ಮೈತಾಡಿ ಗ್ರಾಮದಲ್ಲಿ ಗಬ್ಬದ ಹಸು ಹತ್ಯೆ – ಮೂವರು ಹಂತಕರ ಬಂಧನ..!

Share this post :

ವಿರಾಜಪೇಟೆ : ಮೈತಾಡಿ ಗ್ರಾಮದಲ್ಲಿ ಇತ್ತೀಚೆಗೆ ಗಬ್ಬದ ಹಸು ಕೊಂದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಂಡಂಗೇರಿಯ ಮೊಹಮ್ಮದ್ ಆಶಿಕ್(22), ಶಾಹಿದ್(25), ಹ್ಯಾರೀಸ್ (34) ಬಂಧಿತರು. ಮೈತಾಡಿ ಗ್ರಾಮದ ಬೊಳ್ಳಪಂಡ ಎಂ.ಭೀಮಯ್ಯ ಎಂಬವರ ಹಸುವನ್ನು ಕದ್ದೊಯ್ದು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 303(1) 22 & 4, 5, 12 The Karnataka Prevention of Slaughter & Preservation of cattle Act-2020 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪತ್ತೆಗೆ ಡಿವೈಎಸ್ಪಿ ಮಹೇಶ್ ಕುಮಾರ್.ಎಸ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ತಂಡ ಮೂವರನ್ನು ಬಂಧಿಸಿದೆ. ಕಾರ್ಯಾಚರಣೆಯಲ್ಲಿ ಉತ್ತಮ ರೀತಿ ಕಾರ್ಯನಿರ್ವಹಿಸಿದ ಪೊಲೀಸರ ತಂಡಕ್ಕೆ ಎಸ್ಪಿ ಕೆ. ರಾಮರಾಜನ್‌ ಅಭಿನಂದಿಸಿದ್ದಾರೆ.

coorg buzz
coorg buzz