ಮಡಿಕೇರಿ: 2025 ರ ಏಪ್ರಿಲ್, 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಗೆ ಪ್ರತ್ಯುತ್ತರವಾಗಿ ಮೇ, 7 ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ‘ಸಿಂಧೂರ್’ (Operation Sindoor) ಹೆಸರಿನಲ್ಲಿ ಸೇನಾ ಕಾರ್ಯಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆದ್ದರಿಂದ ಕರ್ನಾಟಕ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ನಿರ್ದೇಶದಂತೆ ರಾಜ್ಯದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ ಮತ್ತಷ್ಷು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಮೇ 8 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದೆ.
ಸರ್ವ ನಾಗರಿಕರು ಆಗಮಿಸಿ ಭಾರತೀಯ ಸೇನೆಗೆ ಆತ್ಮಸ್ಥೈರ್ಯ ತಂಬುವುದರೊಂದಿಗೆ ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶವನ್ನು ಕಳುಹಿಸುವ ಸಲುವಾಗಿ ತಾವೆಲ್ಲರೂ ಪೂಜೆಯಲ್ಲಿ ಭಾಗವಹಿಸಬೇಕೆಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.