್ಥಳ ತಲಕಾವೇರಿಯಲ್ಲಿ ನಡೆಯಲಿರುವ ತೀರ್ಥೋದ್ಭವ ವೀಕ್ಷಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 12.30ಕ್ಕೆ ಭಾಗಮಂಡಲಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿ, ನಂತರ ತಲಕಾವೇರಿಗೆ ತೆರಳಲಿದ್ದಾರೆ. ಪೂಜಾ ಕಾರ್ಯ ಹಾಗೂ ತೀರ್ಥೋದ್ಭವ ವೀಕ್ಷಣೆ ಬಳಿಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ಡಿಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. […]

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ, ಅವಕಾಶ ಸಿಗಬೇಕು ಅಷ್ಟೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ […]

ಮತಗಳ್ಳತನದ ವಿರುದ್ಧ ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ – ಮಡಿಕೇರಿ ಬ್ಲಾಕ್‌ ವ್ಯಾಪ್ತಿಯಲ್ಲಿ 40 ಸಾವಿರ ಸಹಿ ಸಂಗ್ರಹಿಸುವ ಗುರಿ

ಮಡಿಕೇರಿ : ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಂಗ್ರೆಸ್‌ ಪಕ್ಷದ ವತಿಯಿಂದ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಕೊಡಗು ಜಿಲ್ಲೆಯಲ್ಲೂ ಈ ಅಭಿಯಾನ ಆರಂಭಿಸಲಾಗಿದೆ. ಮಡಿಕೇರಿ ಬ್ಲಾಕ್‌ ವ್ಯಾಪ್ತಿಯಲ್ಲಿ 40 ಸಾವಿರ ಮತದಾರರ ಸಹಿ ಸಂಗ್ರಹಿಸುವ ಗುರಿ ಇದೆ. ಬುಧವಾರದಿಂದ ಮನೆ, ಮನೆಗೆ ತೆರಳಿ ಸಹಿ ಸಂಗ್ರಹಿಸಲಾಗುವುದು ಎಂದು ಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ತಿಳಿಸಿದ್ದಾರೆ. ನೈಜ ಮತದಾರರನ್ನು ನಿಗ್ರಹಿಸಲು ಮೋಸದ ಜಾಲಗಳನ್ನು ಬಳಸಿಕೊಂಡು ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ. […]