ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅರ್ಪಿತಾ ಜಿ. ಎ. ಮಂಡಿಸಿದ್ದ ಮಹಾಪ್ರಬಂಧವನ್ನು ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸೈನ್ಸಸ್ ವಿಭಾಗದಲ್ಲಿ ಅಂಗೀಕರಿಸಿ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಇವರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾರವಾರದ ಇ ಅಂಡ್ ಸಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಎ. ಎಲ್. ಚೂಡಾರತ್ನಾಕರ ಮಾರ್ಗದರ್ಶನದಲ್ಲಿ “Landslide Susceptibility Mapping for Kodagu Region using Machine Learning Techniques” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆಯನ್ನು ಕೈಗೊಂಡು ಮಹಾಪ್ರಬಂಧವನ್ನು ವಿಟಿಯುಗೆ ಸಾಧರಪಡಿಸಿದ್ದಾರೆ. […]

ಸಿನೆಮಾ ಇಂಡಸ್ರ್ಟಿಗೆ ಬಂದ ಮೊದಲ ಕೊಡವತಿ ನಾನು ಎಂದ ರಶ್ಮಿಕಾ ವಿರುದ್ಧ ಆಕ್ರೋಶ, ನಟಿ ಪ್ರೇಮಾ ಹೇಳಿದ್ದೇನು?

ಕಿರಿಕ್‌ ಪಾರ್ಟಿ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಲಗ್ಗೆ ಇಟ್ಟ ನಟಿ ರಶ್ಮಿಕಾ ಮಂದಣ್ಣ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಈಗ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೊಡವ ಸಮುದಾಯದಿಂದ ಸಿನಿಮಾಗೆ ಬಂದವರಲ್ಲಿ ನಾನೇ ಮೊದಲು ಎಂದು ಹೇಳುವ ಮೂಲಕ ಮತ್ತೊಂದು ವಿವಾದ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಬರ್ಖಾ ದತ್ ಅವರಿಗೆ ರಶ್ಮಿಕಾ ಮಂದಣ್ಣ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ತಮ್ಮನ್ನು ತಾವು ಹೊಗಳಿಕೊಳ್ಳುವ ಭರದಲ್ಲಿ, ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದ ಏಕೈಕ […]

ನೀಲಿ ಸುಂದರಿಯ ಸೌಂದರ್ಯಕ್ಕೆ ಮಾರು ಹೋದರೆ ಮಾರಕವಾಗುವುದು ನಿಶ್ಚಿತ..! – ತಪ್ಪದೆ ಈ ಲೇಖನ ಓದಿ

ನೀಲಿ ಸುಂದರಿ ಕೊಡಗಿನಲ್ಲಿ ಸದ್ದು ಮಾಡ್ತಾ ಇದ್ದಾಳೆ. ಕುಶಾಲನಗರದ ತಾವರೆ ಕೆರೆ ತನ್ನ ಹೆಸರಿಗೆ ವಿರುದ್ಧವಾಗಿ ನೀಲಿ ಬಣ್ಣದ ವಾಟರ್ ಹಯಾಸಿಂತ್‌ಗೆ ಪ್ರಖ್ಯಾತಿಗೊಳ್ಳುತ್ತಾ ಇದೆ. ಪರಿಸರ ಸಮತೋಲನದ ದೃಷ್ಟಿಯಿಂದ ನೋಡುವುದಾದರೆ ಈಕೆ ನೀಲ ಸುಂದರಿಯಲ್ಲ. ಬ್ಲೂ ಡೆವಿಲ್..! ಇದರ ಬಗ್ಗೆ ಒಂದಷ್ಟು ವಿಚಾರಗಳನ್ನು ಇಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಸಾಮಾನ್ಯವಾಗಿ ಐಕಾರ್ನಿಯಾ ಹೆಸರಿನಿಂದ ಗುರುತಿಸಲ್ಪಡುವ ಈ ಜಲ ಸಸ್ಯ ತೇಲುವ ಸಸ್ಯದ ಬಗೆಯದ್ದು. ಕೇವಲ ಅಲಂಕಾರಿಕ ಸಸ್ಯವಾಗಿ ಭಾರತದ ಬಂಗಾಳಕ್ಕೆ ಪರಿಚಯವಾದ ಇದರ ಮೂಲ ದಕ್ಷಿಣ ಅಮೇರಿಕ. ಇಂದು […]

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆ ಬಿಟ್ಟುಹೋಗಿದ್ದಾರೆ..? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಚಿಕ್ಕಬಳ್ಳಾಪುರ : ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆ ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದರು. ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, […]

ರಾಜ್ಯದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಳ – ಕೋವಿಡ್‌ ಲಸಿಕೆ ಕಾರಣನಾ..? – ICMR, AIIMS ಅಧ್ಯಯನ ಹೇಳಿದ್ದೇನು..?

ನವದೆಹಲಿ : ರಾಜ್ಯದಲ್ಲೀಗ ಹೃದಯಾಘಾತಕ್ಕೊಳಗಾಗಿ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಏನು ಕಾರಣ ಅನ್ನುವ ಬಗ್ಗೆ ವಿವಿಧ ವರ್ಗದ ಜನ ವಿವಿಧ ರೀತಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಕೋವಿಡ್‌ ಲಸಿಕೆಯ ಅಡ್ಡ ಪರಿಣಾಮವೇ ಹೃದಯಾಘಾತಕ್ಕೆ ಕಾರಣ ಅಂತ ಒಂದು ವರ್ಗ ವಾದಿಸುತ್ತಿದೆ. ಆದರೆ ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ICMR, AIIMS ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ. ಕೋವಿಡ್‌ ಲಸಿಕೆಯ ಅಡ್ಡಪರಿಣಾಮದಿಂದ ಈ ರೀತಿ ಆಗುತ್ತಿದೆ ಎಂಬ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು […]

ಕೊಡವ ಹಾಕಿ ಪ್ರೀಮಿಯರ್‌ ಲೀಗ್‌ – ಪಳೆ ತಾಲೂಕ್ ಚಾಂಪಿಯನ್, ಕೂರ್ಗ್ ಟೈಟಾನ್ಸ್ ರನ್ನರಪ್..!

ಮೈಸೂರು : ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕೊಡವ ಹಾಕಿ ಪ್ರೀಮಿಯರ್ ಲೀಗ್‌ನಲ್ಲಿ ಪಳೆ ತಾಲೂಕ್ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಪಳೆ ತಾಲೂಕ್ ಹಾಗೂ ಕೂರ್ಗ್ ಟೈಟಾನ್ಸ್ ನಡುವೆ ಫೈನಲ್‌ ಪಂದ್ಯ ನಡೆಯಿತು. ಪಳೆ ತಾಲೂಕ್ ತಂಡ 3-1 ಗೋಲುಗಳ ಅಂತರದಲ್ಲಿ ಗೆದ್ದು ಕೊಡವ ಹಾಕಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪಟ್ಟ ಅಲಂಕರಿಸಿತು. ರನ್ನರಪ್‌ ಪ್ರಶಸ್ತಿಗೆ ಕೂರ್ಗ್ ಟೈಟಾನ್ಸ್ ಭಾಜನವಾದರೆ, ಮೂರನೇ ಸ್ಥಾನಕ್ಕೆ ಕೊಡವು ವಾರಿಯರ್ಸ್ ತಂಡ ತೃಪ್ತಿ ಪಟ್ಟುಕೊಂಡಿತು. […]

ಈ ಬಾರಿ ೧೧ ದಿನ ನಾಡಹಬ್ಬ ದಸರಾ ಆಚರಣೆ – ವಿಜೃಂಭಣೆಯ ಉತ್ಸವಕ್ಕೆ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ..!

ಬೆಂಗಳೂರು : ಈ ಬಾರಿಯ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು. ಈ ಬಾರಿ […]

ಚಾಮರಾಜನಗರ : ಐದು ಹುಲಿ ಸಾವು ಪ್ರಕರಣ – ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ..!

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವಿಷವಿಕ್ಕಿದ್ದ ಮಾದರಾಜು, ನಾಗರಾಜು ಇಬ್ಬರನ್ನು ಮೊದಲು ಬಂಧಿಸಲಾಗಿತ್ತು. ಇದೀಗ ಪೊಲೀಸರು ಕೋನಪ್ಪ ಅಲಿಯಾಸ್ ಕೂನಯ್ಯ ಎಂಬಾತನನ್ನ ಬಂಧಿಸಿದ್ದಾರೆ. ಈತನನ್ನು ಮೃತ ಹಸುವಿನ ಮಾಲೀಕ ಎನ್ನಲಾಗಿದೆ. ಕಳ್ಳಬೇದೊಡ್ಡಿಯ ಮಾದುರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.

ಇಂತಹ ಪಡಿತರ ಚೀಟಿದಾರರಿಗೆ ಶಾಕ್ :‌ ಇವರದ್ದು ರೇಷನ್‌ ಕಾರ್ಡ್‌ ರದ್ದು!

Ration card

ರಾಜ್ಯದಲ್ಲಿ ನಕಲಿ ದಾಖಲೆಗಳ ಆಧಾರದ ಮೇಲೆ ಪಡೆದಿದ್ದ ಬಿಪಿಎಲ್‌ ಕಾರ್ಡ್‌ಗಳನ್ನು (BPL Card ) ರದ್ದುಗೊಳಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅಕ್ರಮವಾಗಿ ಬಿಪಿಎಲ್‌ ಕಾರ್ಡ್ ಪಡೆದುಕೊಂಡಿದ್ದವರು ಎಪಿಎಲ್‌ಗೆ ವರ್ಗಾಯಿಸಲ್ಪಟ್ಟಿದ್ದು, ಈ ಕ್ರಮದ ಪರಿಣಾಮವಾಗಿ ನಿಜವಾಗಿ ಬಡವರಾಗಿ ಪರಿಗಣಿಸಲ್ಪಟ್ಟಿದ್ದ ಹಲವರ ಕಾರ್ಡ್‌ಗಳು ಕೂಡ ರದ್ದಾದವು. ಇದರಿಂದಾಗಿ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಪ್ರತಿಭಟನೆಗಳಿಗೆ ಕಾರಣವಾಯಿತು. ಈ ಸಮಸ್ಯೆ ಅರಿತ ಸರ್ಕಾರ, ತಪ್ಪುಗಳನ್ನು ತಿದ್ದುಕೊಳ್ಳುವ ಭರವಸೆ ನೀಡಿತ್ತು. ಇದರ ಜೊತೆಗೆ ಇನ್ನೊಂದು ಒಂದೇ ಮನೆಗೆ ಸೇರಿರುವ ಸದಸ್ಯರು ವಿಭಿನ್ನ ಹೆಸರುಗಳಲ್ಲಿ ಎರಡು […]

ಸಾಂಸ್ಕೃತಿಕ ನಗರಿಯಲ್ಲಿ ಕೊಡವ ಹಾಕಿ ಪ್ರೀಮಿಯರ್‌ ಲೀಗ್‌ – ಜೂ. 27ರಿಂದ ಮೈಸೂರಿನಲ್ಲಿ ಚೊಟ್ಟಲ ಟೂರ್ನಿ

ವರದಿ : ಚೆಯ್ಯಂಡ ಬನೀತ್ ಬೋಜಣ್ಣ ಮೈಸೂರು : ಕೊಡಗು ಅಥವಾ ಕೊಡವರು ಎಂದಾಗ ನಮಗೆ ನೆನಪಿಗೆ ಬರುವ ಹಲವು ವಿಷಯಗಳಲ್ಲಿ ಕ್ರೀಡೆಯು ಒಂದು. ಅದರಲ್ಲೂ ಹಾಕಿ ಕ್ರೀಡೆ ಕೊಡಗಿನಲ್ಲಿ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ. ಭಾರತದ ಹಾಕಿ ತಂಡಕ್ಕೆ ನಮ್ಮ ಜಿಲ್ಲೆಯ ಅಸಂಖ್ಯಾತ ಆಟಗಾರರು ಆಡಿದ್ದಾರೆ. ಇದರಿಂದ ಕೊಡಗನ್ನು ಭಾರತದ ಹಾಕಿಯ ತೊಟ್ಟಿಲು ಎಂದು ಕರೆಯುತ್ತಾರೆ. ಹಾಕಿಯ ಮೂಲಕ ಕೊಡವ ಜನಾಂಗವನ್ನು ಮತ್ತಷ್ಟು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕೊಡಗಿನಲ್ಲಿ ಕೊಡವ ಕೌಟುಂಬಿಕ ಹಾಕಿ ಉತ್ಸವ ನಡೆಯುತ್ತದೆ. […]