ತೆರೆದ ವಾಹನದಲ್ಲಿ RCB ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ: ಯಾಕೆ ಗೊತ್ತಾ?

Royal Challengers Bangalore

Share this post :

ಐಪಿಎಲ್ -2025ನಲ್ಲಿ ಕಪ್ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.

ಆರ್‌ಸಿಬಿ ತಂಡ ವಿಕ್ಟರಿ ಪರೇಡ್ ಇಂದು ನಡೆಸುವ ಸಾಧ್ಯತೆ ಇತ್ತು. ಆದರೆ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಹೇಳಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಆರ್​ಸಿಬಿ ತಂಡ ನೇರವಾಗಿ ವಿಧಾನಸೌಧದಿಂದ ಬಸ್​ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಲಿದ್ದು, ಸಂಜೆ 6 ಗಂಟೆಗೆ ಆಟಗಾರರಿಂದ ಮೈದಾನದಲ್ಲಿ ಪರೇಡ್​ ನಡೆಯಲಿದೆ.