ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ವಿರಾಜಪೇಟೆ: ವಿರಾಜಪೇಟೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನವನ್ನು ಅಧ್ಯಯನ ಹಬ್ಬ ಎನ್ನುವ ದೃಷ್ಟಿಕೋನದಿಂದ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ವಿವಿಧ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ನಿಶಾ ರವರು ಮಾತನಾಡಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಇಂದು ವಿದ್ಯಾರ್ಥಿಗಳು […]
ವಿಜ್ಞಾನ ಮತ್ತು ಸೃಜನಾತ್ಮಕತೆಯ ಕಲೆ ಛಾಯಾಗ್ರಹಣ – ಹಿರಿಯ ಛಾಯಾಗ್ರಾಹಕ ರವಿ ಪೊಸವಣಿಕೆ

ಮಡಿಕೇರಿ : ಛಾಯಾಚಿತ್ರ ಎನ್ನುವುದು ಒಂದು ಭಾಷೆ. ಇದು ಸಾವಿರ ಪದಗಳಿಗೆ ಸಮವಾಗಿದ್ದು, ಒಂದು ಚಿತ್ರದ ಮೂಲಕ ಕಥೆಯನ್ನು ಹೇಳಬಹುದು ಎಂದು ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್ಕ್ಲಬ್ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ನಡೆದ ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ […]