ವಾಹನ ಸವಾರರೇ ಗಮನಿಸಿ: ಕೊಡಗಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಮಡಿಕೇರಿ (Madikeri) ಕುಟ್ಟ ಹೆದ್ದಾರಿ ಸಂ-89ರ ಕಿ.ಮೀ. 80.40 ರಲ್ಲಿನ (ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಭಾಗದಲ್ಲಿ ಮಳೆಹಾನಿ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಏಪ್ರಿಲ್, 08 ರಿಂದ ಮೇ, 10 ರವರೆಗೆ ಪೊನ್ನಂಪೇಟೆ ತಾಲ್ಲೂಕು ಮಡಿಕೇರಿ ಕುಟ್ಟ ಹೆದ್ದಾರಿ ಸಂ.89ರ ಕಿ.ಮೀ.80.40 ರಲ್ಲಿನ(ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಮಾರ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ (Vehicle) ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. […]