ಕಾವೇರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂವಾದ ಕಾರ್ಯಕ್ರಮ

ಪ್ರಯತ್ನ ಮತ್ತು ಪರಿಶ್ರಮದಿಂದ ಗುರಿಯನ್ನು ಮುಟ್ಟಬಹುದೇ ಹೊರತು ಅದೃಷ್ಟ, ಹಣೆಬರಹ ನಂಬಿದರೆ ಯಶಸ್ಸನ್ನು ಪಡೆಯಲು ಸಾಧ್ಯವಿಲ್ಲ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ರುದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ (Cauvery College) ಐಕ್ಯೂಎಸಿ ಹಾಗೂ ಇತಿಹಾಸ ವಿಭಾಗದ ವತಿಯಿಂದ ಮಂಗಳವಾರ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಆಯೋಜಿಸಲಾಗಿದ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ಸಮಯ ನಿರ್ವಹಣೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸ ವಿಷಯದ ಮಹತ್ವ ಎಂಬ ವಿಷಯದ ಕುರಿತು ನಡೆದ ಸಂವಾದ ಕಾರ್ಯಕ್ರಮವನ್ನು […]

ಶುಂಠಿಗೆ ಹೆಚ್ಚಿದ ರೋಗ: ಸರಿಯಾದ ನಿರ್ವಹಣೆ ಹೇಗೆ?

Ginger disease outbreak

ಮಡಿಕೇರಿ:- ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಂಠಿ (Ginger) ಬೆಳೆಯಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಶೇ.60-70ರಷ್ಟು ಇಳುವರಿ ನಷ್ಠ ಅನುಭವಿಸಬೇಕಾಗುತ್ತದೆ ಎಂದು ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಹರೀಶ್ ಬಿ.ಎಸ್. ಅವರು ತಿಳಿಸಿದರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ “ಶುಂಠಿ […]

ಮರಾಠ, ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Marata

ಮಡಿಕೇರಿ: ಕೊಡಗು (Kodagu) ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ೨೯ನೇ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.೮ ರಂದು ನಡೆಯಲಿದೆ. ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಬೆಳಿಗ್ಗೆ ೯ ಗಂಟೆಗೆ ಸಭೆ ನಡೆಯಲಿದೆ. ಸಭೆಯನ್ನು ಕರ್ನಾಟಕ ಮಾರಾಟಿ ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯ್ಕ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಮರಾಠ-ಮರಾಟಿ […]

ಕಲೋತ್ಸವ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ

A. S. Ponnanna

ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಗರದ ಕಾಲೇಜು ಸಭಾಂಗಣದಲ್ಲಿ ಕಲೋತ್ಸವ (Kalotsava) ಜಿಲ್ಲಾ ಮಟ್ಟದ ಅಂತರ್ ಕಾಲೇಜು (College) ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸ್ಪಷ್ಟತೆ ಇರಬೇಕು. ತೆಗೆದುಕೊಂಡ ನಿರ್ಧಾರ ಅಚಲವಾಗಿರಬೇಕು. ಜೀವನದಲ್ಲಿ ಶಿಸ್ತು […]

ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಸಾಧಕ-ಬಾಧಕ ಸಂವಾದ ಕಾರ್ಯಕ್ರಮ

Kodagu University

ಮಡಿಕೇರಿ: ಸರ್ಕಾರದಿಂದ ಕೊಡಗಿಗೆ ಒದಗಿಬಂದ ಸೌಲಭ್ಯವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ಕೈಬಿಡುವ ಕೆಲಸ ಆಗಬಾರದು ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ (Kodagu University) ಸಾಧಕ-ಬಾಧಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ರಾಜ್ಯದಲ್ಲಿ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಚಿಂತನೆ ನಡೆಸಿದ್ದು, ಅದರಲ್ಲಿ ಕೊಡಗು ವಿಶ್ವವಿದ್ಯಾಲಯವೂ ಒಂದು. ನೂರಾರು ಎಕರೆ […]

ಏ.21 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ

vaccination campaign

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 21 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ (Vaccination) ಅಭಿಯಾನ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ ಸಂಬಂಧಿಸಿದಂತೆ […]

FMKMCC ಹಳೆ ವಿದ್ಯಾರ್ಥಿ ಸಂಘದಿಂದ ಗುರು ವಂದನಾ ಕಾರ್ಯಕ್ರಮ: ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ

FMKMCC Alumni Association

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು (FMKMCC) ಹಳೆ ವಿದ್ಯಾರ್ಥಿ ಸಂಘದ ಮಾಸಿಕ ಸಭೆ ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ.ಬಿ ಅವರು ಮಾತನಾಡಿ, ಕಾಲೇಜು ಈಗಾಗಲೇ 75 ವರ್ಷಗಳನ್ನು ಪೂರೈಸಿದ್ದು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗಾಗಿ ಬಹಳಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಾಲೇಜಿನ […]

ಪಿ.ಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

goverment school

ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮವು ನಡೆಯಿತು. ಶಾಲಾ (School) ಹಿರಿಯ ಮುಖ್ಯ ಶಿಕ್ಷಕಿ ಹೆಚ್.ಕೆ.ಸುಶೀಲ ಅವರು ಮಾತನಾಡಿ ಶಾಲೆಯಲ್ಲಿ ಸಿಗುವ ಉಚಿತ ಸೌಲಭ್ಯ ಹಾಗೂ ಸರ್ಕಾರದ ವತಿಯಿಂದ ದೊರೆಯುವ ಉಚಿತ ಸೌಲಭ್ಯಗಳ ಬಗ್ಗೆ ವಿವರಿಸಿದರು. ಶಾಲೆಯಲ್ಲಿನ ಸೌಲಭ್ಯಗಳು ನುರಿತ ಶಿಕ್ಷಕರು, ಸುಸಜ್ಜಿತ ನವೀನ ಕಟ್ಟಡ, ಸುಸಜ್ಜಿತ ಪೀಠೋಪಕರಣಗಳು, ಅನುಭವಾತ್ಮಕ ಕಲಿಕೆ, ವಿಶಾಲವಾದ ಆಟದ ಮೈದಾನ, ಗ್ರಂಥಾಲಯ, ಉತ್ತಮ ವಿಜ್ಞಾನ, ಗಣಿತ, ಸಮಾಜ ಸಮಾಜ ವಿಜ್ಞಾನ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, […]

ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ

Cooperative sector awareness

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮವು (program) ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ […]

ವಿಶೇಷ ಕಾರ್ಯಕ್ರಮದ ಮೂಲಕ ಅನಾಥ ಹೆಣ್ಣು ಮಕ್ಕಳಿಗೆ ನೆರವು

special program

ಬೆಂಗಳೂರು: ನೆಲೆ ಫೌಂಡೇಶನ್ನಲ್ಲಿ ನೆಲೆಸಿರುವ 50 ಹೆಣ್ಣು ಮಕ್ಕಳಿಗೆ (Girls) ನೆರವಾಗುವ ನಿಟ್ಟಿನಲ್ಲಿ ವಿಜಯನಗರದ ಕಾಸಿಯಾ ಭವನದಲ್ಲಿ ಶೈನಿಂಗ್ ಸ್ಟಾರ್ಸ್ ವಿಶೇಷ ಕಾರ್ಯಕ್ರಮವನ್ನು (program) ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಫ್ಯಾಷನ್ ಶೋ, ತಾಯಿ ಮಗುವಿನ ರ್ಯಾಂಪ್ ವಾಕ್, ಮಹಿಳೆಯರ ವಿಭಿನ್ನ ರೀತಿಯ ಸ್ಯಾರಿ ರ್ಯಾಂಪ್ ವಾಕ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಮೂಲಕ ಸಂಗ್ರಹವಾಗುವ ಹಣವನ್ನು ಫೌಂಡೇಶನ್ ಗೆ ನೀಡಲಾಗುತ್ತದೆ. ಅನ್ಷುಲಾ ಲೇಡೀಸ್ ಎಂಟ್ರಿಪ್ರಿನರ್ ಕ್ಲಬ್ ಮತ್ತು ಮಧುರಾ ವುಮೆನ್ಸ್ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ […]