ಬಾನು ಮುಷ್ತಾಕ್‌ ದಸರಾ ಉದ್ಘಾಟಿಸದಂತೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರತಾಪ್‌ ಸಿಂಹ..!

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ನಡೆಯುತ್ತಿರುವ ಪರ-ವಿರೋಧ ವಿಚಾರ ಈಗ ನ್ಯಾಯಾಲಯ ಮೆಟ್ಟಿಲೇರಿದೆ. ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುತ್ತಾರೆಂದು ಸರ್ಕಾರ ಹೇಳಿದಾಗಿನಿಂದ ಮಾಜಿ ಸಂಸದ ಪ್ರತಾಪ್‌ ಸಿಂಹ ತಮ್ಮ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಇದೀಗ ಅವರಿಂದ ದಸರಾ ಉದ್ಘಾಟನೆಗೆ ತಡೆ ನೀಡಬೇಕೆಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ದಿನದ ಹಿಂದೆ ಸರ್ಕಾರ ಹಾಸನದ ಬಾನು ಮುಷ್ತಾಕ್‌ ಮನೆಗೆ ತೆರಳಿ ಅಧಿಕೃತ ಆಹ್ವಾನ ನೀಡಿತ್ತು. […]

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ ಹಿರಿಯ ನಟಿಯರು..!

ಬೆಂಗಳೂರು : ಸಾಹಸ ಸಿಂಹ ಡಾ. ವಿಷ್ಣುವರ್ಧನ್‌(Dr VIshnuvardhan) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ಕೇಳಿಬರುತ್ತಿದೆ. ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಜೊತೆಗೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಸ್ಥಳಕ್ಕೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

26 ವರ್ಷದ ಪ್ರೇಯಸಿಯನ್ನು ಬೆಂಕಿ ಹಚ್ಚಿ ಕೊಂದ 52 ವರ್ಷದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು..!

ಬೆಂಗಳೂರು : ತನ್ನಿಂದ ದೂರವಾಗಲು ಮುಂದಾದ 26 ವರ್ಷದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಿರರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 52 ವರ್ಷದ ವಿಠ್ಠಲ ಎಂಬಾತನೇ ಪ್ರೇಯಸಿಯನ್ನು ಹತ್ಯೆಗೈದ ವ್ಯಕ್ತಿ. ಇಬ್ಬರು ಕೂಡಾ ಆನೇಕಲ್‌ ಮಳೆನಲ್ಲಸಂದ್ರ ನಿವಾಸಿಗಳಾಗಿದ್ದು, ವನಜಾಕ್ಷಿ ವಿಧವೆಯಾಗಿದ್ದು, ವಿಠ್ಠಲನ ಪತ್ನಿಯೂ ತೀರಿಕೊಂಡಿದ್ದಳು. ಇಬ್ಬರು ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ನಾಲ್ಕು ವರ್ಷದಿಂದ ಇಬ್ಬರು ಸಹಜೀವನ ನಡೆಸುತ್ತಿದ್ದರು ಅಂತ ಹೇಳಲಾಗಿದೆ. ಹೀಗಿರುವಾಗ ವನಜಾಕ್ಷಿ ಬೇರೊಬ್ಬನ ಜೊತೆ ಸ್ನೇಹ ಬೆಳೆಸಿ ಈತನಿಂದ ದೂರವಾಗಲು ಮುಂದಾಗಿದ್ದಾಳೆ. ಈ ವಿಷಯವಾಗಿ ಇಬ್ಬರ […]

ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ದೊಡ್ಡ ಸಾಧನೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ […]

ʼಮಾಹೆದ ಆಟಿದ ತುಳು ಪರ್ಬʼ – ಕುಕ್ಕೇರ ಬೆಳಕು ರಚಿಸಿದ ಕೊರಗಜ್ಜನ ಚಿತ್ರಕ್ಕೆ ದ್ವಿತೀಯ ಬಹುಮಾನ..!

ಮಣಿಪಾಲ : ಮಾಹೆ ವಿವಿ ವತಿಯಿಂದ ನಡೆದ ʼಮಾಹೆದ ಆಟಿದ ತುಳು ಪರ್ಬʼ ಚಿತ್ರಕಲಾ ಸ್ಪರ್ಧೆಯಲ್ಲಿ ಕುಕ್ಕೇರ ಬೆಳಕು ಬೊಳ್ಳಮ್ಮ ದ್ವಿತೀಯ ಬಹುಮಾನ ಗಳಿಸಿದ್ದಾರೆ. ಆಟಿ ತಿಂಗಳ ಮಹತ್ವ ಸಾರುವ ಉದ್ದೇಶದಿಂದ ವಿವಿ ವಿತಿಯಿಂದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜಾನಪದದ ವಿಷಯಾಧಾರಿತ ʼತುಳು ರಂಗ್‌ʼ ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು. ತುಳುನಾಡಿನಲ್ಲಿ ಹೆಚ್ಚು ಆರಾಧಿಸಲ್ಪಡುವ ದೈವ ಸ್ವಾಮಿ ಕೊರಗಜ್ಜನ ಮುಖಭಾವದ ಚಿತ್ರವನ್ನು ಬೆಳಕು ರಚಿಸಿದ್ದರು. ಈ ಚಿತ್ರಕ್ಕೆ ದ್ವಿತೀಯ […]

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ವಿರೋಧ – ಕ್ಷಮೆ ಕೇಳಲು ಸಿದ್ಧ ಎಂದ ಡಿಸಿಎಂ ಡಿಕೆಶಿ..!

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವು ದಿನದ ಹಿಂದೆ ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ʼನಮಸ್ತೇ ಸದಾ ವತ್ಸಲೇ ಮಾತೃ ಭೂಮೇ..ʼ ಹಾಡನ್ನು ಪ್ರಸ್ತಾಪಿಸಿ ಮಾತ ನಾಡಿದ್ದರು. ಇದಕ್ಕೆ ಕಾಂಗ್ರೆಸ್‌ನ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಈ ಕುರಿತಂತೆ ಮೌನ ಮುರಿದಿರುವ ಡಿಕೆಶಿ, “ನನ್ನ ಹೇಳಿಕೆಯಿಂದ ಕ್ಷಮೆ ಕೇಳಬೇಕು ಅಂತಿದ್ದರೆ ಕ್ಷಮೆಗೆ ಸಿದ್ದನಿದ್ದೇನೆ” ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಬಿಜೆಪಿ ನಾಯಕರು ಮಾತಾಡಿದಾಗ, ಅವರ ಸಿದ್ದಾಂತದ ಅರಿವು ನನಗೆ ಇದೆ ಅಂತ ಕಾಲೆಳೆದೆ. ನಾನು […]

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದಕ್ಕೆ ನಮ್ಮ ತಕರಾರಿಲ್ಲ – ಸಂಸದ ಯದುವೀರ್

ಮೈಸೂರು : ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡುವುದಕ್ಕೆ ಬಿಜೆಪಿಯ ಕೆಲವು ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಕೊಡಗು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸರ್ಕಾರದ ನಿಲುವನ್ನು ಸ್ವಾಗತಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಸಂಸದ ಯದುವೀರ್, ಬಾನು ಮುಸ್ತಾಕ್ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಅವರ ಆಯ್ಕೆಯಲ್ಲಿ ನನಗೆ ಯಾವುದೇ ಅಭಿಪ್ರಾಯ ಇಲ್ಲ. ತಾಯಿ ಚಾಮುಂಡೇಶ್ವರಿಗೆ ಗೌರವ ಕೊಟ್ಟರೆ ನಮ್ಮದೇನು ತಕರಾರು ಇಲ್ಲ ಎಂದಿದ್ದಾರೆ. […]

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ: ನೊಂದ ಕುಟುಂಬಗಳಿಗೆ 5 ಲಕ್ಷ ಪರಿಹಾರ

CM Siddaramaiah

ಮೈಕ್ರೋ ಫೈನಾನ್ಸಿಯರ್ (Micro Finance) ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು ಕೂಡ ಇದೇ ವೇಳೆ ನಿಮ್ಮೆಲ್ಲರ ಗಮನಕ್ಕೆ ತರಬಯಸುತ್ತೇನೆ ಎಂದರು. ಸದನದಲ್ಲಿ ನಡೆದ ಪ್ರಶ್ನೋತ್ತರ ವೇಳೆ ಸದಸ್ಯರ […]

ಕುಶಾಲನಗರ : ಧರ್ಮಸ್ಥಳ ವಿರೋಧಿಗಳ ವಿರುದ್ಧ ಪ್ರತಿಭಟನೆ – ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್‌ ಕೆರೆಹಳ್ಳಿ ಪೊಲೀಸ್‌ ವಶಕ್ಕೆ..!

ಕುಶಾಲನಗರ : ಧರ್ಮಸ್ಥಳ ವಿರುದ್ಧ ಕೆಲವರು ಷಡ್ಯಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ವಿವಿಧ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದವು. ಈ ಕಾರ್ಯಕ್ರಮದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೆಹಳ್ಳಿ(punith kerehalli) ಮುಖ್ಯ ಭಾಷಣ ಮಾಡಬೇಕಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಪುನೀತ್‌ಗೆ ಪೊಲೀಸರು ಅವಕಾಶ ನೀಡಲಿಲ್ಲ. ವಶಕ್ಕೆ ಪಡೆಯಲು ಮುಂದಾದಾಗ ಸಂಘಟನೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ನಂತರ ಅಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೂಚಿಸಿದ ಪುನೀತ್‌ ಅಲ್ಲಿಂದ ತೆರಳಿದರು. ಈ ಬೆಳವಣಿಗೆಯಿಂದ […]

ಮುಜರಾಯಿ ಸಚಿವರನ್ನು ಭೇಟಿಯಾದ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯ ಆಡಳಿತ ವ್ಯವಸ್ಥಾಪನಾ ಸಮಿತಿ

ಮಡಿಕೇರಿ : ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿಯಾಗಿ ಸಭೆ ನಡೆಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಸಲ್ಲಿಸಿದರು. ನಂತರ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಯೋಜನಾ ವರದಿ ತಯಾರಿ ಮಾಡಿ ವರದಿ […]