ರಶ್ಮಿಕಾ, ವಿಜಯ್ ದೇವರಕೊಂಡ ನಿಶ್ಚಿತಾರ್ಥ? – ಹೊಸ ಜೀವನದತ್ತ ಜೋಡಿಹಕ್ಕಿ ಹೆಜ್ಜೆ..!

ಬೆಂಗಳೂರು : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಹೊಸ ಜೀವನಕ್ಕೆ ಹೆಜ್ಜೆಯಿಡಲು ಕೊಡಗಿನ ಸುಂದರಿ ಸಿದ್ಧರಾಗುತ್ತಿದ್ದಾರೆಂಬ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರತಿಷ್ಠಿತ ಮಾಧ್ಯಮಗಳು ವರದಿ ಪ್ರಕಟಿಸಿದ್ದು, ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆಂದು ವರದಿ ಭಿತ್ತರಿಸಿದೆ. ಆದರೆ ಈ ಬಗ್ಗೆ ಇಬ್ಬರು ತಾರೆಯರ ಕಡೆಯವರು ಯಾರೂ ಕೂಡಾ ಅಧಿಕೃತ ಹೇಳಿಕೆ […]
ಹೊಸ ಬ್ಯುಸಿನೆಸ್ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ!

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಭಾರತೀಯ ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿವೆ. ಇದೀಗ ನಟಿ ರಶ್ಮಿಕಾ ಬ್ಯುಸಿನೆಸ್ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಈ ಬಗ್ಗೆ ರಶ್ಮಿಕಾ, ತಮ್ಮ ತಾಯಿ ಅವರೊಂದಿಗಿನ ವಿಡಿಯೋ ಕಾಲ್ನ ಸಂಭಾಷಣೆ ಮೂಲಕ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ. ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಹೊಸ ಬ್ಯುಸಿನೆಸ್ ಶುರು ಮಾಡಿದ್ದಾರೆ. […]
ಸಿನೆಮಾ ಇಂಡಸ್ರ್ಟಿಗೆ ಬಂದ ಮೊದಲ ಕೊಡವತಿ ನಾನು ಎಂದ ರಶ್ಮಿಕಾ ವಿರುದ್ಧ ಆಕ್ರೋಶ, ನಟಿ ಪ್ರೇಮಾ ಹೇಳಿದ್ದೇನು?

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಲಗ್ಗೆ ಇಟ್ಟ ನಟಿ ರಶ್ಮಿಕಾ ಮಂದಣ್ಣ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಈಗ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೊಡವ ಸಮುದಾಯದಿಂದ ಸಿನಿಮಾಗೆ ಬಂದವರಲ್ಲಿ ನಾನೇ ಮೊದಲು ಎಂದು ಹೇಳುವ ಮೂಲಕ ಮತ್ತೊಂದು ವಿವಾದ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಬರ್ಖಾ ದತ್ ಅವರಿಗೆ ರಶ್ಮಿಕಾ ಮಂದಣ್ಣ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ತಮ್ಮನ್ನು ತಾವು ಹೊಗಳಿಕೊಳ್ಳುವ ಭರದಲ್ಲಿ, ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದ ಏಕೈಕ […]
ರಶ್ಮಿಕಾಗೆ ಸೂಕ್ತ ಭದ್ರತೆ ನೀಡಲು ಕೊಡವ ಕೌನ್ಸಿಲ್ ಒತ್ತಾಯ: ಕೊಡಗಿನ ಬೆಡಗಿ ಪರ ನಿಂತ ಖ್ಯಾತ ನಟಿಯರು

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೊಡಗಿನ ಬೆಡಗಿ. ಇವರು ಅಭಿನಯಿಸಿದ ಮೊದಲ ಚಿತ್ರ ಕನ್ನಡದ್ದು. ಆದರೆ ರಶ್ಮಿಕಾ ಕನ್ನಡ ಸರಿಯಾಗಿ ಮಾತಾಡಲ್ಲ, ಹೈದರಾಬಾದ್ ನನ್ನ ಊರು ಅಂತ ಹೇಳಿದ್ದಕ್ಕೆ ವಿಪರೀತ ಟ್ರೋಲ್ಗೆ ಗುರಿಯಾಗುತ್ತಿದ್ದಾರೆ. ಶಾಸಕ ರವಿಕುಮಾರ್ ಅವರಂತೂ ರಶ್ಮಿಕಾ ಮಂದಣ್ಣಗೆ ಸರಿಯಾಗಿ ಬುದ್ಧಿ ಕಲಿಸಬೇಕು ಎಂದು ಬೆದರಿಕೆ ಧ್ವನಿಯಲ್ಲಿ ಹೇಳಿದ್ದರು. ಇದೀಗ ರಶ್ಮಿಕಾ ಮಂದಣ್ಣ ಬೆಂಬಲಕ್ಕೆ ನಿಂತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ರಶ್ಮಿಕಾಗೆ ಹೆಚ್ಚುವರಿ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. […]