ಜನ್ಮದಿನದಂದು ಶಾಸಕ ಪೊನ್ನಣ್ಣ ಶ್ರೀ ಭಗಂಡೇಶ್ವರ – ತಲಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಎ.ಎಸ್.ಪೊನ್ನಣ್ಣ ತಮ್ಮ 51ನೇ ಜನ್ಮದಿನದಂದು ಪತ್ನಿ ಕಾಂಚನ ಅವರೊಂದಿಗೆ ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಅಭಿವೃದ್ಧಿ,ನೆಮ್ಮದಿ,ಸಮೃದ್ದಿ ತರುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅತಿರುದ್ರ ಜಪಯಜ್ಞ ಮೇ 21ರಂದು ಕಣಿವೆಯ ಶ್ರೀರಾಮಲಿಂಗೇಶ್ವರದಲ್ಲಿ ಸಂಪನ್ನ: ಮೇ 20ರಂದು ಮಡಿಕೇರಿಯಲ್ಲಿ ರುದ್ರ ಹೋಮ

ಮಡಿಕೇರಿ : ಲೋಕ ಕಲ್ಯಾಣಕ್ಕಾಗಿ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಜಪಯಜ್ಞ ಸಮಿತಿ ವತಿಯಿಂದ ನಡೆಯುತ್ತಿರುವ ಅತಿರುದ್ರ ಜಪಯಜ್ಞ ಮೇ ೨೧ರಂದು ಕಾವೇರಿ ತೀರದಲ್ಲಿರುವ ಕಣಿವೆಯ ಶ್ರೀರಾಮಲಿಂಗೇಶ್ವರ ಸನ್ನಿಧಿಯಲ್ಲಿ ಸಂಪನ್ನಗೊಳ್ಳಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 21 ರಂದು ಶ್ರೀರಾಮಲಿಂಗೇಶ್ವರ ದೇವಾಲಯದಲ್ಲ್ಲಿ ಶ್ರೀ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜರ ನೇತೃತ್ವದಲ್ಲಿ ಶ್ರೀ ಚಂಡಿಕಾ ಹೋಮ, ಎರಡು ಆವರ್ತದ ಶ್ರೀರುದ್ರ ಜಪ ಹಾಗೂ ಮಹಾ ಪ್ರಸಾದ ವಿನಿಯೋಗ ನಡೆಯಲಿದೆ. ಮೇ 20 […]