ಅಖಿಲ ಭಾರತ 72ನೇ ಸಹಕಾರ ಸಪ್ತಾಹ ಸಮಾರೋಪ – ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ

ಮಡಿಕೇರಿ : ಸಹಕಾರ ಸಂಘಗಳ ಬೆಳವಣಿಗೆ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಸಹಕಾರ ಸಂಘಗಳ ಕೊಡುಗೆ ಅಪಾರ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ‘ಉನ್ನತಿ’ […]