ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಪರಿಣಾಮವಾಗಿ ವ್ತಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾದ ಆರೋಪಿಯನ್ನು ಬಂಧಿಸಲಾಗಿದೆ. ಮಧ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ಅತೀವೇಗ ಮತ್ತು ಅಜಾಗೂಕತೆಯಿಂದ ವಾಹನ ಚಾಲನೆ ಮಾಡಿ ಪಾದಚಾರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾಗಿರುವ ಕೆಎ-05-ಎಂಕ್ಯೂ-2672 ಕಾರಿನ ಚಾಲಕನಾದ ಶಿವನ್ ಕರುಂಬಯ್ಯನ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 281,125(ಬಿ), 105, 62 ಬಿ.ಎನ್.ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬ್ಯಾಲ ಗ್ರಾಮದ ನಿವಾಸಿಯಾದ ಆರೋಪಿ ಶಿವನ್ ಕರುಂಬಯ್ಯ (30) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ. ದಿನಾಂಕ: 26-04-2025 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಗದಾಳು ಗ್ರಾಮದ ರಸ್ತೆಯ ಬಳಿ ಪಾದಚಾರಿಗೆ ಕೆಎ-05-ಎಂಕ್ಯೂ-2672 ಕಾರು ಡಿಕ್ಕಿಯಾಗಿ (Car accident) ಕಡಗದಾಳು ಗ್ರಾಮದ ನಿವಾಸಿಯಾದ ಸೀನಾ (40) ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದ್ದು, ಸದರಿಯವರು ದಿನಾಂಕ: 29-04-2025 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಅಪಘಾತ ಪಡಿಸಿದ ಕೆಎ-05-ಎಂಕ್ಯೂ-2672 ಕಾರಿನ ಚಾಲಕನಾದ ಶಿವನ್ ಕರುಂಬಯ್ಯ ಎಂಬಾತನು ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿರುತ್ತದೆ.
ವಿಶೇಷ ಸೂಚನೆ:-
* ವಾಹನ ಚಾಲಕರು ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ ಅಪಘಾತ ಸಂಭವಿಸುವ ಹಾಗೂ ಅಪಘಾತದಲ್ಲಿ ಜೀವಕ್ಕೆ ಹಾನಿಯಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತ ಪಡಿಸಿದ್ದಲ್ಲಿ ಕೊಲೆಯಲ್ಲದ ಅಪರಾಧಿಕ ನರಹತ್ಯೆ (Culpable Homicide)ಯನ್ನು ಮಾಡುವ ವ್ಯಕ್ತಿಗೆ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆಯನ್ನು ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗುತ್ತದೆ.
* ರಸ್ತೆಯಲ್ಲಿ ವಾಹನ ಚಾಲಯಿಸುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು ಹಾಗೂ ವಾಹನ ಮಾಲೀಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮತ್ತು ವಾಹನ ಪರವಾನಿಗೆ (License) ಹೊಂದಿಲ್ಲದವರಿಗೆ ವಾಹನ ಚಲಾಯಿಸಲು ಆಸ್ಪದ ನೀಡಬಾರದು ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವುದು ಕಂಡುಬಂದಲ್ಲಿ ವಾಹನ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು & ಅತೀ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸುವುದು ಅಥವಾ ಬೈಕ್/ಕಾರುಗಳನ್ನು ಚಲಾಯಿಸುತ್ತಾ ಯಾವುದೇ ರೀತಿಯ ಸ್ಟಂಟ್ಗಳನ್ನು ಮಾಡಿರುವ ಭಾವಚಿತ್ರ/ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (Facebook, Instagram, Twitter & etc.) ಹಂಚಿಕೊಂಡಿರುವ ಬಗ್ಗೆ ಮಾಹಿತಿ ನೀಡುವುದು ಮತ್ತು ರಸ್ತೆಯಲ್ಲಿ ಯಾವುದೇ ಅಪಘಾತಗಳು ಸಂಭವಿಸಿದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.