ಗುಡ್ಡೆಹೊಸೂರುವಿನಲ್ಲಿ ಲಾರಿ ಹರಿದು ವ್ಯಕ್ತಿ ಸಾವು

Guddehosuru

ಇಂದು ಬೆಳಗ್ಗಿನ ಜಾವ ಲಾರಿಯೊಂದು ವ್ಯಕ್ತಿ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಡ್ಡೆಹೊಸೂರುವಿನಲ್ಲಿ ನಡೆದಿದೆ. ಮೃತನನ್ನು ನಾಪೋಕ್ಲು ಸಮೀಪದ ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಎಂದು ಗುರುತಿಸಲಾಗಿದೆ. ಈತ ಕಳೆದ ರಾತ್ರಿಯಿಂದ ಹೆದ್ದಾರಿ ಬದಿಯಲ್ಲೇ ಅಡ್ಡಾಡುತ್ತಿದ್ದ ಎನ್ನಲಾಗಿದ್ದು, ಇಂದು ಬೆಳಿಗ್ಗೆ ಮೈಸೂರಿನತ್ತ ತೆರಳುತ್ತಿದ್ದ ಲಾರಿ (Truck) ಹರಿದು ಮೃತಾಪಟ್ಟಿದ್ದಾನೆ. ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಾತೂರುವಿನಲ್ಲಿ ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ: ತಾಯಿ ಮಗ ಸ್ಥಳದಲ್ಲೇ ಸಾವು!

Road accident

ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತದಲ್ಲಿ (Road accident) ತಾಯಿ ಮಗ ಸಾವನಪ್ಪಿದ್ದಾರೆ. ಬಿ.ಶೆಟ್ಟಿಗೇರಿ ಅರ್ಚಕರ ಕುಟುಂಬದ ಸುದರ್ಶನ ಬೆಂಗಳೂರುವಿನಲ್ಲಿ ಉದ್ಯಗೋದಲ್ಲಿ ಇದ್ದು ತಾಯಿಯೊಂದಿಗೆ ಗೋಣಿಕೊಪ್ಪಲಿನಿಂದ ಮನೆಗೆ ಸಾಮಾಗ್ರಿಗಳನ್ನು ತೆಗೆದುಕೊಂಡು ತನ್ನ ಓಮ್ನಿ ಕಾರಿನಲ್ಲಿ ಹೋಗುತ್ತಿದ್ದಾಗ ಸಂದರ್ಭ ಈ ಘಟನೆ ನಡೆದಿದೆ. ಕೇರಳ ರಾಜ್ಯದ ಲಾರಿ ಮೈಸೂರಿನತ್ತ ತರಕಾರಿ ಸಾಗಾಟ ಮಾಡಲು ತೆರಳುತ್ತಿತ್ತು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಸುದರ್ಶನ (42) ಹಾಗೂ ತಾಯಿ ಲಲಿತಾ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಓಮಿನಿ ವ್ಯಾನ್ ಸಂಪೂರ್ಣವಾಗಿ […]