ಕಾಡುಹಂದಿ ಬೇಟೆಗಾರನ ಮೇಲೆ ಗುಂಡೇಟು: ಓರ್ವನ ಬಂಧನ, ಮೂವರು ಪರಾರಿ

ಕಾಡುಹಂದಿ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಘರ್ಷಣೆ ನಡೆದು, ಅರಣ್ಯಾಧಿಕಾರಿಗಳು ಗುಂಡು ಹಾರಿಸಿ ಓರ್ವ ಬೇಟೆಗಾರನನ್ನು ಬಂಧಿಸಿದ ಘಟನೆ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ನಡೆದಿದೆ. ಬಂಧಿತನನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಅನ್ವಿತ್ ಎಂದು ಗುರುತಿಸಲಾಗಿದ್ದು, ಈತನ ಜೊತೆಗಾರರಾದ ದರ್ಶನ್, ಮಂಜ ಹಾಗೂ ಕಿರಣ್ ಎಂಬುವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ರಾತ್ರಿ ತನಿಖಾ ತಂಡವು ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ ಬೇಟೆ […]