ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ – ಪಕ್ಷ ವಿರೋಧಿ ಹೇಳಿಕೆಗೆ ಬೆಲೆ ತೆತ್ತ ಸಚಿವ..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದ್ದು, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮನೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಅವರು ರಾಜೀನಾಮೆ ನೀಡಿದ್ದಾರೆಂದು ತಿಳಿದು ಬಂದಿದೆ. ಕೆಲವು ದಿನದ ಹಿಂದೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದರು. ಇದಕ್ಕೆ ವಿರುದ್ಧವಾಗಿ ರಾಜಣ್ಣ ತಮ್ಮ ಹೇಳಿಕೆ ನೀಡಿದ್ದರು. ಇದು ಹೈಕಮಾಂಡ್ ನಾಯಕರನ್ನು ಕೆರಳಿಸಿತ್ತು. ತಕ್ಷಣ ಅವರಿಂದ ರಾಜೀನಾಮೆ ಪಡೆಯವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರಿಷ್ಠರು ಸೂಚಿದ್ದರು. ಅದರ […]
‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ದೇಶಾದ್ಯಂತ ವಿಶೇಷ ಅಭಿಯಾನ – ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಮಡಿಕೇರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಸರ್ವೋಚ್ಛ ನ್ಯಾಯಾಲಯ ದೇಶಾದ್ಯಂತ ಅಕ್ಟೋಬರ್ ೦೭ ರವರೆಗೆ ೯೦ ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ ೯೦ ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ […]
ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಆಕ್ರೋಶ – ಅನಿರ್ಧಿಷ್ಟಾವಧಿಗೆ ಪ್ರತಿಭಟನೆ ಮುಂದೂಡಿಕೆ..!

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಆರಂಭಿಸಿದ್ದ ಮುಷ್ಕರವನ್ನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಿತು. ಈ ವೇಳೆ ನೌಕರರ ನಡೆಗೆ ಹೈಕೋರ್ಟ್ ಆಕ್ರೋಶ ವ್ಯಕ್ತಪರಿಸಿ, ನೌಕರರ ಸಂಘಟನೆಗಳಿಗೆ ತರಾಟೆ ತೆಗೆದುಕೊಂಡಿತು. ಮುಷ್ಕರದ ಬಗ್ಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಎಚ್ಚರಿಸಿತು. ಹೈಕೋರ್ಟ್ನಲ್ಲಿ ತರಾಟೆಗೊಳಗಾಗುತ್ತಿದ್ದಂತೆ ಸುದ್ದಿಗೊಷ್ಠಿ ನಡೆಸಿದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ […]
KSRTC ನೌಕರರು ಹಠ ಮಾಡೋದ್ರಲ್ಲಿ ಅರ್ಥ ಇಲ್ಲ, ಸರ್ಕಾರದ ಪರಿಸ್ಥಿತಿ ಅರ್ಥ ಮಾಡ್ಕೊಳ್ಳಿ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ಹಲವು ಬೇಡಿಕೆಗಳನ್ನ ಮುಂದಿಟ್ಟು ಕೆಎಸ್ಆರ್ಟಿಸಿ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್ ಸೂಚಿಸಿತ್ತು. ಆದ್ರೆ ಅದನ್ನೂ ಲೆಕ್ಕಿಸದೆ ನೌಕರರು ಮುಷ್ಕರ ಶುರುಮಾಡಿದ್ದಾರೆ. ಮುಷ್ಕರದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಅವರ ಬೇಡಿಕೆಗಳನ್ನ ನಮ್ಮ ಮುಂದಿಡುವುದು ತಪ್ಪಲ್ಲ. ಆದ್ರೆ ಅವ್ರು ಸರ್ಕಾರದ ಪರಿಸ್ಥಿತಿಯನ್ನ ಅರ್ಥ ಮಾಡಿಕೊಳ್ಳಬೇಕು. ಆಗದಿರೋದನ್ನ ಮಾಡಿ ಅಂತ ಹೇಳೋದಲ್ಲ ಎಂದಿದ್ದಾರೆ. ನಮಗೆ ನಾಗರಿಕರು ಇಂಪಾರ್ಟೆಂಟ್. ಜನರಿಗೆ ಯಾರೂ ತೊಂದರೆ ಕೊಡಬೇಡಿ. ಕೆಲವು ಚಾಲಕರು, ನಿರ್ವಾಹಕರು ಕರ್ತವ್ಯಕ್ಕೆ […]
ನಾಳೆ ನಡೆಯುತ್ತಾ ಸಾರಿಗೆ ನೌಕರರ ಮುಷ್ಕರ..? – ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲ..!

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ(ಆ.05) ಮುಷ್ಕರ ನಡೆಸಲು ಮುಂದಾಗಿದ್ದಾರೆ. ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಆ.04ರೊಳಗೆ ಈಡೇರಿಸುವಂತೆ ನೌಕರರ ಸಂಘಟನೆಗಳು ಆಗ್ರಹಿಸಿದ್ದವು. ಈಡೇರದಿದ್ದರೆ ನಾಳೆಯಿಂದ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಸಿವೆ. ಈ ಮಧ್ಯೆ ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಒಕ್ಕೂಟದೊಂದಿದೆ ವಿಧಾನದೌಧದ ಸಮಿತಿ ಕೊಠಡಿಯಲ್ಲಿ ಸುದೀರ್ಘ ಚರ್ಚೆ ನಡೆಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ […]
ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಜ್ಯೋತಿಶ್

ಮಡಿಕೇರಿ : ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹೆಚ್. ಜ್ಯೋತಿಶ್ (H.Jyothish), ರಾಜ್ಯ ಕಾರ್ಯದರ್ಶಿ ಕುಮಾರ್(Kumar ) ಶನಿವಾರ ಜೀವನದಿ ಕಾವೇರಿಯ ಉಗಮ ಸ್ಥಳ ತಲಕಾವೇರಿಗೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ವಿರಾಜಪೇಟೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗೌರೀಶ್ ರೈ(Gowrish rai), ಅನಂತ್ ಭಾಗಮಂಡಲ, ಜಸ್ವಂತ್ ಭಾಗಮಂಡಲ, DCC ಸದಸ್ಯ ಸುನೀಲ್ ಪತ್ರವೊ, ಮೈಸೂರು ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಬ್ರಾರ್, […]
ಧರ್ಮಸ್ಥಳದಲ್ಲಿ ಶ*ವ ಹೂತ ಪ್ರಕರಣ – 06ನೇ ಪಾಯಿಂಟ್ನಲ್ಲಿ ಪತ್ತೆಯಾಯಿತು ಮೂಳೆ..!

ಧರ್ಮಸ್ಥಳ : ನೂರಕ್ಕೂ ಹೆಚ್ಚು ಶವಗಳನ್ನ ಹೂತಿದ್ದೇನೆಂದು ವ್ಯಕ್ತಿಯೊಬ್ಬ ಹೇಳಿದ ಕೇಸ್ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಮೂರು ದಿನದಿಂದ ನಡೆಯುತ್ತಿದ್ದ ಉತ್ಕನನದಲ್ಲಿ ಇಂದು ಆರನೇ ಪಾಯಿಂಟ್ನಲ್ಲಿ ಮೂಳೆ ಪತ್ತೆಯಾಗಿದೆ. ಮೊನ್ನೆಯಿಂದ ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಎಸ್ಐಟಿ ಶೋಧ ಕಾರ್ಯ ನಡೆಸಿತ್ತು. ಸಣ್ಣ ಹಿಟಾಚಿಯನ್ನೂ ಬಳಸಲಾಗಿತ್ತು. ಇಂದು ನೇತ್ರಾವತಿ ನದಿ ತೀರದಲ್ಲಿ ಗುರುತಿಸಿದ್ದ ಪಾಯಿಂಟ್ ನಂಬರ್ ಆರರಲ್ಲಿ ಕಳೇಬರದ ಕುರುಹು ಪತ್ತೆಯಾಗಿದೆ. ಅದು ಮನುಷ್ಯನದ್ದಾ, ಪ್ರಾಣಿಯದ್ದಾ ಎಂಬ ಬಗ್ಗೆ ತಿಳಿಯಲು ಅದನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ, ಅಲ್ಲಿಂದ ವರದಿ ಬಂದ […]
ಮಹಿಳೆ ಮೇಲೆ ಅ*ತ್ಯಾಚಾರ ಪ್ರಕರಣ – ನಾಳೆ ತೀರ್ಪು ಪ್ರಕಟಿಸಲಿರುವ ನ್ಯಾಯಾಲಯ – ಏನಾಗಲಿದೆ ಪ್ರಜ್ವಲ್ ರೇವಣ್ಣ ಭವಿಷ್ಯ..!

ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬೇಲ್ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ(ಆ.01) ತೀರ್ಪು ಪ್ರಕಟಿಸಲಿದೆ. ವಿಚಾರಣೆ ಮುಕ್ತಾಯವಾಗಿ ಜುಲೈ 30ರಂದು ತೀರ್ಪು ಪ್ರಕಟವಾಗಬೇಕಿತ್ತು. ಆದರೆ ಕೆಲವು ಸ್ಪಷ್ಟೀಕರಣ ಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆಗಸ್ಟ್ 1ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಸರ್ಕಾರದ ಪರ ಎಪಿಪಿ ಜಗದೀಶ್, […]
ಕೊಡಗು ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಿಎಂ ಸಭೆ – ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿವಿಧ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದರು. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಿಎಂ, ಮಳೆ ಹಾನಿ, ಕೈಗೊಂಡಿರುವ ಪರಿಹಾರ ಕ್ರಮ, ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಚರ್ಚಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಮಂತರ್ ಗೌಡ ಇದ್ದರು.
ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ತಮ್ಮಯ್ಯಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ ಚಂದ್ ಗೊಹ್ಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿಗಳು ಮಾಡಿದ ಸಾಧನೆಯ ಹಿನ್ನಲೆ ಅತ್ಯುತ್ತಮ ದೈಹಿಕ ನಿರ್ದೇಶಕ ಎಂಬ ನೆಲೆಯಲ್ಲಿ […]