ಹಿರಿಯ ಪತ್ರಕರ್ತ ಕಲ್ಯಾಟಂಡ ಬಿ. ಗಣಪತಿ ನಿಧನ

ರಾಜ್ಯದ ಖ್ಯಾತ ಪತ್ರಕರ್ತ ಕಲ್ಯಾಟಂಡ ಬಿ. ಗಣಪತಿ(86) ನಿಧನರಾಗಿದ್ದಾರೆ. ಮೈಸೂರು ಭಾಗದ ಜನಪ್ರಿಯ ಪತ್ರಿಕೆ ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಸಂಪಾದಕರಾಗಿದ್ದ ಇವರು, 5 ದಶಕಗಳಿಂದ ಮೈಸೂರಿನಲ್ಲಿ ಪತ್ರಿಕೋದ್ಯಮಿಯಾಗಿ ಖ್ಯಾತಿ ಗಳಿಸಿದ್ದರು. ಇಂಗ್ಲೀಷ್‌ ಹಾಗೂ ಕನ್ನಡ ಭಾಷೆಯಲ್ಲಿ ಅಪಾರ ಜ್ಞಾನ ಹೊಂದಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಪತ್ರಕರ್ತರ ಸಂಘಟನೆಗಳು, ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.

Virajpet MLA Ponnanna: ಕೊಡಗು ವಿಶ್ವವಿದ್ಯಾಲಯದ ಕ್ಲೋಸ್‌ಗೆ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರ ನಿಲುವೇನು?

Virajpet MLA Ponnanna

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು (Kodagu University) ಮುಚ್ಚುವ ಕಾಂಗ್ರೆಸ್ ಸರ್ಕಾರದ ಪ್ರಸ್ತಾವನೆಯ ವಿರುದ್ಧ ಮಡಿಕೇರಿ ಶಾಸಕ ಮಂತರ್ ಗೌಡ ಅವರ ದಿಟ್ಟ ನಿಲುವನ್ನು ಶ್ಲಾಘಿಸಬೇಕಿದೆ. ಮೇಲ್ನೋಟಕ್ಕೆ, ಹಿಂದಿನ ಬಿಜೆಪಿ ಸರ್ಕಾರವು ಪ್ರಾರಂಭಿಸಿದ ವಿಶ್ವವಿದ್ಯಾಲಯಗಳನ್ನು ರಾಜಕೀಯ ಕಾರಣಗಳಿಗಾಗಿ ಮುಚ್ಚಲು ಸಿದ್ದರಾಮಯ್ಯ ಸರ್ಕಾರ ಬಯಸುತ್ತಿರುವಂತೆ ಕಾಣುತ್ತದೆ ಎಂದಿದ್ದಾರೆ.   ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ ಪ್ರಸ್ತುತ ಕಾಂಗ್ರೆಸ್ ಆಡಳಿತವು ನೀಡಿರುವ ನೆಪವೆಂದರೆ ವಿಶ್ವವಿದ್ಯಾಲಯಗಳು ಅಸಮರ್ಪಕ ಮೂಲಸೌಕರ್ಯ ಮತ್ತು ಆರ್ಥಿಕ ಸಮಸ್ಯೆಗಳಿಂದಾಗಿ ಕಾರ್ಯಸಾಧ್ಯವಲ್ಲ ಅನ್ನೋದು. ಕಾಂಗ್ರೆಸ್ ಪಕ್ಷದವರೇ […]