ವಿರಾಜಪೇಟೆಯ (Virajpet) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಎಸ್.ಸಿ, ಎಸ್.ಟಿ ಸಮಿತಿಯ ವತಿಯಿಂದ ನಮ್ಮ ನಡಿಗೆ ಸಮುದಾಯದ ಕಡೆಗೆ ಶೀರ್ಷಿಸಿಕೆಯಡಿಯಲ್ಲಿ ತಿತಿಮತಿ ಗ್ರಾಮ ಪಂಚಾಯಿತಿಯ ಮರಪಾಲ ಹಾಡಿಯಲ್ಲಿ ಹಾಡಿ ಜನರಿಗಾಗಿ ವಿಶೇಷ ಉಪನ್ಯಾಸ, ಹಾಡಿ ಬೇಟಿ ಮತ್ತು ಜಾಗೃತಿ ಅರಿವು ಕಾರ್ಯಕ್ರಮವು (program) ಸೋಮವಾರ ಮರಪಾಲ ಅಂಗನವಾಡಿಯಲ್ಲಿ ನಡೆಯಿತು.
ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾದ ರಾಮು.ಪಿ.ಸಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಇಂದಿನ ವಿದ್ಯಾರ್ಥಿಗಳಿಗೆ ಹಾಡಿಯ ಅರಿವು ಹಾಗೂ ಹಾಡಿಯ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ತಮ್ಮ ಉದ್ಘಾಟನಾ ನುಡಿಯಲ್ಲಿ ಹೇಳಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಘುರಾಜ್ ಆರ್ ರವರು ಸಮುದಾಯದ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದರು. ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಹಾಡಿಯ ಜನರು ಒಳ್ಳೆಯ ಶಿಕ್ಷಣ ಪಡೆಯಬೇಕು. ಆಗ ನಿಮ್ಮ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ ದಯಾನಂದ.ಕೆ.ಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಾಡಿಯ ಜನರಿಗೆ ಶಿಕ್ಷಣ ಮತ್ತು ಆರೋಗ್ಯದ ಅರಿವು ಬಹಳ ಮುಖ್ಯ. ವಿದ್ಯಾರ್ಥಿಗಳಿಂದ ಪ್ರತಿ ಆರು ತಿಂಗಳಿಗೊಮ್ಮೆ ಹಾಡಿಯ ಜನರ ನೋವು ನಲಿವುಗಳನ್ನು ಅಧ್ಯಯನ ಮಾಡಲು ಹಾಗೂ ಕಾಲೇಜನ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕ ವೃಂದದವರ ಮೂಲಕ ಹಾಡಿಯ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಕೈಗೊಳ್ಳುತ್ತೇವೆ ಎಂದು ತಮ್ಮ ಅಧ್ಯಕ್ಷೀಯ ಮಾತುಗಳನ್ನಾಡಿದರು. ನಂತರ ವಿದ್ಯಾರ್ಥಿಗಳಿಂದ ಜಾಗೃತಿ ಅರಿವು ಮೂಡಿಸಲು ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮರಪಾಲ ಹಾಡಿಯ ಅಧ್ಯಕ್ಷರಾದ ರಾಜು, ಮರಪಾಲ ಹಾಡಿಯ ಹಿರಿಯರಾದ ಸುಬ್ಬು, ಕಾಲೇಜಿನ ಎಸ್.ಸಿ, ಎಸ್.ಟಿ ಸಮಿತಿಯ ಸಂಚಾಲಕಿ ಕು. ಧನ್ಯ.ಕೆ.ಜಿ, ನಿರ್ವಹಣಾಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಮ್ಮಯ್ಯ ತಬಾಸಂ, ಮರಪಾಲÀ ಅಂಗನವಾಡಿ ಶಿಕ್ಷಕಿ ಮಲ್ಲಿಗೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮರಪಾಲ ಹಾಡಿಯ ಹಲವಾರು ಪುರುಷರು, ಮಹಿಳೆಯರು, ಮಕ್ಕಳು ಹಾಜರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಬಿ.ಎ ವಿದ್ಯಾರ್ಥಿನಿ ಕುಮಾರಿ ಕೀರ್ತನ ಸ್ವಾಗತಿಸಿ, ಕುಮಾರಿ ಅರ್ಚನ ವಂದಿಸಿ, ಕುಮಾರಿ ಕೀರ್ತನ ನಿರೂಪಿಸಿದರು.