ಒಡಿಶಾ ಮೂಲದ ವ್ಯಕ್ತಿಯಿಂದ ಗಾಂಜಾ ಮಾರಾಟ ಯತ್ನ: ಪೊಲೀಸರ ವಶಕ್ಕೆ

ಒಡಿಶಾ ಮೂಲದ ವ್ಯಕ್ತಿಯೋರ್ವ ತನ್ನೂರಿನಿಂದ ಗಾಂಜಾವನ್ನು ತಂದು ಪೊನ್ನಂಪೇಟೆ (Ponnampet) ತಾಲೂಕು ಕಾನೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊನ್ನಂಪೇಟೆ ಪೊಲೀಸರು ಹೆಣೆದ ಬಲೆಗೆ ಬಿದ್ದಿದ್ದಾನೆ. ಕಳೆದ ಹಲವು ವರ್ಷಗಳಿಂದ ಗುತ್ತಿಗೆದಾರರೊಬ್ಬರ ಬಳಿ ರಿಂಗ್ ಕೆಲಸ ನಿರ್ವಹಿಸುತ್ತಿದ್ದ, ಮೂಲತಃ ಒಡಿಶಾ ರಾಜ್ಯದ ಸಿರಿಂಗಿಂ ಗ್ರಾಮದ ಸಂಜಯ್ ನಾಯಕ್ ಎಂಬಾತ ಬಂಧಿತ ಆರೋಪಿಯಾಗಿದ್ದು ಈತನಿಂದ 3 ಕೆ.ಜಿ. 250 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಈತ ಪ್ರತಿ ವರ್ಷ 3 – 4 ಬಾರಿ ತನ್ನ ಊರಿಗೆ ತೆರಳಿ ಅಲ್ಲಿಂದ […]
ಆಟವಾಡಲು ಕೆರೆಗೆ ಇಳಿದ ಬಾಲಕಿ ದುರ್ಮರಣ!

ಆಟವಾಡಲೆಂದು ಕೆರೆಗೆ ಇಳಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ವಪ್ಪಿರುವ ದಾರುಣ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆ (Ponnampete) ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚನ್ನಂಗೊಲ್ಲಿ ಸಮೀಪದ ಈಸ್ಟ್ ವೇಸ್ಟ್ ಮಿಲ್ ಸಮೀಪದ ತೋಟದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ 9 ವರ್ಷದ ಪುತ್ರಿ ಲಾವಣ್ಯ ಮೃತ ದುರ್ದೈವಿ ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಇಳಿದಿದ್ದರು. ಆದರೆ ಕೆರೆಯಲ್ಲಿ ನೀರು […]