ಮೃ*ತ ಹಂದಿಯನ್ನು ರಸ್ತೆ ಬದಿ ಎಸೆದ ಪ್ರಕರಣ – ಜೆಸಿಬಿ ಮೂಲಕ ಹೂತು ಹಾಕಿದ ಪಂಚಾಯಿತಿ..!

  ಮಡಿಕೇರಿ : ಗಾಳಿಬೀಡು ಗ್ರಾಮದಲ್ಲಿ ಅಪರಿಚಿತರು ಮೃತ ಹಂದಿಗಳನ್ನು ರಸ್ತೆ ಬದಿ ಎಸೆದು ಹೋಗಿದ್ದ ಪ್ರಕರಣಕ್ಕೆ ಸ್ಥಳೀಯ ಪಂಚಾಯಿತಿ ಸ್ಪಂದಿಸಿದೆ. ಯಾಳದಾಳು ಶರತ್ ಎಂಬವರ ತೋಟಕ್ಕೆ ಹೋಗುವ ರಸ್ತೆಯಲ್ಲಿ ಮೃತ ಹಂದಿಯನ್ನು ಎಸೆದು ಹೋಗಿರುವ ಬಗ್ಗೆ ಸ್ಥಳೀಯರಾದ ದಿಶಾಂತ್‌ ಪಂಚಾಯಿತಿ ಗಮನಕ್ಕೆ ತಂದಿದ್ದರು. ಇದಕ್ಕೆ ಸ್ಪಂದಿಸಿದ ಪಿಡಿಒ ಜೆಸಿಬಿ ಮೂಲಕ ಅದನ್ನು ತೆರವು ಮಾಡಲು ಸೂಚಿಸಿದರು. ಗುಂಡಿ ತೆಗೆದು ಜೆಸಿಬಿ ಮೂಲಕ ಹೂಳಲಾಯಿತು. ಗ್ರಾಮಸ್ಥರಾದ ದಿಶಾಂತ್, ಯಾಳದಳು ಶರತ್, ಯಾಳದಾಳು ನಿತಿನ್, ಪಂಚಾಯಿತಿ ಸಿಬ್ಬಂದಿಯ ಮನು […]