ಕಸ್ತೂರಿ ರಂಗನ್‌ ವರದಿ ಅಂತಿಮ ಕರಡು ಅಧಿಸೂಚನೆ – ಆತಂಕ ಬೇಡ ಎಂದ ಸಂಸದ ಯದುವೀರ್‌

ಮಡಿಕೇರಿ : ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಜನ ಆತಂಕಕ್ಕೀಡಾಗಬೇಕಾದ ಅಗತ್ಯವಿಲ್ಲ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು. ಮಡಿಕೇರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುತ್ತಿದೆ. ಕೊಡಗಿನ ಜನ ಪ್ರಕೃತಿಯನ್ನು ರಕ್ಷಿಸುವ, ಗೌರವಿಸುವ ಗುಣ ಹೊಂದಿದ್ದಾರೆ. ಜನವಸತಿ ಹಾಗೂ ಕೃಷಿ ಪ್ರದೇಶವನ್ನು ವರದಿ ವ್ಯಾಪ್ತಿಗೆ ಸೇರಿಸಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಈ ವಿಚಾರದಲ್ಲಿ ಕಾರ್ಯನಿರ್ವಹಣೆ ಮಾಡಬೇಕೆಂದು ಅಭಿಪ್ರಾಯಪಟ್ಟರು. ಕಸ್ತೂರಿ ರಂಗನ್ ವರದಿ ಯಥಾವತ್ ಅನುಷ್ಠಾನ ಅಸಾಧ್ಯ. […]

ಜ.24 ರಂದು ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ, 24 ರಿಂದ 26 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ […]

ಪ್ರವಾಸಿ ಬಸ್‌ಗಳಿಂದ ಸಾರ್ವಜನಿಕರಿಗೆ ತೊಂದರೆ – ಆರ್‌ಟಿಒ ಅಧಿಕಾರಿಗೆ ದೂರು..!

ಮಡಿಕೇರಿ : ಜಿಲ್ಲೆಗೆ ಬರುತ್ತಿರುವ ಪ್ರವಾಸಿ ಬಸ್‌ಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಕೊಡಗು ಅಭಿವೃದ್ಧಿ ಸಮಿತಿ ನಿಯೋಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಗಮನ ಸೆಳೆಯಿತು. ಕೊಡಗಿಗೆ ಸಾಕಷ್ಟು ಅಂತಾರಾಜ್ಯ ಬಸ್‌ಗಳು ಬರುತ್ತಿವೆ. ಹೆಚ್ಚಾಗಿ ಕೇರಳ ಭಾಗದಿಂದ ಬಸ್‌ಗಳು ಬರುತ್ತಿವೆ. ಇವುಗಳ ಬಗ್ಗೆ ನಿಗಾ ಇಡಬೇಕು ಎಂದು ಮನವಿ ಮಾಡಲಾಯಿತು. ಪ್ರವಾಸಿಗರನ್ನು ಕರೆದುಕೊಂಡು ಬರುವ ಬಸ್‌ಗಳು ಅತಿಯಾದ ಶಬ್ಧ, ಧ್ವನಿವರ್ದಕವನ್ನು ಬಳಸಿ ಜನರಿಗೆ ತೊಂದರೆ ಕೊಡುತ್ತಿವೆ. ಈ ಬಗ್ಗೆಯೂ ಗಮನಹರಿಸಬೇಕು. ಜೊತೆಗೆ ಪರವಾನಗಿ ಇಲ್ಲದೆ ಸಂಚರಿಸುವ ಬಸ್‌ಗಳ ವಿರುದ್ಧ […]

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಉಪಾಧ್ಯಕ್ಷ ಸ್ಥಾನ ಆಕಾಂಕ್ಷಿ ರಮೇಶ್‌ ಕುಟ್ಟಪ್ಪ ನಾಮಪತ್ರ ಸಲ್ಲಿಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಜ್ಜಮಾಡ ರಮೇಶ್‌ ಕುಟ್ಟಪ್ಪ ನಾಮಪತ್ರ ಸಲ್ಲಿಸಿದ್ದಾರೆ. 2022- 25ನೇ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಇವರು ಇದೀಗ ಎರಡನೇ ಅವಧಿಗೆ ಆಕಾಂಕ್ಷಿಯಾಗಿ ಸ್ಪರ್ಧಿಸಿದ್ದಾರೆ. 25 ವರ್ಷದಿಂದ ಪತ್ರಕರ್ತ ವೃತ್ತಿಯಲ್ಲಿರುವ ಇವರು ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸಂಘಟನಾತ್ಮಕವಾಗಿಯೂ ಸಕ್ರಿಯರಾಗಿರುವ ಇವರು ಎರಡು ಅವಧಿಗೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ, ಎರಡು […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್

Kodagu rain

ಮಡಿಕೇರಿ:- ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.41 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.48 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2794.41 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2793.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.55 ಮಿ.ಮೀ. ಕಳೆದ ವರ್ಷ ಇದೇ ದಿನ 0.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4241.66 ಮಿ.ಮೀ, ಕಳೆದ ವರ್ಷ ಇದೇ […]

ವೀರಾಜಪೇಟೆ ಗಣೇಶೋತ್ಸವ ಡಿಜೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ – ದೂರು ಹಿಂಪಡೆಯಲು ಮೊಹಮ್ಮದ್‌ ನಯಾಜ್‌ ಮನವಿ

ವೀರಾಜಪೇಟೆ : ವೀರಾಜಪೇಟೆ ಗಣೇಶೋತ್ಸವದಲ್ಲಿ ಧ್ವನಿವರ್ದಕ ಬಳಸಿದ ಸಂಬಂಧ ದಾಖಲಾಗಿರುವ ದೂರುಗಳನ್ನು ಹಿಂಪಡೆಯಬೇಕೆಂದು ಸ್ನೇಹಿತರ ಒಕ್ಕೂಟ ಮನವಿ ಮಾಡಿದೆ. ವರ್ಷಂಪ್ರತಿ ವೀರಾಜಪೇಟೆಯಲ್ಲಿ ನಡೆಯುವ ಐತಿಹಾಸಿಕ ಗೌರಿ ಗಣೇಶ ವಿಸರ್ಜನೋತ್ಸವ ಜಾತಿ ಮತ ಭೇದವಿಲ್ಲದೆ ಸರ್ವ ಜನಾಂಗದವರು ಕೂಡಿ ಒಗ್ಗೂಡಿ ಆಚರಿಸುತ್ತಾರೆ. ಈ ಸಂಭ್ರಮದ ಬಗ್ಗೆ ರಾಜ್ಯದ ಕೆಲವು ಮಾಧ್ಯಮಗಳು ಅಶಾಂತಿ ಉಂಟು ಮಾಡಲು ಪ್ರಯತ್ನಿಸುತ್ತಿದ್ದು ಅದಕ್ಕೆ ಯಾವುದೇ ಪೂರಕವಾದ ಸಾಕ್ಷಿ ಇರುವುದಿಲ್ಲ. ಉತ್ಸವದಲ್ಲಿ ಸರ್ವ ಜನಾಂಗದವರು ಕುಣಿದು ಕುಪ್ಪಳಿಸಿ ಊರ ಹಬ್ಬದಂತೆ ಸಂಭ್ರಮಿಸಿದ್ದಾರೆ. ಇದರಿಂದ ಯಾರಿಗೂ ಸಮಸ್ಯೆಯಾಗಿರುವುದಿಲ್ಲ. […]

ಕೊಡಗು ಪತ್ರಕರ್ತರ ಸಂಘ(ರಿ) ಕ್ಷೇಮಾಭಿವೃದ್ಧಿ ಸಮಿತಿಯಿಂದ ಬೃಹತ್ ಆರೋಗ್ಯ ತಪಾಸಣಾ ಉಚಿತ ಶಿಬಿರ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ಇದರ ಕ್ಷೇಮಾಭಿವೃದ್ಧಿ ಸಮಿತಿಯಿಂದ 2025 ರ ಸೆಪ್ಟೆಂಬರ್‌ 12ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗ, ಪತ್ರಿಕಾ ಕ್ಷೇತ್ರದ ಸಿಬ್ಬಂದಿ, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ 15 ವಿಭಾಗಗಳ ನುರಿತ ತಜ್ಞರುಗಳು ಹಾಗೂ ವೈದ್ಯರುಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ.ಎನ್.ಟಿ. […]

ಮಾದರಿ ಆಚರಣೆ ಮೂಲಕ ಮೆಚ್ಚುಗೆ ಗಳಿಸಿದ ವಿನಾಯಕ ಸೇವಾ ಟ್ರಸ್ಟ್‌ ಗಣೇಶೋತ್ಸವ

ಮಡಿಕೇರಿ : ಕತ್ತಲೆಕಾಡು ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ ಜರುಗಿದ 19ನೇ ವರ್ಷದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು. ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಿದ ಟ್ರಸ್ಟ್‌, ಮೂರು ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಆ.27ರಂದು ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಿದವು. ಜೋರು ಮಳೆಯ ನಡುವೆಯೂ ಗ್ರಾಮಸ್ಥರು ಉತ್ಸಾಹದಿಂದ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ ಸಂಗೀತ ರಜಮಂಜರಿ ಹಮ್ಮಿಕೊಳ್ಳಲಾಗಿತ್ತು. ಸೋಮವಾರಪೇಟೆಯ ವಿಶ್ವರೂಪ […]

ಗಣೇಶೋತ್ಸವಕ್ಕೆ ಸಜ್ಜಾದ ವೀರಾಜಪೇಟೆ : ಪಟ್ಟಣದ 22 ಕಡೆ ವಿನಾಯಕ ಮೂರ್ತಿ ಪ್ರತಿಷ್ಟಾಪನೆ..!

ವೀರಾಜಪೇಟೆ : ಕೊಡಗು ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯತೆ, ಆಕರ್ಷಣೆ ಪಡೆದಿರುವುದು ವೀರಾಜಪೇಟೆಯ ಸಾಮೂಹಿಕ ಗಣೇಶೋತ್ಸವ. ಹಲವು ಕಾರಣದಿಂದಾಗಿ ಇದು ಜನಾಕರ್ಷಣೆಯ ಕೇಂದ್ರವಾಗಿದೆ. ಈ ಬಾರಿಯ ಉತ್ಸವಕ್ಕೆ ಪಟ್ಟಣ ಸಜ್ಜಾಗಿದ್ದು, ಅಂತಿಮ ಹಂತದ ತಯಾರಿ ಭರದಿಂದ ಸಾಗಿದೆ. ಈ ಬಾರಿ 22 ಕಡೆಗಳಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ಆಚರಣೆ 200 ವರ್ಷಗಳಿಂದ ನಡೆದುಕೊಂಡು ಬಂದಿದೆ. ಸೆಪ್ಟೆಂಬರ್ 6 ರಂದು ರಾತ್ರಿ ಶೋಭಾಯಾತ್ರೆ ನಡೆಯಲಿದ್ದು, 7 ರಂದು ನಸುಕಿನ ಜಾವ ಗೌರಿ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ. ಈ […]

ಮೃ*ತ ಹಂದಿಯನ್ನು ರಸ್ತೆ ಬದಿ ಎಸೆದ ಪ್ರಕರಣ – ಜೆಸಿಬಿ ಮೂಲಕ ಹೂತು ಹಾಕಿದ ಪಂಚಾಯಿತಿ..!

  ಮಡಿಕೇರಿ : ಗಾಳಿಬೀಡು ಗ್ರಾಮದಲ್ಲಿ ಅಪರಿಚಿತರು ಮೃತ ಹಂದಿಗಳನ್ನು ರಸ್ತೆ ಬದಿ ಎಸೆದು ಹೋಗಿದ್ದ ಪ್ರಕರಣಕ್ಕೆ ಸ್ಥಳೀಯ ಪಂಚಾಯಿತಿ ಸ್ಪಂದಿಸಿದೆ. ಯಾಳದಾಳು ಶರತ್ ಎಂಬವರ ತೋಟಕ್ಕೆ ಹೋಗುವ ರಸ್ತೆಯಲ್ಲಿ ಮೃತ ಹಂದಿಯನ್ನು ಎಸೆದು ಹೋಗಿರುವ ಬಗ್ಗೆ ಸ್ಥಳೀಯರಾದ ದಿಶಾಂತ್‌ ಪಂಚಾಯಿತಿ ಗಮನಕ್ಕೆ ತಂದಿದ್ದರು. ಇದಕ್ಕೆ ಸ್ಪಂದಿಸಿದ ಪಿಡಿಒ ಜೆಸಿಬಿ ಮೂಲಕ ಅದನ್ನು ತೆರವು ಮಾಡಲು ಸೂಚಿಸಿದರು. ಗುಂಡಿ ತೆಗೆದು ಜೆಸಿಬಿ ಮೂಲಕ ಹೂಳಲಾಯಿತು. ಗ್ರಾಮಸ್ಥರಾದ ದಿಶಾಂತ್, ಯಾಳದಳು ಶರತ್, ಯಾಳದಾಳು ನಿತಿನ್, ಪಂಚಾಯಿತಿ ಸಿಬ್ಬಂದಿಯ ಮನು […]