ನಾಳೆ ಕೊಡಗಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Indira Canteeen

ಕುಶಾಲನಗರ ಪುರಸಭೆ ವ್ಯಾಪ್ತಿಯ KSRTC ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‍ನ್ನು (Indira Canteeen) ಮೇ, 10 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರು ಸಾರ್ವಜನಿಕರ ಉಪಯೋಗಕ್ಕೆ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಶಾಲನಗರ ಪುರಸಭೆ ಅಧ್ಯಕ್ಷರು ಕೋರಿದ್ದಾರೆ.