ವಿರಾಜಪೇಟೆ (virajpet)ಹೋಬಳಿ ಪೊದಕೋಟೆ ಗ್ರಾಮದ ನಿವಾಸಿಯಾದ ಹೆಚ್ ಕೆ ಬಾಬು ಅವರ ವಾಸದ ಮನೆಯು ಇಂದು ಮಳೆಯಿಂದಾಗಿ ಭಾಗಶಃ ಹಾನಿಯಾಗಿದೆ. ಈ ಸಂಬಂಧ ಕಂದಾಯ ಪರಿವೀಕ್ಷಕರು,ಸಹಾಯಕ ಅಭಿಯಂತರರು,ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರುಗಳು, ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರದ ಭರವಸೆಯನ್ನು ನೀಡಿದ್ದಾರೆ.
