ಮಡಿಕೇರಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯ ಮೂಲದ ವಿದ್ಯಾರ್ಥಿನಿ ರಾಜ್ಯಕ್ಕೆ 6ನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಕುಶಾಲನಗರದ ಪ್ರತೀಕ್ಷಾ (Pratheeksha) ಎಸ್ 594/600 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಗಳಿಸಿದ್ದಾರೆ. ಬೆಳ್ತಂಗಡಿಯ ಎಕ್ಸೆಲ್ ಪಿ.ಯು. ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಈಕೆ ಕುಶಾಲನಗರದ ಶಿಕ್ಷಕಿ ಭವ್ಯ & ಮಾಜಿ ಸೈನಿಕ ಸುಧೀರ್ ಕುಮಾರ್ ಅವರ ಪುತ್ರಿ. ಇಂಗ್ಲೀಷ್ನಲ್ಲಿ 98, ಸಂಸ್ಕೃತ 100, ಭೌತಶಾಸ್ತ್ರ 100, ರಸಾಯನಶಾಸ್ತ್ರ 96, ಲೆಕ್ಕಶಾಸ್ತ್ರ 100, ಜೀವಶಾಸ್ತ್ರದಲ್ಲಿ 100 ಅಂಕ ಗಳಿಸಿ 99%ದೊಂದಿಗೆ ತೇರ್ಗಡೆಯಾಗಿದ್ದಾರೆ.
