ರಾಜ್ಯದಲ್ಲಿ ನಕಲಿ ದಾಖಲೆಗಳ ಆಧಾರದ ಮೇಲೆ ಪಡೆದಿದ್ದ ಬಿಪಿಎಲ್ ಕಾರ್ಡ್ಗಳನ್ನು (BPL Card ) ರದ್ದುಗೊಳಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದವರು ಎಪಿಎಲ್ಗೆ ವರ್ಗಾಯಿಸಲ್ಪಟ್ಟಿದ್ದು, ಈ ಕ್ರಮದ ಪರಿಣಾಮವಾಗಿ ನಿಜವಾಗಿ ಬಡವರಾಗಿ ಪರಿಗಣಿಸಲ್ಪಟ್ಟಿದ್ದ ಹಲವರ ಕಾರ್ಡ್ಗಳು ಕೂಡ ರದ್ದಾದವು. ಇದರಿಂದಾಗಿ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಪ್ರತಿಭಟನೆಗಳಿಗೆ ಕಾರಣವಾಯಿತು. ಈ ಸಮಸ್ಯೆ ಅರಿತ ಸರ್ಕಾರ, ತಪ್ಪುಗಳನ್ನು ತಿದ್ದುಕೊಳ್ಳುವ ಭರವಸೆ ನೀಡಿತ್ತು.
ಇದರ ಜೊತೆಗೆ ಇನ್ನೊಂದು ಒಂದೇ ಮನೆಗೆ ಸೇರಿರುವ ಸದಸ್ಯರು ವಿಭಿನ್ನ ಹೆಸರುಗಳಲ್ಲಿ ಎರಡು ಅಥವಾ ಹೆಚ್ಚು ಪಡಿತರ ಚೀಟಿಗಳನ್ನು(Ration cards) ಹೊಂದಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಈ ಬಗ್ಗೆ ಪರಿಶೀಲನೆ ಆರಂಭಿಸಿದ್ದು, ಅನರ್ಹ ವ್ಯಕ್ತಿಗಳು ಸಹ ಪಡಿತರ ಸೌಲಭ್ಯ ಪಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಆರ್ಥಿಕವಾಗಿ ಸಬಲರಾದವರೂ ಸಹ ಸಬ್ಸಿಡಿ ಅಕ್ಕಿ ಪಡೆದಿದ್ದು, ಕೆಲವೊಮ್ಮೆ ಖಾಸಗಿ ಬಳಕೆ ಅಥವಾ ಮಾರುಕಟ್ಟೆಗೆ ಮಾರಾಟ ಮಾಡಿದ ಘಟನೆಗಳು ಸರ್ಕಾರದ ಗಮನಕ್ಕೆ ಬಂದಿದೆ.
ಸದ್ಯಕ್ಕೆ ಹೊಸ ಪಡಿತರ ಚೀಟಿಗೆ ಸಾರ್ವಜನಿಕರಿಗೆಅರ್ಜಿ ಅವಕಾಶವಿಲ್ಲ. ಕೇವಲ ತುರ್ತು ವೈದ್ಯಕೀಯ ಸಂದರ್ಭದಲ್ಲಿಯೇ( Emergency medical situation) ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆರೋಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದಾಖಲೆಗಳಿರುವವರಿಗೆ ಮಾತ್ರ ಅವಕಾಶ ಸಿಗಲಿದೆ. ಹಳೆಯ ಅರ್ಜಿಗಳ ಪರಿಶೀಲನೆಯ ನಂತರವೇ ಹೊಸ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಒಂದು ಕುಟುಂಬದಲ್ಲಿ ಅತ್ತೆ, ಸೊಸೆ, ಅಥವಾ ಸೋದರರ ಹೆಸರಿನಲ್ಲಿ ಪ್ರತ್ಯೇಕ ಕಾರ್ಡ್ಗಳನ್ನು ಪಡೆದು, ಬಡವರಿಗೆ ಸಿಗಬೇಕಾದ ಹಕ್ಕುಗಳನ್ನು ಅನ್ಯಾಯವಾಗಿ ಪಡೆಯುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ.