Crime News : ಪತ್ನಿಯನ್ನು ಹೊಡೆದು ಕೊಂದ ಕ್ರೂರಿ ಪತಿ..!

ಸುಂಟಿಕೊಪ್ಪ : ಪತ್ನಿಯನ್ನು ಪತಿ ಹೊಡೆದು ಹತ್ಯೆಗೈದಿರುವ ಘಟನೆ ಕೊಡಗರಹಳ್ಳಿ ಬಳಿಯ ಅಂದಗೋವೆಯಲ್ಲಿ ನಡೆದಿದೆ. ಲತಾ(45) ಪತಿಯಿಂದ ಹತ್ಯೆಯಾದ ಮಹಿಳೆ. ಅಂದಗೋವೆಯ ಎಸ್ಟೇಟ್ ಒಂದರ ಲೈನ್ಮನೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮುತ್ತ(50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಗಂಡ ಹಂಡತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿ ಲತಾ ಮೇಲೆ ಮುತ್ತ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ವಿಚಾರ ತಿಳಿದು ಹೆಚ್ಚುವರಿ […]
ಕುಶಾಲನಗರ : ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತ

ಕುಶಾಲನಗರ (Kushalnagar) ತಾಲೂಕು, ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದ ನಿವಾಸಿಯಾದ ಪಿ ಬಿ ಗುರುವ ಪೌತಿ ಬಾಬು ಇವರ ವಾಸದ ಮನೆ ಭಾನುವಾರ ಸುರಿದ ಬಾರಿ ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತವಾಗಿದ್ದು ಅಂದಾಜು 30% ಹಾನಿ ಉಂಟಾಗಿದೆ. ಸೋಮವಾರ ಕಂದಾಯ ಪರೀವಿಕ್ಷಕರು ಸುಂಟಿಕೊಪ್ಪ ಹೋಬ ಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಕೂರು ಶಿರಂಗಾಲರವರೊಂದಿಗೆ ಜಂಟಿ ಪರಿಶೀಲಿಸಿದರು.
ಬೆಂಗಳೂರಿನಲ್ಲಿ ಕೊಡಗಿನ ಯುವಕ ಆತ್ಮಹತ್ಯೆ

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಾವತಿರವರ ಪುತ್ರ ಗಗನ್ (21) ಎಂಬುವವರು ನೆನ್ನೆ ರಾತ್ರಿ ಬೆಂಗಳೂರಿನಲ್ಲಿ(Bangalore) ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Sucide)ಮಾಡಿಕೊಂಡಿದ್ದಾರೆ. ತಾಯಿಯ ಮುಖ ನೋಡುವ ಮೊದಲೇ ಇಹಲೋಕ ತ್ಯಜಿಸಿದ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗಗನ್ ರೀಲ್ಸ್ ಕೂಡ ಮಾಡುತ್ತಿದ್ದರು. ಕಳೆದ ಎರಡು ದಿವಸಗಳಿಂದ ತಾಯಿಗೆ ಕರೆ ಮಾಡಿ ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದ ಎನ್ನಲಾಗಿದೆ. […]