ವಿರಾಜಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ಆಗಸ್ಟ್ 8 ರಂದು ಮಧ್ಯಾಹ್ನ 2:00 ಗಂಟೆಗೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ನೆರವೇರಲಿದೆ. ಮಡಿಕೇರಿ ಜಿಲ್ಲಾ ಖಜಾನೆ ಉಪ ನಿರ್ದೇಶಕರಾದ ಡಾ. ರಘುನಾಥ ಬಿ. ಎನ್. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಪ್ರಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಘಟಕದ ಮಹಾ ಪೋಷಕ ಮಲ್ಲಿಕಾರ್ಜುನ ತೊದಲಬಾಗಿ, ಗೌರವಾಧ್ಯಕ್ಷ ಎಲ್.ಐ. ಲಕ್ಕಮ್ಮನವರ್, ರಾಜ್ಯಾಧ್ಯಕ್ಷೆ ರಮಾ ಆರ್, ಪ್ರಧಾನ ಕಾರ್ಯದರ್ಶಿ ಪರ್ವೀನ್ ಬಾನು, ಪ್ರೊ. ಬಸವರಾಜು ಕೆ., ಹಿರಿಯ ಉಪಾಧ್ಯಕ್ಷ ಶ್ಯಾಮಸುಂದರ್ ಹಾಗೂ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷೆ ಕಮಲಮ್ಮ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸಾಹಿತ್ಯ, ಕಲೆ, ಶಿಕ್ಷಣ, ಕ್ರೀಡೆ, ಮಾಧ್ಯಮ ಹಾಗೂ ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳ ಗಮನಾರ್ಹ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಜೊತೆಗೆ ಸಂಗೀತ, ನೃತ್ಯ, ಗೀತ ಗಾಯನ ಮತ್ತು ಕವಿಗೋಷ್ಠಿಯನ್ನೊಳಗೊಂಡ ಸಾಂಸ್ಕೃತಿಕ ಸಮ್ಮಿಲನ ನೆರವೇರಲಿದೆ ಎಂದು ಗಣೇಶ್ ನಿಲುವಾಗಿಲು ಮಾಹಿತಿ ನೀಡಿದ್ದಾರೆ.


