ರಾಜ್ಯ ಸರ್ಕಾರದಿಂದ ಯುಗಾದಿ, ರಂಜಾನ್‌ ಗಿಫ್ಟ್‌ – ಹಾಲಿನ ದರ ೪ ರೂ. ಹೆಚ್ಚಿಸಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರ್ಕಾರ.!

Share this post :

ಬೆಂಗಳೂರು : ಯುಗಾದಿ(ugadi, ರಂಜಾನ್‌(ramdan) ಹಬ್ಬಕ್ಕೆ ಇನ್ನೆರೆಡು ದಿನ ಮಾತ್ರ ಬಾಕಿ ಇದೆ. ಈ ನಡುವೆ ರಾಜ್ಯ ಸರ್ಕಾರ(govt) ಜನತೆಗೆ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಸರ್ಕಾರ ಕೊಟ್ಟ ಗಿಫ್ಟ್‌ಗೆ ಜನತೆ ಶಾಕ್‌ಗೊಳಗಾಗಿದ್ದಾರೆ.
ಈಗಾಗಲೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿ ಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳ ಮಾಡಿದೆ. ನಂದಿನಿ(nandini) ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಇದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ಈಗಾಗಲೇ ವ್ಯಕ್ತವಾಗುತ್ತಿದೆ.
ಹಾಲಿನ ದರ ೫ ರೂ. ಹೆಚ್ಚಳಕ್ಕೆ ಕೆಎಂಎಫ್‌ ಪ್ರಸ್ತಾವನೆ ಸಲ್ಲಿಸಿತ್ತು. ಇಂದು ನಡೆದ ಸಂಪುಟ ಸಭೆಯಲ್ಲಿ ೪ ರೂ. ಹೆಚ್ಚಳ ಮಾಡಲು ಸಮ್ಮತಿಸಲಾಗಿದೆ.
ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿ: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಸಚಿವ ಸಂಪುಟದಿಂದ ಅನುಮೋದನೆ ನೀಡಿದ ಬೆನ್ನಲ್ಲಿಯೇ ಇಂದು ಮಧ್ಯ ರಾತ್ರಿಯಿಂದಲೇ ಹೊಸ ದರ ಅನ್ವಯವಾಗಲಿದೆ. ಈ ಮೂಲಕ ಯುಗಾದಿ ಹಬ್ಬಕ್ಕೆ ರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆಯನ್ನು ಎಳೆದು ಶಾಕ್ ನೀಡಿದೆ. ರಾಜ್ಯದಲ್ಲಿ 5 ಉಚಿತ ಗ್ಯಾರಂಟಿಗಳನ್ನು ನೀಡಿ, ರಾಜ್ಯದ ದುಡಿಯುವ ವರ್ಗದ ಜನರ ಸುಲಿಗೆ ಮಾಡುತ್ತಿದ್ದಾರೆ. ಇದೀಗ ಹಾಲಿನ ದರ ಹೆಚ್ಚಳದ ಬೆನ್ನಲ್ಲಿಯೇ ಹಾಲಿನ ಉಪ ಉತ್ಪನ್ನಗಳನ್ನು ತಯಾರಿಸುವ ಹೋಟೆಲ್‌ನ ಉತ್ಪನ್ನಗಳಾದ ಚಹಾ-ಕಾಫಿ, ಬೇಕರಿ ಉತ್ಪನ್ನಗಳ ಬೆಲೆಯೂ ಹೆಚ್ಚಾಗಲಿದೆ