ಮಡಿಕೇರಿ : ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಕಾರ್ಯದರ್ಶಿಯಾಗಿ ಮಾಚಂಗಡ ಸಚಿನ್ ತಮ್ಮಯ್ಯ, ಉಪಾಧ್ಯಕ್ಷೆಯಾಗಿ ಮಾತಂಡ ಕುಶಿ ಉನ್ನತಿ, ಸಹ ಕಾರ್ಯದರ್ಶಿಯಾಗಿ ಅಳ್ಳಂಡ ಶಹನಾ ಚೋಂದಮ್ಮ, ಖಜಾಂಜಿಯಾಗಿ ಕಾಳಮಂಡ ರಾಬಿನ್ ಅಚ್ಚಮ್ಮ, ಸಹ ಖಜಾಂಜಿಯಾಗಿ ಮಾಳೇಟಿರ ಯಶ್ಮ ಬೋಜಮ್ಮ, ನಿರ್ದೇಶಕರಾಗಿ ಪೊನ್ನೋಲತಂಡ ಶರಣು ತಮ್ಮಯ್ಯ, ಬಾಡಮಾಡ ದೇಚಮ್ಮ, ಕರ್ನಂಡ ಧನುಶ್ರೀ, ಚೈಯ್ಯಂಡ ಕೀರ್ತನ್ ಅಯ್ಯಪ್ಪ, ಭೂಮಿಕಾ ಮಾಚಂಗಡ ಆಯ್ಕೆಯಾಗಿದ್ದಾರೆ.
ಸಭೆಯಲ್ಲಿ ಸದಸ್ಯರಾದ ಮೊಣ್ಣಂಡ ವಿನು ಕಾರ್ಯಪ್ಪ, ಮೂಕೊಂಡ ಸಂಜನಾ ದಮಯತಿ ಉಪಸ್ಥಿತರಿದ್ದರು.



