ಮಡಿಕೇರಿ : ಕನ್ನಡ ಚುಟುಕು ಸಾಹಿತ್ಯ ಪರಿಷತ್ನ ಕುಶಾಲನಗರ ತಾಲೂಕು ಸಮಿತಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಹೆಚ್.ಬಿ. ದಿನೇಶ್ ಚಾರಿ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ವಿ. ಅಮೃತ ಅವರನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ಶಾಂತಕುಮಾರ್, ಎನ್.ಕೆ. ಮಾಲಾದೇವಿ, ಸಹಕಾರ್ಯದರ್ಶಿಯಾಗಿ ರಮೇಶ್ ಕೆ.ಆರ್., ಕೋಶಾಧಿಕಾರಿಯಾಗಿ ಬರಮಣ್ಣ ಟಿ ಬೆಟ್ಟಗೇರಿ, ನಿರ್ದೇಶಕರಾಗಿ ಚಂದ್ರಶೇಖರ್ ಕೆ.ಎಸ್., ಎಸ್.ಎಸ್. ಅಂಕಿತಾ, ಮಂಜುನಾಥ್, ಪ್ರಕಾಶ್, ಶಿಲ್ಪ ಎಚ್.ಎಸ್., ದೀಪಿಕಾ ಎಮ್.ಎಸ್., ಬಸವರಾಜ್., ಮನು ಅವರನ್ನು ಆಯ್ಕೆ ಮಾಡಲಾಗಿದ್ದು, ಗೌರವಾಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ಗೌರವ ಸಲಹೆಗಾರರಾಗಿ ಎಂ.ಎ. ರುಬೀನಾ ಇರಲಿದ್ದಾರೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



