ಕೆಲವು ದಿನದ ಹಿಂದಷ್ಟೇ ರಸ್ತೆ ದುಸ್ಥಿತಿ ಬಗ್ಗೆ ವರದಿ ಮಾಡಿ ಸಾರ್ವಜನಿಕ ಕಾಳಜಿ – ಅದೇ ರಸ್ತೆಯಲ್ಲಿ ಬಿದ್ದು ಗಾಯಗೊಂಡ ಪತ್ರಕರ್ತೆ..!

ಮಡಿಕೇರಿ : ಜಿಲ್ಲೆಯ ಬಹುತೇಕ ಕಡೆ ರಸ್ತೆಗಳ ಸ್ಥಿತಿ ಶೋಚನೀಯವಾಗಿದೆ. ಹಲವೆಡೆ ವಾಹನಗಳು ಸಂಚರಿಸುವುದೇ ದುಸ್ತರವಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪಾಡಂತೂ ಹೇಳತೀರದು. ಒಂದೆಡೆ ಹೊಂಡ ಗುಂಡಿಗಳು ರಸ್ತೆಯನ್ನು ಆವರಿಸಿದ್ದರೆ, ಮತ್ತೊಂದೆಡೆ ಈ ಬಾರಿಯ ನಿರಂತರ ಮಳೆಗೆ ಎಲ್ಲೆಲ್ಲಿಂದೋ ಬಂದು ರಸ್ತೆಯಲ್ಲಿ ಹರಡಿಕೊಂಡಿರುವ ಮಣ್ಣು & ಮರಳಿನ ರಾಶಿ ದ್ವಿಚಕ್ರ ವಾಹನ ಸವಾರರನನು ಯಮಸ್ವರೂಪಿಯಾಗಿ ಕಾಡುತ್ತಿದೆ. ಅದೆಷ್ಟೋ ಮಂದಿ ಹೊಂಡ, ಗುಂಡಿಗಳನ್ನು ತಪ್ಪಿಸಲು ಹೋಗಿ, ಮಣ್ಣು, ಮರಳಿನ ರಾಶಿಯಲ್ಲಿ ವಾಹನ ಜಾರಿದ ಪರಿಣಾಮ ಬಿದ್ದು ಗಾಯಗೊಂಡಿರುವ […]
ಬೇಗೂರು ರಸ್ತೆ ಸಂಪರ್ಕ ಕಡಿತ

ಬೇಗೂರು ರಸ್ತೆ ಸಂಪರ್ಕ ಕಡಿತ ಬಾರೀ ಮಳೆಗೆ ಪೊನ್ನಂಪೇಟೆ ತಾಲೂಕು ಕುಟ್ಟ ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗೂರು ಸಂಪರ್ಕ ರಸ್ತೆ ಕುಸಿದು ಸಂಪರ್ಕ ಕಡಿತಗೊಂಡಿದೆ. ವಿಷಯ ಅರಿತು ಕೂಡಲೇ ಸ್ಪಂದಿಸಿ ಸ್ಥಳ ಕ್ಕೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಡಿ.ಸಿ.ಸಿ. ಪದಾಧಿಕಾರಿಗಳಾದ ಮುಕ್ಕಾಟೀರ ಸಂದಿಪ್, ಚೊಟ್ಟಿಯನಮಾಡ ವಿಶು ರಂಜಿ, ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕಾಳೀಮಾಡ ಪ್ರಶಾಂತ್, ಆಲೇಮಾಡ ಸೋಮಣ್ಣ ಅವರು ತಾತ್ಕಾಲಿಕವಾಗಿ ಕೂಡಲೇ ರಸ್ತೆ ಸರಿಪಡಿಸಿ ಮುಂದಿನ ದಿನಗಳಲ್ಲಿ ಮಳೆ ಕಳೆದ […]
ಅರೆಕಾಡು ಹೊಸ್ಕೇರಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಅರೆಕಾಡು ಹೊಸ್ಕೇರಿ ರಸ್ತೆಯ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ (Dr.Mantar Gowda) ಅವರು ಭೂಮಿಪೂಜೆ ನೆರವೇರಿಸಿದರು.ಕಳೆದ ಕೆಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿತ್ತು. ಹೊಂಡ, ಗುಂಡಿಗಳಿAದ ಕೂಡಿದ್ದ ರಸ್ತೆಯ ಅಭಿವೃದ್ಧಿಗಾಗಿ ಇತ್ತೀಚೆಗೆ “ಕೊಡವ ವೆಲ್ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಹಾಗೂ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಅನುದಾನವನ್ನು ಮೀಸಲಿಟ್ಟು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು […]
ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ, ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ (Bhagamandala) ಸಂಪರ್ಕಿಸುವ ಮಡಿಕೇರಿ (Madikeri) ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್ ಪೊನ್ನಣ್ಣ (A. S. Ponnanna) ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು, ಸುಮಾರು ₹4 ಕೋಟಿ ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ತನಕದ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು. ದಿನವೊಂದಕ್ಕೆ ಸಾವಿರಾರು ಭಕ್ತಾದಿಗಳು ಹಾಗೂ […]
ರಾಷ್ಟ್ರೀಯ ಹೆದ್ದಾರಿಯನ್ನು ನುಂಗುತ್ತಿರುವ ಗಿಡಗಂಟಿಗಳಿಂದ ಕಾದಿದೆ ಅಪಾಯ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಇದು ಕಾಣುತ್ತಿಲ್ಲವೇಕೆ?

ಮಡಿಕೇರಿ : ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (National highway) ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ, ಮತ್ತು ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಕಾರಣದಿಂದ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೆಲವು ದಿನದ ಹಿಂದೆ ತೆರವು ಮಾಡಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಸಲಿಯಾಗಿ ವಾಹನಗಳ ಸಂಚಾರಕ್ಕೆ ತೊಡಕಾಗಿರುವ, ಅಪಘಾತಕ್ಕೆ ಕಾರಣವಾಗಿರುವ ಪ್ರಮುಖ ವಿಚಾರದ ಬಗ್ಗೆ ಅಧಿಕಾಗಳು ಗಮನಹರಿಸದಿರುವ ಬಗ್ಗೆ ಜನರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ(ಮಡಿಕೇರಿ-ಸಂಪಾಜೆ) ವಿವಿಧೆಡೆ ರಸ್ತೆಯನ್ನ ಕಾಡು […]