ಜಾತಿ ಸಾಮಾಜಿಕ ಸಮೀಕ್ಷೆಯಿಂದ ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಾಮಾಜಿಕ […]