ಶಾಸಕ ಪೊನ್ನಣ್ಣ ತೇಜೋವಧೆಗೆ ಯತ್ನ: ಸುಳ್ಳು ಸುದ್ದಿ ಹರಡುವವರ ವಿರುದ್ಧ ನಾಪೋಕ್ಲು ವಲಯ ಕಾಂಗ್ರೆಸ್ ಕಿಡಿ

ನಾಪೋಕ್ಲು: ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಹಾಗೂ ದೃಶ್ಯ ಮಾಧ್ಯಮಗಳ ಮೂಲಕ ನಮ್ಮ ನೆಚ್ಚಿನ ಶಾಸಕರಾದಂತಹ ಅಜ್ಜಿಕುಟ್ಟಿರ. ಎಸ್ ಪೊನ್ನಣ್ಣ ನವರ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಡಿಸುತ್ತಾ, ಜನರ ದಾರಿ ತಪ್ಪಿಸುತ್ತಿರುವುದು ವಿಪರ್ಯಾಸ. ಇದನ್ನು ನಾಪೋಕ್ಲು ವಲಯ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ನಾಪೋಕ್ಲು ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ ಹೇಳಿದರು. ಬೇತು ಗ್ರಾಮದ ದವಸ ಭಂಡಾರದಲ್ಲಿ ಮಂಗಳವಾರ ನಾಪೋಕ್ಲು ವಲಯ ಕಾಂಗ್ರೆಸಿನಿಂದ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಸರ್ಕಾರದ ಅಧೀನದಲ್ಲಿ ನಡೆಯುವಂತಹ […]
ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ’ ಕಾರ್ಯಕ್ರಮ

ಮಡಿಕೇರಿ:- ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ […]
ಶಾಸಕ ಎ.ಎಸ್. ಪೊನ್ನಣ್ಣ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!

ಗೋಣಿಕೊಪ್ಪ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕಿದ ಪ್ರಕರಣ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗುತ್ತಿದೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ನೇತೃತ್ವದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೆಟ್ಟದಾಗಿ ಕಾಮೆಂಟ್ ಹಾಕಿರುವ 05 ಮಂದಿಯ ವಿರುದ್ಧ ದೂರು ನೀಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಂಡ ದ್ಯಾನ್ ದೇವಯ್ಯ, ಗೋಣಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ […]
ಗೋಡಾ ಹೈ – ಮೈದಾನ್ ಹೈ, ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ : ದಸರಾ ವೇದಿಕೆಯಲ್ಲಿ ಸಿಎಂ ಬಹಿರಂಗ ಸವಾಲು..!

ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ […]
ಕಾರ್ಯಕರ್ತರ ಕಡೆಗಣನೆ ಯುವ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅನೂಪ್ ಕುಮಾರ್ ರಾಜೀನಾಮೆ

ಕೊಡಗು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ನಿರಂತರವಾಗಿ ಕಡೆಗಣಿಸುತ್ತಾ, ಪಕ್ಷದ ಯಾವುದೇ ಕಾರ್ಯಕ್ರಮಗಳನ್ನು ಯುವ ಕಾಂಗ್ರೆಸ್ ಮುಖಂಡರು ಮತ್ತು ಪದಾಧಿಕಾರಿಗಳಿಗೆ ತಿಳಿಸುತ್ತಿಲ್ಲ. ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕೇವಲ ರಾಜಕೀಯವಾಗಿ ಮಾತ್ರ ಬಳಸುತ್ತಿದ್ದಾರೆ. ಕೊಡಗಿನಲ್ಲಿ ಕೆಲವೊಂದು ಹಿರಿಯ ಕಾಂಗ್ರೆಸ್ ಮುಖಂಡರು ಯುವ ಕಾಂಗ್ರೆಸ್ ಮುಖಂಡರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್ (Anup Kumar) […]
ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎಂ.ಹನೀಫ್ ಇನ್ನಿಲ್ಲ

ಕೊಡಗು ಜಲ್ಲಾ ಕಾಂಗ್ರೆಸ್ ಹಿರಿಯ ಕಾರ್ಯಕರ್ತ,ಜಿಲ್ಲಾ ಕಾರಾಗೃಹ ಸಮಿತಿ ಸದಸ್ಯರಾದ ಎಂ.ಎಂ.ಹನೀಫ್ (M.M. Haneef) ರವರು ಮಂಗಳೂರಿನಲ್ಲಿ ಅನಾರೋಗ್ಯದಿಂದ ಮೃತರಾಗಿದ್ದಾರೆ.ಮೃತರ ಅಂತ್ಯಕ್ರಿಯೆ ಮಡಿಕೇರಿಯಲ್ಲಿ ಸಂಜೆ ನಡೆಯಲಿದೆ.
ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಇನ್ನಿಲ್ಲ

ಮಾಜಿ ಜಿಲ್ಲಾ ಕಾಂಗ್ರೆಸ್ (Congress) ಅಧ್ಯಕ್ಷ ಕುಟ್ಟ ಗ್ರಾಮದ ನಿವಾಸಿ ಮುಕ್ಕಾಟೀರ ಶಿವು ಮಾದಪ್ಪ (49) ನಿಧನರಾಗಿದ್ದಾರೆ. ನೇರ ನುಡಿಯ ಒಬ್ಬ ನಾಯಕ, ಮಾಜಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಹಾಲಿ ಕೆಪಿಸಿಸಿ ಸದಸ್ಯರಾಗಿದ್ದ ಶಿವು ಮಾದಪ್ಪ (Shivu Madappa) ಒಬ್ಬ ಅತ್ಯುತ್ತಮ ಸಂಘಟಗಾರರಾಗಿ, ಯುವ ನಾಯಕರಾಗಿ ಗುರುತಿಸಿಕೊಂಡಿದ್ದರು. ಮುಕ್ಕಾಟಿರ ಶಿವು ಮಾದಪ್ಪ ಭಾನುವಾರ ರಾತ್ರಿ 11:00 ಸಮಯದಲ್ಲಿ ಮೈಸೂರು ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ಸಂಸ್ಕಾರ ಸೋಮವಾರ […]