ಸಿಐಪಿಯು ವಿದ್ಯಾರ್ಥಿನಿ ಡಿಂಪಲ್ಗೆ ಪ್ರತಿಭಾ ರತ್ನ ಪ್ರಶಸ್ತಿ

ಕರಾಟೆ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು.ಕಾಲೇಜಿನ ಪ್ರಥಮ ಪಿ.ಯು.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಡಿಂಪಲ್ . ಎಸ್. ವಿರಾಜಪೇಟೆ ತಾಲ್ಲೂಕು ಶಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೀಡುವ ಪ್ರತಿಭಾರತ್ನ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಈ ವಿದ್ಯಾರ್ಥಿನಿ ಅರಕಲಗೂಡು ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಫ್ -2025 ರಲ್ಲಿ ಪ್ರಥಮ ಸ್ಥಾನ , ಅಸ್ಮಿತಾ ಖೇಲೋ ಇಂಡಿಯಾ -2025 ಸ್ಪರ್ಧೆಯಲ್ಲಿ […]
ಬಯವಂಡ ರಿಹಾನ್ ಮುತ್ತಣ್ಣಗೆ ತ.ರಾ.ಸು. ಪ್ರಶಸ್ತಿ

ಪೊನ್ನಂಪೇಟೆ: ಬೆಂಗಳೂರಿನ ಜನ್ಮ ಭೂಮಿ ಸಾಂಸ್ಕೃತಿಕ ನಾಗರೀಕ ವೇದಿಕೆಯ ವತಿಯಿಂದ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತ.ರಾ.ಸು. ಪ್ರಶಸ್ತಿಯನ್ನು ಕೊಡಗಿನ ಬಯವಂಡ ರಿಹಾನ್ ಮುತ್ತಣ್ಣ ಪಡೆದುಕೊಂಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕಾರಣ ಈ ಪ್ರಶಸ್ತಿಗೆ ರಿಹಾನ್ ಮುತ್ತಣ್ಣ ಅವರನ್ನು ಆಯ್ಕೆಗೊಳಿಸಲಾಗಿತ್ತು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕೃಷ್ಣದೇವರಾಯ ಕಲಾಮಂದಿರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಿಹಾನ್ ಮುತ್ತಣ್ಣ ಅವರಿಗೆ ಈ […]
ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅರ್ಪಿತಾ ಜಿ. ಎ. ಮಂಡಿಸಿದ್ದ ಮಹಾಪ್ರಬಂಧವನ್ನು ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸೈನ್ಸಸ್ ವಿಭಾಗದಲ್ಲಿ ಅಂಗೀಕರಿಸಿ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಇವರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾರವಾರದ ಇ ಅಂಡ್ ಸಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಎ. ಎಲ್. ಚೂಡಾರತ್ನಾಕರ ಮಾರ್ಗದರ್ಶನದಲ್ಲಿ “Landslide Susceptibility Mapping for Kodagu Region using Machine Learning Techniques” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆಯನ್ನು ಕೈಗೊಂಡು ಮಹಾಪ್ರಬಂಧವನ್ನು ವಿಟಿಯುಗೆ ಸಾಧರಪಡಿಸಿದ್ದಾರೆ. […]
ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ: ವಿದ್ಯಾರ್ಥಿನಿ ನಿಧಿಗೆ ಶಾಸಕರಿಂದ ಸನ್ಮಾನ

ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಮೂಲದವರು. ಇದೀಗ ರಾಷ್ಟ್ರೀಯ ಮಟ್ಟದ ನೀಟ್ (NEET) ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 710 ಅಂಕಗಳನ್ನು ಪಡೆದು ಭಾರತದಲ್ಲಿ 84ನೇ ರ್ಯಾಂಕ್ ಮತ್ತು ಕರ್ನಾಟಕ ರಾಜ್ಯದಲ್ಲಿ ಗೌರವಾನ್ವಿತ 7ನೇ ಸ್ಥಾನವನ್ನು ಪಡೆದು ತಮ್ಮ ಗ್ರಾಮ ಹಾಗೂ ಜಿಲ್ಲೆಯ ಹೆಮ್ಮೆಗಾಗಿರುವ ವಿದ್ಯಾರ್ಥಿನಿ ಕೆ. ಜಿ. ನಿಧಿ ಅವರು ತಮ್ಮ ಈ ಅಪಾರ ಶ್ರದ್ಧೆ, ಪರಿಶ್ರಮ ಹಾಗೂ ಕನಸುಗಳನ್ನು ಪೂರೈಸುವ ದೃಢನಿಶ್ಚಯದಿಂದ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ […]